ಗಂಗೊಳ್ಳಿ:ಶ್ರೀ ವೀರೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

Share

Advertisement
Advertisement
Advertisement

ಕುಂದಾಪುರ:ಗಂಗೊಳ್ಳಿ-ಕುಂದಾಪುರ ನಡುವೆ ಸಂಪರ್ಕ ಸೇತುವೆ ನಿರ್ಮಾಣ ಶೀಘೃ ಆಗಬೇಕೆಂದು ಸೇತುವೆ ಹೋರಾಟ ಸಮಿತಿ ವತಿಯಿಂದ ಗಂಗೊಳ್ಳಿ ಶ್ರೀವೀರೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
ಸೇತುವೆ ಹೋರಾಟ ಸಮಿತಿ ಅಧ್ಯಕ್ಷ ಉಮಾನಾಥ ದೇವಾಡಿಗ ಮಾತನಾಡಿ,ಗಂಗೊಳ್ಳಿ ಜನತೆಯ ಬಹು ಕಾಲದ ಬೇಡಿಕೆ ಇನ್ನೂ ಕೂಡ ಕನಸಾಗಿಯೇ ಉಳಿದಿದೆ.ಗಂಗೊಳ್ಳಿ-ಕುಂದಾಪುರ ನಡುವೆ ಪಂಚಗಂಗಾವಳಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಿದರೆ ವ್ಯಾಪಾರ ವಹಿವಾಟುಗಳು ವೃದ್ಧಿ ಆಗುವುದ ಜತೆಗೆ ಗ್ರಾಮದ ಜನರಿಗೆ ಬಹಳಷ್ಟು ಅನುಕೂಲ ವಾಗಲಿದೆ ಎಂದರು.ಸೇತುವೆ ನಿರ್ಮಾಣ ಕಾರ್ಯದ ಬಗ್ಗೆ ಜನಪ್ರತಿನಿಧಿಗಳು ಆದಷ್ಟು ಬೇಗನೆ ಸ್ಪಂದನೆ ಮಾಡಬೇಕು.ಸಕಾರಾತ್ಮಕವಾದ ರೀತಿಯಲ್ಲಿ ಸ್ಪಂದಿಸದೆ ಇದ್ದಲ್ಲಿ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದರು.
ಸಮಿತಿ ಉಪಾಧ್ಯಕ್ಷರಾದ ಬಿ.ಗಣೇಶ ಶೆಣೈ,ಪಂಚಾಯಿತಿ ಉಪಾಧ್ಯಕಷೆ ಪ್ರೇಮಾ ಸಿ ಪೂಜಾರಿ, ಕಾರ್ಯದರ್ಶಿ ನವೀನ್ ಗಂಗೊಳ್ಳಿ,ಜತೆ ಕಾರ್ಯದರ್ಶಿ ಗಣೇಶ ಪಿ,ಖಜಾಂಚಿ ಸದಾಶಿವ ಖಾರ್ವಿ ಕಂಚುಗೋಡು,ಗ್ರಾ.ಪಂ ಸದಸ್ಯರಾದ ನಾಗರಾಜ ಖಾರ್ವಿ,ನಿರ್ಮಲಾ ಪೂಜಾರಿ,ಸಮಿತಿ ಪದಾಧಿಕಾರಿಗಳು,ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement


Share

Leave a comment

Your email address will not be published. Required fields are marked *

You cannot copy content of this page