ಪ್ರಮುಖ

ನಾಡ:ಅಂಬಾ ಎಲೆಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್ಸ್, ಫರ್ನಿಚರ್ ಶೋ ರೂಂ ಉದ್ಘಾಟನೆ

Share

ಕುಂದಾಪುರ:ನಾಡ ಗುಡ್ಡೆಯಂಗಡಿ ಎಸ್.ಪಿ ಪಾರ್ಕ್ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಶುಭಾರಂಭ ಗೊಂಡಿರುವ ಅಂಬಾ ಶೋರೂಂ ಉದ್ಘಾಟನಾ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಂಗಳವಾರ ಅದ್ದೂರಿಯಾಗಿ ನಡೆಯಿತು.

ಅಂಬಾ ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ಸ್ ಮತ್ತು ಫರ್ನಿಚರ್ ಶೋ ರೂಂ ಮಾಲೀಕರಾದ ವಿಶ್ವನಾಥ ಶೆಟ್ಟಿ ಕೋಟೆಮಕ್ಕಿ ಮಾತನಾಡಿ,
ನಾಡಗುಡ್ಡೆಯಂಗಡಿಯಲ್ಲಿ ಕಳೆದ 15 ವರ್ಷಗಳಿಂದ ಎಲೇಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್ಸ್ ಮತ್ತು ಫರ್ನಿಚರ್ ಉತ್ಪನ್ನಗಳ ಮಾರಾಟವನ್ನು ಮಾಡಿಕೊಂಡು ಬರಲಾಗುತ್ತಿದೆ,ಇದೀಗ ನೂತನ ವಿನ್ಯಾಸದೊಂದಿಗೆ ಶೋರೂಂ ಅನ್ನು ನಿರ್ಮಾಣ ಮಾಡಲಾಗಿದ್ದು
ನವರಾತ್ರಿ ಉತ್ಸವದ ಶುಭ ಸಂದರ್ಭದಲ್ಲಿ ಶುಭಾರಂಭಗೊಂಡಿದೆ.ಹಬ್ಬದ ಪ್ರಯುಕ್ತ ವಿಶೇಷವಾಗಿ ಗ್ರಾಹಕರಿಗೆ ರಿಯಾಯಿತಿ ಮತ್ತು ಆಕರ್ಷಕ ಬೆಲೆಯಲ್ಲಿ ಗ್ರಹ ಬಳಕೆ ವಸ್ತುಗಳನ್ನು ನೀಡಲಾಗುತ್ತಿದೆ.ನಮ್ಮ ನೆಚ್ಚಿನ ಗ್ರಾಹಕರು ನಮ್ಮನ್ನು ಪ್ರೋತ್ಸಾಹಿಸಬೇಕೆಂದು ಕೇಳಿಕೊಂಡರು.ಅಮರ ಶೆಟ್ಟಿ ಕೋಟೆಮಕ್ಕಿ ಮಾತನಾಡಿ,ರೀಯಾತಿ ದರದಲ್ಲಿ ವಿವಿಧ ರೀತಿಯ ಆಫರ್ ಗಳನ್ನು ನೀಡಲಾಗಿದೆ ಗ್ರಾಹಕರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು,ಎಂದಿನಂತೆ ಗ್ರಾಹಕರು ನಮಗೆ ಬೆಂಬಲ ನೀಡಬೇಕು ಎಂದರು.

ಅಂಬಾ ಸುಧಾಕರ ಶೆಟ್ಟಿ ನೂತನವಾಗಿ ನಿರ್ಮಿಸಿರುವ ಶೋರೂಂ ಅನ್ನು ಉದ್ಘಾಟಿಸಿ ಶುಭಹಾರೈಸಿದರು,ಎಸ್ ಪಿ ಪಾರ್ಕ್ ಮಾಲೀಕರಾದ ವಿಜಯ ಕುಮಾರ್ ಶೆಟ್ಟಿ, ಸತೀಶ ಶೆಟ್ಟಿ ಯಳೂರು,ಶಂಕರ ಶೆಟ್ಟಿ ಬೆಳ್ಳಾಡಿ, ಸತೀಶ ಎಂ ನಾಯಕ್, ಶರತ್ ಕುಮಾರ್ ಶೆಟ್ಟಿ ಕೋಟೆಮಕ್ಕಿ,ನಾಣು ಶೆಟ್ಟಿ ಸಂಸಾಡಿ, ಜೀವನ್ ಶೆಟ್ಟಿ, ಸುತನ್ ಶೆಟ್ಟಿ,ಸಂದೀಪ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

1 month ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago