ಕುಂದಾಪುರ:ಇಸ್ರೇಲ್ ಸೇನಾಪಡೆ ಮತ್ತು ಹಮಾಸ್ ಉಗ್ರರ ನಡುವೆ ನಡೆಯುತ್ತಿರುವ ಕದನ ತೀವೃಗೊಳ್ಳುತ್ತಿರುವ ನಡುವೆ ಕರಾವಳಿ ಭಾಗದಲ್ಲಿ ಆತಂಕ ಎದುರಾಗಿದೆ.ಉಡುಪಿ ಮತ್ತು ಮಂಗಳೂರು ಜಿಲ್ಲೆಯ ಭಾಗ ಒಂದರಲ್ಲೇ ಅಂದಾಜು 2000 ಕ್ಕೂ ಅಧಿಕ ಮಂದಿ ಇಸ್ರೇಲ್ನಲ್ಲಿ ಉದ್ಯೋಗವನ್ನು ಮಾಡುತ್ತಿದ್ದಾರೆ.ಇಸ್ರೇಲ್ನಲ್ಲಿ ಯುದ್ದದ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಕುಟುಂಬಸ್ಥರಲ್ಲಿ ಒಂದು ರೀತಿಯ ಭಯದ ವಾತಾವರಣ ನಿರ್ಮಾಣವಾಗಿದ್ದು.ತಮ್ಮ ಮಕ್ಕಳ ಯೋಗ ಕ್ಷೇಮದ ಬಗ್ಗೆ ಚಿಂತಿಸುವಂತೆ ಆಗಿದೆ.
ಯುದ್ದದ ಭೀತಿ ಉಂಟಾಗಿದ್ದ ಇಸ್ರೇಲ್-ಗಾಜಾಪಟ್ಟಿಯಿಂದ ಸುಮಾರು 90 ಕಿ.ಮೀ ದೂರದಲ್ಲಿ ವಾಸಮಾಡುತ್ತಿರುವ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಮೂವತ್ತು ಮುಡಿ ನಿವಾಸಿ ಶಶಿ ಪೂಜಾರಿ ಅವರು ಇಲ್ಲಿ ಹೇಳಿಕೊಳ್ಳುವಂತಹ ಭಯದ ವಾತಾವರಣ ಏನು ಇಲ್ಲಾ.ನಾವೆಲ್ಲ ಸುರಕ್ಷತೆಯಿಂದ ಇದ್ದೇವೆ.ಇಸ್ರೇಲ್ ಸರಕಾರ ದಿಟ್ಟ ತನದಿಂದ ಹಮಾಸ್ ಉಗ್ರರನ್ನು ಸದೆ ಬಡಿಯುವ ಕೆಲಸ ಮಾಡುತ್ತಿದ್ದೆ.ನಾವು ಎಂದಿನಂತೆ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದು ಯಾವುದೆ ರೀತಿಯ ಜೀವಕ್ಕೆ ಹಾನಿ ಆಗುವಂತಹ ಭಯದ ವಾತಾವರಣ ವಿಲ್ಲದೆ ನಿರ್ಭೀತಿಯಿಂದ ಇದ್ದೇವೆ.ಗಡಿ ಒಳಗೆ ನುಗ್ಗಿದ ಹಮಾಸ್ ಬಂಡುಕೊರರನ್ನು ಕ್ಲಿಯರ್ ಮಾಡುವಂತ ಕೆಲಸ ಸೇನೆ ಮಾಡುತ್ತಿದೆ.ಯಾರು ಕೂಡ ನಮ್ಮ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ,ನಮ್ಮ ಬಗ್ಗೆ ಕಾಳಜಿಯನ್ನು ವಹಿಸುತ್ತಿರುವ ಭಾರತ ಸರಕಾರ ಮತ್ತು ನಾಡಿನ ಜನತೆಗೆ ಧನ್ಯವಾದವನ್ನು ಅವರು ತಿಳಿಸಿದ್ದಾರೆ.
ಯುದ್ದದ ಭೀತಿಯ ನಡುವೆಯು ಕರಾವಳಿ ಭಾಗದ ಕನ್ನಡಿಗರು ಸುರಕ್ಷತೆ ಯಿಂದ ಇದ್ದಾರೆ ಎನ್ನುವ ವಿಚಾರ ಖುಷಿಯ ಸಂಗತಿ ಆಗಿದೆ.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…