ಕುಂದಾಪುರ

ಮೂಡು ತಾರಿಬೇರು ಶಾಲೆಯಲ್ಲಿ ರಂಗ ಮಂಟಪ ನಿರ್ಮಾಣಕ್ಕೆ ಆಗ್ರಹ

Share

ಕುಂದಾಪುರ:ಬೈಂದೂರು ವಿಧಾನ ಸಭಾ ಕ್ಷೇತ್ರದ ಆಲೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಮೂಡು ತಾರಿಬೇರು ಶಾಲೆಯಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ತರಗತಿ ಕೋಣೆಗಳನ್ನು ಅವಲಂಬಿಸ ಬೇಕಾದ ಅನಿವಾರ್ಯತೆ ಇದೆ.ಮಕ್ಕಳ ಪ್ರತಿಭೆಯನ್ನು ಹೊರ ಜಗತ್ತಿಗೆ ತೋರ್ಪಡಿಸಲು ಸರಿಯಾದ ವೇದಿಕೆ ಇಲ್ಲದೆ ಇರುವುದರಿಂದ ರಂಗ ಮಂದಿರ ನಿರ್ಮಾಣ ಮಾಡ ಬೇಕ್ಕೆನ್ನುವುದು ಮಕ್ಕಳ ಪೋಷಕರ ಬೇಡಿಕೆ ಆಗಿದೆ.
ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಕ್ಕೆ ಹೊಂದಿಕೊಂಡಿರುವ ಕಾಂಡಚಿನ ಊರಾದ ಆಲೂರು ಗ್ರಾಮದ ಮೂಡು ತಾರಿಬೇರು ಶಾಲೆಯಲ್ಲಿ 1 ರಿಂದ 5 ನೇ ತರಗತಿ ವರೆಗೆ ಮಕ್ಕಳು ವಿದ್ಯಾಭ್ಯಾಸವನ್ನು ಮಾಡತ್ತಿದ್ದಾರೆ.ಶಾಲೆಯಲ್ಲಿ ಮಕ್ಕಳ ಸಂಖ್ಯೆ ಇದ್ದರು ಸರಿಯಾದ ರೀತಿಯಲ್ಲಿ ಮೂಲ ಸೌಕರ್ಯದ ಸೌಲಭ್ಯಗಳಿಲ್ಲ.ಪೇಟೆ ಪ್ರದೇಶದಿಂದ ಸರಿ ಸುಮಾರು 40.ಕಿಮೀ ನಷ್ಟು ದೂರ ವಿರುವ ಮೂಡು ತಾರಿಬೇರು ಭಾಗಕ್ಕೆ ಸರಕಾರಿ ಶಾಲೆಗಳೆ ಪ್ರಮುಖ ವಿದ್ಯಾ ಕೇಂದ್ರಗಳಾಗಿವೆ.ಕೃಷಿ ಮತ್ತು ಕೂಲಿ ಕಾರ್ಮಿಕರ ಮಕ್ಕಳೆ ಹೆಚ್ಚಾಗಿ ಹೊಗುವ ಸರಕಾರಿ ಶಾಲೆಗಳ ಉನ್ನತೀಕರಣಕ್ಕೆ ಸಂಬಂಸಿದ ಇಲಾಖೆ ಮತ್ತು ಸರಕಾರ ಹೆಚ್ಚಿನ ಒತ್ತನ್ನು ನೀಡಬೇಕಾಗಿದೆ.
ಕಾಂಡಚಿನ ಮಕ್ಕಳ ಪ್ರತಿಭೆಗೆ ಬೇಕಿದೆ ಪ್ರೆÇೀತ್ಸಾಹ:ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದತ್ಯೆಗಳನ್ನು ನೀಡಿದಾಗ ಮಾತ್ರ ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆಯಲು ಸಾಧ್ಯವಿದೆ.ಮಕ್ಕಳ ಒಳಗೆ ಅಡಗಿರುವ ಪ್ರತಿಭೆ ಹೊರ ಬರಲು ಸೂಕ್ತವಾದ ವೇದಿಕೆ ಮುಖ್ಯವಾಗಿದೆ.ಮೂಡು ತಾರಿಬೇರು ಶಾಲೆಯಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ತರಗತಿ ಕೋಣೆಗಳ ಒಳಗೆ ಆಯೋಜನೆ ಮಾಡಬೇಕಾದ ಪರಿಸ್ಥಿತಿ.ಶಾಲೆ ಮಕ್ಕಳ ಹಿತದೃಷ್ಟಿಯಿಂದ ರಂಗ ಮಂಟಪ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕ್ಕೆನ್ನುವುದು ಗ್ರಾಮಸ್ಥರ ಆಗ್ರಹವಾಗಿದೆ.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

4 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago