ಕುಂದಾಪುರ:ಗಂಗೊಳ್ಳಿ-ಕುಂದಾಪುರ ನಡುವೆ ಸಂಪರ್ಕ ಸೇತುವೆ ನಿರ್ಮಾಣ ಶೀಘೃ ಆಗಬೇಕೆಂದು ಸೇತುವೆ ಹೋರಾಟ ಸಮಿತಿ ವತಿಯಿಂದ ಗಂಗೊಳ್ಳಿ ಶ್ರೀವೀರೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
ಸೇತುವೆ ಹೋರಾಟ ಸಮಿತಿ ಅಧ್ಯಕ್ಷ ಉಮಾನಾಥ ದೇವಾಡಿಗ ಮಾತನಾಡಿ,ಗಂಗೊಳ್ಳಿ ಜನತೆಯ ಬಹು ಕಾಲದ ಬೇಡಿಕೆ ಇನ್ನೂ ಕೂಡ ಕನಸಾಗಿಯೇ ಉಳಿದಿದೆ.ಗಂಗೊಳ್ಳಿ-ಕುಂದಾಪುರ ನಡುವೆ ಪಂಚಗಂಗಾವಳಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಿದರೆ ವ್ಯಾಪಾರ ವಹಿವಾಟುಗಳು ವೃದ್ಧಿ ಆಗುವುದ ಜತೆಗೆ ಗ್ರಾಮದ ಜನರಿಗೆ ಬಹಳಷ್ಟು ಅನುಕೂಲ ವಾಗಲಿದೆ ಎಂದರು.ಸೇತುವೆ ನಿರ್ಮಾಣ ಕಾರ್ಯದ ಬಗ್ಗೆ ಜನಪ್ರತಿನಿಧಿಗಳು ಆದಷ್ಟು ಬೇಗನೆ ಸ್ಪಂದನೆ ಮಾಡಬೇಕು.ಸಕಾರಾತ್ಮಕವಾದ ರೀತಿಯಲ್ಲಿ ಸ್ಪಂದಿಸದೆ ಇದ್ದಲ್ಲಿ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದರು.
ಸಮಿತಿ ಉಪಾಧ್ಯಕ್ಷರಾದ ಬಿ.ಗಣೇಶ ಶೆಣೈ,ಪಂಚಾಯಿತಿ ಉಪಾಧ್ಯಕಷೆ ಪ್ರೇಮಾ ಸಿ ಪೂಜಾರಿ, ಕಾರ್ಯದರ್ಶಿ ನವೀನ್ ಗಂಗೊಳ್ಳಿ,ಜತೆ ಕಾರ್ಯದರ್ಶಿ ಗಣೇಶ ಪಿ,ಖಜಾಂಚಿ ಸದಾಶಿವ ಖಾರ್ವಿ ಕಂಚುಗೋಡು,ಗ್ರಾ.ಪಂ ಸದಸ್ಯರಾದ ನಾಗರಾಜ ಖಾರ್ವಿ,ನಿರ್ಮಲಾ ಪೂಜಾರಿ,ಸಮಿತಿ ಪದಾಧಿಕಾರಿಗಳು,ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…