ಬೈಂದೂರು:ಆರಂಭಿಕ ಹಂತದಲ್ಲೆ ಕ್ಯಾನ್ಸರ್ಗೆ ಸೂಕ್ತ ಚಿಕಿತ್ಸೆಯನ್ನು ನೀಡುವುದರಿಂದ ಗುಣ ಪಡಿಸಲು ಸಾಧ್ಯವಿದೆ ಎಂದು ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಅಂಕಾಲಜಿಯ ತಜ್ಞ ವೈದ್ಯ ಡಾ.ಹೇಮಂತ ಕುಮಾರ್ ಹೇಳಿದರು.
ಸಾಧನಾ ವೇದಿಕೆ ಮರವಂತೆ,ಪ್ರಾಥಮಿಕ ಆರೋಗ್ಯ ಕೇಂದ್ರ,ಆಸರೆ ಚಾರಿಟಬಲ್ ಟ್ರಸ್ಟ್, ಸ್ನೇಹಾ ಮಹಿಳಾ ಮಂಡಳಿ,ಹೋಲಿ ಫ್ಯಾಮಿಲಿ,ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್,ಚೇತನಾ ಚಿಕಿತ್ಸಾಲಯ ಅವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಸಾಧನಾ ಸಮುದಾಯ ಭವನದಲ್ಲಿ ನಡೆದ ಕ್ಯಾನ್ಸರ್ ಕಾಯಿಲೆ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಸ್ತನ ಮತ್ತು ಗರ್ಭಕೋಶ ಕ್ಯಾನ್ಸರ್ ಬಗ್ಗೆ ವಹಿಸಬೇಕಾದ ಎಚ್ಚರಿಕೆ ಬಗ್ಗೆ ಮಾಹಿತಿಯನ್ನು ನೀಡಲಾಯಿತು.ಉದಯಶಂಕರ ಭಟ್, ಮಂಜುನಾಥ ಮಧ್ಯಸ್ಥ,ಅನಿತಾ ಆರ್.ಕೆ,ಮಾನಸ ಅವಭೃತ,ದಯಾನಂದ ಬಳೆಗಾರ್, ಉಷಾ ಆಲ್ಮೇಡ,ಸೀತಾ ಜೋಗಿ,ಶ್ರೀಮತಿ ಆಚಾರ್ಯ ಕ್ಯಾನ್ಸರ್ ಕಾಯಿಲೆ ಕುರಿತು ಪ್ರಶ್ನೆಗಳನ್ನು ಕೇಳಿದರು.
ಸಾಧನಾ ಅಧ್ಯಕ್ಷ ಜೇಕ್ಸನ್ ಡಿಸೋಜ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಡಾ. ರೂಪಶ್ರೀ ಸ್ವಾಗತಿಸಿದರು.ಮರವಂತೆ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ.ಕೆ.ಗಣೇಶ ಭಟ್ಟ ಪ್ರಾಸ್ತವಿಕವಾಗಿ ಮಾತನಾಡಿದರು.ಸಾಧನಾ ಸದಸ್ಯ ಜಿ. ಸೀತಾರಾಮ ಮಡಿವಾಳ ವಂದಿಸಿದರು.ದೇವಿದಾಸ ಶ್ಯಾನುಭಾಗ್ ನಿರೂಪಿಸಿದರು.
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…