ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪುರಾಣ ಪ್ರಸಿದ್ಧ ಗುಜ್ಜಾಡಿ ಗ್ರಾಮದ ಕೊಡಪಾಡಿಯಲ್ಲಿರುವ ಶ್ರೀ ಗುಹೇಶ್ವರ ದೇವಾಲಯವು ಸಾವಿರಾರು ವರ್ಷಗಳ ಇತಿಹಾಸವನ್ನುಳ್ಳ ದೇವಾಲಯಗಳಲ್ಲಿ ಒಂದಾಗಿದೆ.ಪಡುವಣ ಕಡಲಿನಿಂದ ಆರಂಭಗೊಂಡು ಸೌಪರ್ಣಿಕಾ ನದಿಯಿಂದ ಸುತ್ತುವರಿಯಲ್ಪಟ್ಟ ಗಂಗೊಳ್ಳಿ,ಗುಜ್ಜಾಡಿ,ತ್ರಾಸಿ ಮತ್ತು ಹೊಸಾಡು ಈ ನಾಲ್ಕು ಗ್ರಾಮಗಳ ಗ್ರಾಮದೇವರಾದ ಶ್ರೀ ಗುಹೇಶ್ವರ ಸನ್ನಿಧಾನದಲ್ಲಿ ಜೀರ್ಣೋದ್ಧಾರ ಅಂಗವಾಗಿ ಕೇರಳದ ಪ್ರಸಿದ್ಧ ದೈವಜ್ಞರಾದ ಶ್ರೀ ನಾರಾಯಣ ನಂಬೂದಿರಿ ಕೈಮುಕ್ಕು ಹಾಗೂ ಇತರ ದೈವಜ್ಞರ ಸಹಕಾರದೊಂದಿಗೆ ಅಷ್ಟಮಂಗಲ ಪ್ರಶ್ನೆಯು ಅ.7 ರಂದು ಶನಿವಾರ ದಿಂದ ಆರಂಭಗೊಂಡು ಅ.09 ರ ಸೋಮವಾರ ತನಕ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನ ಸಮಿತಿ ತಿಳಿಸಿದೆ.ಪ್ರಾಶ್ನ ಚಿಂತನಾ ಕಾರ್ಯದಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೋರಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…