ಕುಂದಾಪುರ

ಇಸ್ರೇಲ್‍ನಲ್ಲಿ ಕರಾವಳಿ ಕನ್ನಡಿಗರು ಸುರಕ್ಷಿತ

Share

ಕುಂದಾಪುರ:ಇಸ್ರೇಲ್ ಸೇನಾಪಡೆ ಮತ್ತು ಹಮಾಸ್ ಉಗ್ರರ ನಡುವೆ ನಡೆಯುತ್ತಿರುವ ಕದನ ತೀವೃಗೊಳ್ಳುತ್ತಿರುವ ನಡುವೆ ಕರಾವಳಿ ಭಾಗದಲ್ಲಿ ಆತಂಕ ಎದುರಾಗಿದೆ.ಉಡುಪಿ ಮತ್ತು ಮಂಗಳೂರು ಜಿಲ್ಲೆಯ ಭಾಗ ಒಂದರಲ್ಲೇ ಅಂದಾಜು 2000 ಕ್ಕೂ ಅಧಿಕ ಮಂದಿ ಇಸ್ರೇಲ್‍ನಲ್ಲಿ ಉದ್ಯೋಗವನ್ನು ಮಾಡುತ್ತಿದ್ದಾರೆ.ಇಸ್ರೇಲ್‍ನಲ್ಲಿ ಯುದ್ದದ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಕುಟುಂಬಸ್ಥರಲ್ಲಿ ಒಂದು ರೀತಿಯ ಭಯದ ವಾತಾವರಣ ನಿರ್ಮಾಣವಾಗಿದ್ದು.ತಮ್ಮ ಮಕ್ಕಳ ಯೋಗ ಕ್ಷೇಮದ ಬಗ್ಗೆ ಚಿಂತಿಸುವಂತೆ ಆಗಿದೆ.


ಯುದ್ದದ ಭೀತಿ ಉಂಟಾಗಿದ್ದ ಇಸ್ರೇಲ್-ಗಾಜಾಪಟ್ಟಿಯಿಂದ ಸುಮಾರು 90 ಕಿ.ಮೀ ದೂರದಲ್ಲಿ ವಾಸಮಾಡುತ್ತಿರುವ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಮೂವತ್ತು ಮುಡಿ ನಿವಾಸಿ ಶಶಿ ಪೂಜಾರಿ ಅವರು ಇಲ್ಲಿ ಹೇಳಿಕೊಳ್ಳುವಂತಹ ಭಯದ ವಾತಾವರಣ ಏನು ಇಲ್ಲಾ.ನಾವೆಲ್ಲ ಸುರಕ್ಷತೆಯಿಂದ ಇದ್ದೇವೆ.ಇಸ್ರೇಲ್ ಸರಕಾರ ದಿಟ್ಟ ತನದಿಂದ ಹಮಾಸ್ ಉಗ್ರರನ್ನು ಸದೆ ಬಡಿಯುವ ಕೆಲಸ ಮಾಡುತ್ತಿದ್ದೆ.ನಾವು ಎಂದಿನಂತೆ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದು ಯಾವುದೆ ರೀತಿಯ ಜೀವಕ್ಕೆ ಹಾನಿ ಆಗುವಂತಹ ಭಯದ ವಾತಾವರಣ ವಿಲ್ಲದೆ ನಿರ್ಭೀತಿಯಿಂದ ಇದ್ದೇವೆ.ಗಡಿ ಒಳಗೆ ನುಗ್ಗಿದ ಹಮಾಸ್ ಬಂಡುಕೊರರನ್ನು ಕ್ಲಿಯರ್ ಮಾಡುವಂತ ಕೆಲಸ ಸೇನೆ ಮಾಡುತ್ತಿದೆ.ಯಾರು ಕೂಡ ನಮ್ಮ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ,ನಮ್ಮ ಬಗ್ಗೆ ಕಾಳಜಿಯನ್ನು ವಹಿಸುತ್ತಿರುವ ಭಾರತ ಸರಕಾರ ಮತ್ತು ನಾಡಿನ ಜನತೆಗೆ ಧನ್ಯವಾದವನ್ನು ಅವರು ತಿಳಿಸಿದ್ದಾರೆ.
ಯುದ್ದದ ಭೀತಿಯ ನಡುವೆಯು ಕರಾವಳಿ ಭಾಗದ ಕನ್ನಡಿಗರು ಸುರಕ್ಷತೆ ಯಿಂದ ಇದ್ದಾರೆ ಎನ್ನುವ ವಿಚಾರ ಖುಷಿಯ ಸಂಗತಿ ಆಗಿದೆ.

Advertisement

Share
Team Kundapur Times

Recent Posts

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

3 days ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 weeks ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

4 weeks ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

1 month ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

1 month ago

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ:ವಿನಿಶ್ ಕುಮಾರ್,ಅನ್ವಿಶ್ ಕುಮಾರ್ ಗೆ ಪ್ರಥಮ ಸ್ಥಾನ

ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…

1 month ago