ಕುಂದಾಪುರ

ಕಂಪ್ಯೂಟರ್ ತರಬೇತಿ ಕೇಂದ್ರ:ಲೈಬ್ರರಿ,ಪೀಠೋಪಕರಣ ಹಸ್ತಾಂತರ

Share

ಬೈಂದೂರು:ಸಮೃದ್ಧ ಬೈಂದೂರು ಯೋಜನೆಯ ಭಾಗವಾಗಿ ಸ್ವಯಂ ಸ್ಪೂರ್ತಿ ಫೌಂಡೇಶನ್ ಬೆಂಗಳೂರು ವತಿಯಿಂದ ಸ.ಹಿ.ಪ್ರಾ ಶಾಲೆ ಬಿಜೂರು,ಸ.ಹಿ.ಪ್ರಾ ಶಾಲೆ ಕಾಲ್ತೋಡು ಹಾಗೂ ಸ.ಹಿ.ಪ್ರಾ ಶಾಲೆ ಜಡ್ಕಲ್ ನಲ್ಲಿ ನಿರ್ಮಿಸಿದ
ಕಂಪ್ಯೂಟರ್ ಲ್ಯಾಬ್ ಮತ್ತು ಗ್ರಂಥಾಲಯಗಳನ್ನು ಒಳಗೊಂಡ ಸ್ವಯಂ ಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ‌ ಅವರು ಉದ್ಘಾಟಿಸಿ,ಪುಸ್ತಕ ಕ್ರೀಡಾ ಸಾಮಾಗ್ರಿಗಳನ್ನು ಹಸ್ತಾಂತರ ಮಾಡಿದರು.ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕರು ಸಮೃದ್ಧ ಬೈಂದೂರು ಪರಿಕಲ್ಪನೆ ಯೋಜನೆಯ ಬಗ್ಗೆ ಹಾಗೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 300 ಟ್ರೀಸ್ ಕಾರ್ಯಕ್ರಮದ ಕುರಿತು ವಿವರಿಸಿದರು.ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳು,ಊರವರು ಎಸ್.ಡಿ.ಎಂ.ಸಿ ಮತ್ತು ಶಿಕ್ಷಕರು ಪ್ರಮುಖ ಪಾತ್ರ ವಹಿಸಬೇಕು ಎಂದರು.
ಸ್ವಯಂಸ್ಪೂರ್ತಿ ಫೌಂಡೇಶನ್ ಅಧ್ಯಕ್ಷ ನಾಗರಾಜ ಶೆಟ್ಟಿ ಜಡ್ಕಲ್ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಕಲಿಕಾ ಸ್ನೇಹಿ ವಾತಾವರಣ ನಿರ್ಮಿಸುವ ಉದ್ದೇಶದಿಂದ,ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕೆನ್ನುವ ಮಹತ್ವಾಕಾಂಕ್ಷೆಯಿಂದ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಸ್ಥಾಪಿಸಲಾಗಿದೆ ಹಾಗೂ ಇದರ ಸದುಪಯೋಗವನ್ನು ಎಲ್ಲ ವಿದ್ಯಾರ್ಥಿಗಳು ಶಿಕ್ಷಕರ ಸಹಾಯದಿಂದ ಪಡೆಯ ಬೇಕು ಎಂದರು.ನಮ್ಮ ಸಂಸ್ಥೆಯು ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರು, ಸರ್ವ ಸದಸ್ಯರು,ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು, ಸ್ವಯಂಸ್ಪೂರ್ತಿ ಫೌಂಡೇಶನ್ ಪದಾಧಿಕಾರಿಗಳು ಹಾಗೂ ಊರವರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

3 days ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 weeks ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

4 weeks ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

1 month ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

1 month ago

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ:ವಿನಿಶ್ ಕುಮಾರ್,ಅನ್ವಿಶ್ ಕುಮಾರ್ ಗೆ ಪ್ರಥಮ ಸ್ಥಾನ

ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್‍ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…

1 month ago