ಕುಂದಾಪುರ:ಇಸ್ರೇಲ್ ಸೇನಾಪಡೆ ಮತ್ತು ಹಮಾಸ್ ಉಗ್ರರ ನಡುವೆ ನಡೆಯುತ್ತಿರುವ ಕದನ ತೀವೃಗೊಳ್ಳುತ್ತಿರುವ ನಡುವೆ ಕರಾವಳಿ ಭಾಗದಲ್ಲಿ ಆತಂಕ ಎದುರಾಗಿದೆ.ಉಡುಪಿ ಮತ್ತು ಮಂಗಳೂರು ಜಿಲ್ಲೆಯ ಭಾಗ ಒಂದರಲ್ಲೇ ಅಂದಾಜು 2000 ಕ್ಕೂ ಅಧಿಕ ಮಂದಿ ಇಸ್ರೇಲ್ನಲ್ಲಿ ಉದ್ಯೋಗವನ್ನು ಮಾಡುತ್ತಿದ್ದಾರೆ.ಇಸ್ರೇಲ್ನಲ್ಲಿ ಯುದ್ದದ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಕುಟುಂಬಸ್ಥರಲ್ಲಿ ಒಂದು ರೀತಿಯ ಭಯದ ವಾತಾವರಣ ನಿರ್ಮಾಣವಾಗಿದ್ದು.ತಮ್ಮ ಮಕ್ಕಳ ಯೋಗ ಕ್ಷೇಮದ ಬಗ್ಗೆ ಚಿಂತಿಸುವಂತೆ ಆಗಿದೆ.
ಯುದ್ದದ ಭೀತಿ ಉಂಟಾಗಿದ್ದ ಇಸ್ರೇಲ್-ಗಾಜಾಪಟ್ಟಿಯಿಂದ ಸುಮಾರು 90 ಕಿ.ಮೀ ದೂರದಲ್ಲಿ ವಾಸಮಾಡುತ್ತಿರುವ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಮೂವತ್ತು ಮುಡಿ ನಿವಾಸಿ ಶಶಿ ಪೂಜಾರಿ ಅವರು ಇಲ್ಲಿ ಹೇಳಿಕೊಳ್ಳುವಂತಹ ಭಯದ ವಾತಾವರಣ ಏನು ಇಲ್ಲಾ.ನಾವೆಲ್ಲ ಸುರಕ್ಷತೆಯಿಂದ ಇದ್ದೇವೆ.ಇಸ್ರೇಲ್ ಸರಕಾರ ದಿಟ್ಟ ತನದಿಂದ ಹಮಾಸ್ ಉಗ್ರರನ್ನು ಸದೆ ಬಡಿಯುವ ಕೆಲಸ ಮಾಡುತ್ತಿದ್ದೆ.ನಾವು ಎಂದಿನಂತೆ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದು ಯಾವುದೆ ರೀತಿಯ ಜೀವಕ್ಕೆ ಹಾನಿ ಆಗುವಂತಹ ಭಯದ ವಾತಾವರಣ ವಿಲ್ಲದೆ ನಿರ್ಭೀತಿಯಿಂದ ಇದ್ದೇವೆ.ಗಡಿ ಒಳಗೆ ನುಗ್ಗಿದ ಹಮಾಸ್ ಬಂಡುಕೊರರನ್ನು ಕ್ಲಿಯರ್ ಮಾಡುವಂತ ಕೆಲಸ ಸೇನೆ ಮಾಡುತ್ತಿದೆ.ಯಾರು ಕೂಡ ನಮ್ಮ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ,ನಮ್ಮ ಬಗ್ಗೆ ಕಾಳಜಿಯನ್ನು ವಹಿಸುತ್ತಿರುವ ಭಾರತ ಸರಕಾರ ಮತ್ತು ನಾಡಿನ ಜನತೆಗೆ ಧನ್ಯವಾದವನ್ನು ಅವರು ತಿಳಿಸಿದ್ದಾರೆ.
ಯುದ್ದದ ಭೀತಿಯ ನಡುವೆಯು ಕರಾವಳಿ ಭಾಗದ ಕನ್ನಡಿಗರು ಸುರಕ್ಷತೆ ಯಿಂದ ಇದ್ದಾರೆ ಎನ್ನುವ ವಿಚಾರ ಖುಷಿಯ ಸಂಗತಿ ಆಗಿದೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…