ಕುಂದಾಪುರ

ಇಸ್ರೇಲ್‍ನಲ್ಲಿ ಕರಾವಳಿ ಕನ್ನಡಿಗರು ಸುರಕ್ಷಿತ

Share

Advertisement
Advertisement
Advertisement

ಕುಂದಾಪುರ:ಇಸ್ರೇಲ್ ಸೇನಾಪಡೆ ಮತ್ತು ಹಮಾಸ್ ಉಗ್ರರ ನಡುವೆ ನಡೆಯುತ್ತಿರುವ ಕದನ ತೀವೃಗೊಳ್ಳುತ್ತಿರುವ ನಡುವೆ ಕರಾವಳಿ ಭಾಗದಲ್ಲಿ ಆತಂಕ ಎದುರಾಗಿದೆ.ಉಡುಪಿ ಮತ್ತು ಮಂಗಳೂರು ಜಿಲ್ಲೆಯ ಭಾಗ ಒಂದರಲ್ಲೇ ಅಂದಾಜು 2000 ಕ್ಕೂ ಅಧಿಕ ಮಂದಿ ಇಸ್ರೇಲ್‍ನಲ್ಲಿ ಉದ್ಯೋಗವನ್ನು ಮಾಡುತ್ತಿದ್ದಾರೆ.ಇಸ್ರೇಲ್‍ನಲ್ಲಿ ಯುದ್ದದ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಕುಟುಂಬಸ್ಥರಲ್ಲಿ ಒಂದು ರೀತಿಯ ಭಯದ ವಾತಾವರಣ ನಿರ್ಮಾಣವಾಗಿದ್ದು.ತಮ್ಮ ಮಕ್ಕಳ ಯೋಗ ಕ್ಷೇಮದ ಬಗ್ಗೆ ಚಿಂತಿಸುವಂತೆ ಆಗಿದೆ.

Advertisement


ಯುದ್ದದ ಭೀತಿ ಉಂಟಾಗಿದ್ದ ಇಸ್ರೇಲ್-ಗಾಜಾಪಟ್ಟಿಯಿಂದ ಸುಮಾರು 90 ಕಿ.ಮೀ ದೂರದಲ್ಲಿ ವಾಸಮಾಡುತ್ತಿರುವ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಮೂವತ್ತು ಮುಡಿ ನಿವಾಸಿ ಶಶಿ ಪೂಜಾರಿ ಅವರು ಇಲ್ಲಿ ಹೇಳಿಕೊಳ್ಳುವಂತಹ ಭಯದ ವಾತಾವರಣ ಏನು ಇಲ್ಲಾ.ನಾವೆಲ್ಲ ಸುರಕ್ಷತೆಯಿಂದ ಇದ್ದೇವೆ.ಇಸ್ರೇಲ್ ಸರಕಾರ ದಿಟ್ಟ ತನದಿಂದ ಹಮಾಸ್ ಉಗ್ರರನ್ನು ಸದೆ ಬಡಿಯುವ ಕೆಲಸ ಮಾಡುತ್ತಿದ್ದೆ.ನಾವು ಎಂದಿನಂತೆ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದು ಯಾವುದೆ ರೀತಿಯ ಜೀವಕ್ಕೆ ಹಾನಿ ಆಗುವಂತಹ ಭಯದ ವಾತಾವರಣ ವಿಲ್ಲದೆ ನಿರ್ಭೀತಿಯಿಂದ ಇದ್ದೇವೆ.ಗಡಿ ಒಳಗೆ ನುಗ್ಗಿದ ಹಮಾಸ್ ಬಂಡುಕೊರರನ್ನು ಕ್ಲಿಯರ್ ಮಾಡುವಂತ ಕೆಲಸ ಸೇನೆ ಮಾಡುತ್ತಿದೆ.ಯಾರು ಕೂಡ ನಮ್ಮ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ,ನಮ್ಮ ಬಗ್ಗೆ ಕಾಳಜಿಯನ್ನು ವಹಿಸುತ್ತಿರುವ ಭಾರತ ಸರಕಾರ ಮತ್ತು ನಾಡಿನ ಜನತೆಗೆ ಧನ್ಯವಾದವನ್ನು ಅವರು ತಿಳಿಸಿದ್ದಾರೆ.
ಯುದ್ದದ ಭೀತಿಯ ನಡುವೆಯು ಕರಾವಳಿ ಭಾಗದ ಕನ್ನಡಿಗರು ಸುರಕ್ಷತೆ ಯಿಂದ ಇದ್ದಾರೆ ಎನ್ನುವ ವಿಚಾರ ಖುಷಿಯ ಸಂಗತಿ ಆಗಿದೆ.

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

2 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

3 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

6 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

7 days ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

7 days ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago