ಕುಂದಾಪುರ

ಹೆಮ್ಮಾಡಿ:ಲಾರಿ ಮತ್ತು ಟೆಂಪೊ ಮಾಲೀಕರ ಸಂಘದ ಅಂತ್ಯ

Share

ಕುಂದಾಪುರ:ನಮ್ಮ ಸಂಘಟನೆಯ ಕೂಗು ರಾಜ್ಯಕ್ಕೆ ಮುಟ್ಟಿದೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರ ನೇತೃತ್ವದಲ್ಲಿ ಸಭೆ ನಡೆದಿದ್ದು ಸಂಧಾನಕ್ಕೆ ಅಧಿಕಾರಿಗಳು ಒಪ್ಪಿದ್ದಾರೆ ಸಾಕಷ್ಟು ಚರ್ಚೆ ಕೂಡ ಆಗಿದೆ.ನಮ್ಮ ಬೇಡಿಕೆಗೆ ಜಿಲ್ಲಾಡಳಿತ ಸ್ಪಂದಿಸಿದ್ದರಿಂದ ಮುಷ್ಕರದ ಅಂಗವಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಿದ ಲಾರಿಗಳನ್ನು ತೆರವು ಗೊಳಿಸಲಾಗುವುದು ಎಂದು ಲಾರಿ ಮತ್ತು ಟೆಂಪೊ ಮಾಲೀಕರು ಮತ್ತು ಚಾಲಕರ ಸಂಘ ಬೈಂದೂರು ವಲಯದ ಜಂಟಿ ಅಧ್ಯಕ್ಷ ದಿವಾಕರ ಶೆಟ್ಟಿ ನೈಲಾಡಿ ಹೇಳಿದರು.

ಲಾರಿ ಮತ್ತು ಟೆಂಪೊ ಮಾಲೀಕರು ಮತ್ತು ಚಾಲಕರ ಸಂಘ ಬೈಂದೂರು ವಲಯದ ವತಿಯಿಂದ ಹೆಮ್ಮಾಡಿಯಲ್ಲಿ ನಡೆಯುತ್ತಿರುವ ಆರನೇ ದಿನದ ಕಟ್ಟಡ ಸಾಮಾಗ್ರಿ ಸಾಗಾಟದ ವಾಹನಗಳ ಅನಿರ್ದಿಷ್ಟಾವಧಿ ಮುಷ್ಕರದ ಅಂಗವಾಗಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದರು.ಬೇಡಿಕೆಗಳ ಈಡೇರಿಕೆಗಾಗಿ ಹತ್ತು ದಿನಗಳ ಕಾಲದ ಕಾಲವಕಾಶವನ್ನು ಕೇಳಿದ್ದೇವೆ ಮುಂದಿನ ಹತ್ತು ದಿನಗಳ ವರಗೆ ನಮ್ಮ ಬೇಡಿಕೆಗೆ ಜಿಲ್ಲಾಡಳಿತ ಸ್ಪಂದಿಸದೆ ಇದ್ದರೆ ಮತ್ತೆ ಸಂಘಟಿತರಾಗಿ ಹೋರಾಟಕ್ಕೆ ಇಳಿಯಲಾಗುವುದು ಎಂದು ಹೇಳಿದರು.

ಸಂಘದ ಜಂಟಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ ಮಾತನಾಡಿ,ಜಿಪಿಎಸ್ ಅಳವಡಿಕೆ ಕಡ್ಡಾಯ ಮಾಡಿರುವುದರಿಂದ ಲಾರಿಗಳ ಮಾಲೀಕರು ತಮ್ಮ ವಾಹನಗಳಿಗೆ ಜಿಪಿಎಸ್ ಅಳವಡಿಕೆ ಮಾಡಿಕೊಳ್ಳಬೇಕು.ಕೆಂಪು ಕಲ್ಲು ತುಂಬಿದ ಲಾರಿಗಳಿಗೆ ಯಾವುದೆ ರೀತಿಯ ತೊಂದರೆ ಕೊಡಲಾಗದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದರು.ಈ ಸಂದರ್ಭ ರಾಜು ಕುಲಾಲ್ ಆಲೂರು,ರಾಜು ಗಾಣಿಗಾ ತ್ರಾಸಿ,ವಾಸುದೇವ ಸೇರಿಗಾರ್ ಗಂಗೊಳ್ಳಿ,ಗೋಪಾಲ ನಾಯ್ಕ್ ನೆಂಪು,ಸತೀಶ ದೇವಾಡಿಗ ಹೆಮ್ಮಾಡಿ,ಪ್ರವೀಣ್ ಶೆಟ್ಟಿ ನಾರ್ಕಳಿ,ರಾಘವೇಂದ್ರ ಶೆಟ್ಟಿ ಕಾಡೇರಿಮನೆ ಮುಳ್ಳಿಕಟ್ಟೆ,ಸಂಘದ ಸದಸ್ಯರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago