ಕುಂದಾಪುರ

ರಾಜ್ಯ ಮಟ್ಟದ ಕರೋಕೆ ಗಾಯನ ಸ್ಪರ್ಧೆ,ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

Share

ಕುಂದಾಪುರ:ಸಂಗೀತ ಕೇಳುವುದರಿಂದ ಕಿವಿಗೆ ಇಂಪು ನೀಡುವುದರ ಜತೆಗೆ ದೇಹದಲ್ಲಿ ಖುಷಿಯ ಹಾರ್ಮೋನ್‍ಗಳು ಉತ್ಪತ್ತಿಯಾಗಿ ಮನಸ್ಸು ಲವಲವಿಕೆಯಿಂದ ಕೂಡಿರಲು ಸಹಕರಿಸುತ್ತದೆ.ಮನವು ಖಿನ್ನತೆಯಿಂದ ಕೂಡಿದ್ದಾಗ ಸಂಗೀತ ಕೇಳುವುದರಿಂದ ಒತ್ತಡ ನಿವಾರಣೆಯನ್ನು ಮಾಡಿಕೊಳ್ಳಬಹುದಾಗಿದೆ.ಸಂಗೀತಕ್ಕೆ ಮಾನಸಿಕ ಒತ್ತಡವನ್ನು ಹೊಗಲಾಡಿಸುವ ತಾಕತ್ತು ಇದೆ ಎಂದು ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ ಕೆ ಹೇಳಿದರು.
ಶ್ರೀದುರ್ಗಾಪರಮೇಶ್ವರಿ ಕಲಾನಿಕೇತನ ಸಂಗೀತ ಶಾಲೆ ಮಸ್ಕಿ-ನಾವುಂದ ವತಿಯಿಂದ ಹಿಂದು ಅಭ್ಯುದಯ ಶ್ರೀಮಾಂಗಲ್ಯ ಮಹಾಗಣಪತಿ ಮಂಟಪ ನಾವುಂದದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಕರೋಕೆ ಗಾಯನ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೂರಾರು ವರ್ಷಗಳ ಕಾಲದ ಇತಿಹಾಸವನ್ನು ಹೊಂದಿರುವ ಸಂಗೀತ ಕ್ಷೇತ್ರ ಉಳಿಯಬೇಕಾದರೆ ಇಂದಿನ ಯುವ ಪೀಳಿಗೆಗೆ ಸಂಗೀತದಲ್ಲಿರುವ ನಾನಾ ಪ್ರಕಾರಗಳನ್ನು ಪರಿಚಯಿಸುವ ಕೆಲಸ ಮಾಡಬೇಕಾಗಿದೆ.ಪಾಠದ ಜತೆಗೆ ಸಂಗೀತಭ್ಯಾಸ ಮಾಡುವುದರಿಂದ ಜ್ಞಾಪಕ ಶಕ್ತಿಯನ್ನು ವೃದ್ಧಿಗೊಳಿಸಬಹು ಎಂದು ಹೇಳಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಹಿಂದುಸ್ಥಾನಿ ಸಂಗೀತ ಗುರುಗಳಾದ ವಿದ್ವಾನ್ ಶರತ್ ನಾಡ ಮಾತನಾಡಿ,ಸಂಗೀತ ಕ್ಷೇತ್ರದಲ್ಲಿ ಕಲಿಕೆ ಎನ್ನುವುದು ನಿರಂತರವಾದ್ದದು ಯಾವುದೇ ರೀತಿಯ ಅಧ್ಯಾಯನ ಮಾಡುವಾಗ ಅದರ ಸೂಕ್ಷ್ಮತೆಯನ್ನು ತಿಳಿದುಕೊಳ್ಳುವುದು ಅತಿ ಮುಖ್ಯ ಎಂದರು.


ನಾವುಂದ ಗ್ರಾ.ಪಂ ಅಧ್ಯಕ್ಷ ನರಸಿಂಹ ದೇವಾಡಿ,ಹಿಂದು ಅಭ್ಯುದಯ ಸಂಘ ನಾವುಂದ ಉಪಾದ್ಯಕ್ಷ ಪ್ರವೀಣ್,ಮಂಜುನಾಥ ಸಾಲಿಯಾನ್ ತ್ರಾಸಿ,ತೀರ್ಪುಗಾರರಾದ ವಿನೀಶ್ ಭಾರಧ್ವಾಜ್,ಅಪೂರ್ವ ಅವಭೃತ ಉಪಸ್ಥಿತರಿದ್ದರು.ಹರೀಶ್ ಗೌಡ ಸ್ವಾಗತಿಸಿದರು.ಶಿಕ್ಷಕ ಮಹಾಬಲ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು.ನಾಗರಾಜ ದೇವಳಿ ನಿರೂಪಿಸಿದರು.ಅಂತಿಮ ಸುತ್ತಿನ ಕರೋಕೆ ರಾಜ್ಯ ಮಟ್ಟದ ಸಂಗೀತ ಸ್ಪರ್ಧೆಯಲ್ಲಿ ರಾಜ್ಯದ ನಾನಾ ಜಿಲ್ಲೆಗಳಿಂದ 25ಕ್ಕೂ ಅಧಿಕ ಸಂಗೀತ ವಿದ್ಯಾರ್ಥಿಗಳು ಭಾಗವಹಿಸಿದ್ದರು

ವಿದ್ವಾನ್ ದಿ.ಅನಂತ ಹೆಬ್ಬಾರ್‍ಗೆ ಪುಷ್ಪ ನಮನ
ಶ್ರೀದುರ್ಗಾಪರಮೇಶ್ವರಿ ಕಲಾನಿಕೇತನ ಸಂಗೀತ ಶಾಲೆ ಮಸ್ಕಿ ನಾವುಂದ ವತಿಯಿಂದ ಭಾನುವಾರ ನಾವುಂದದಲ್ಲಿ ನಡೆದ ರಾಜ್ಯ ಮಟ್ಟದ ಕರೋಕೆ ಗಾಯನ ಸ್ಪರ್ಧೆಯಲ್ಲಿ ವಿದ್ವಾನ್ ದಿ.ಅನಂತ ಹೆಬ್ಬಾರ್ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಮಿಸಲಾಯಿತು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago