ತಲ್ಲೂರು:ಡಾ.ಜಿ ಶಂಕರ್ 68ನೇ ಹುಟ್ಟುಹಬ್ಬ ಆಚರಣೆ
ಕುಂದಾಪುರ:ನಾಡೋಜ ಡಾ.ಜಿ ಶಂಕರ್ ಅವರ 68ನೇ ವರ್ಷದ ಹುಟ್ಟು ಹಬ್ಬವನ್ನು ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ತಲ್ಲೂರು ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಆಚರಿಸಿಸಲಾಯಿತು.
ಮೊಗವೀರ ಯುವ ಸಂಘಟನೆಯ ಹೆಮ್ಮಾಡಿ ಘಟಕದ ಅಧ್ಯಕ್ಷ ಲೋಹಿತ್ ಕುಂದರ್ ಬಾಳಿಕೆರೆ ಅಧ್ಯಕ್ಷತೆ ವಹಿಸಿದ್ದರು.ಮೊಗವೀರ ಮಹಾಜನ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆಯ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ,ಎಂ ಎಂ ಸುವರ್ಣ ಮಾತನಾಡಿ ಶುಭಹಾರೈಸಿದರು.ನಾರಾಯಣ ವಿಶೇಷ ಮಕ್ಕಳ ಶಾಲೆ ಅಧ್ಯಕ್ಷ ಸುರೇಶ್ ತಲ್ಲೂರು,ಬಗ್ವಾಡಿ ಸ್ತ್ರೀಶಕ್ತಿ ಅಧ್ಯಕ್ಷೆ ಶ್ಯಾಮಲಾ ಚಂದನ್,ಜಿ.ಪಂ ಮಾಜಿ ಸದಸ್ಯೆ ಶೋಭಾ ಜಿ ಪುತ್ರನ್,ಕಾರ್ಯದರ್ಶಿ ಪ್ರಭಾಕರ ಸೇನಾಪುರ,ಉಪಾಧ್ಯಕ್ಷ ರಾಜು ಶ್ರೀಯಾನ್ ಗುಜ್ಜಾಡಿ,ಕೋಶಾಧಿಕಾರಿ ದಿನೇಶ್ ಕಾಂಚನ್ ಬಾಳಿಕೆರೆ,ಮೊಗವೀರ ಮಹಾಜನ ಸಂಘ ಬಗ್ವಾಡಿ ಹೋಬಳಿ ಸದಸ್ಯರು ಉಪಸ್ಥಿತರದ್ದರು.ಹೆಮ್ಮಾಡಿ ಯುವ ಘಟಕದ ಕಾರ್ಯದರ್ಶಿ ಪ್ರವೀಣ್ ಮೊಗವೀರ ಗಂಗೊಳ್ಳಿ ನಿರೂಪಿಸಿದರು.ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು.