ಕುಂದಾಪುರ

ನಾಡ:ಎಸ್ ಪಿ ಪಾರ್ಕ್ ನೂತನ ವಾಣಿಜ್ಯ ಸಂಕೀರ್ಣ ಉದ್ಘಾಟನೆ

Share

Advertisement
Advertisement
Advertisement

ಕುಂದಾಪುರ:ಸಕಲ ಸೌಲಭ್ಯಗಳೊಂದಿಗೆ
ನಾಡಗುಡ್ಡೆಯಂಗಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಎಸ್ ಪಿ ಪಾರ್ಕ್ ವಾಣಿಜ್ಯ ಸಂಕೀರ್ಣದ ಉದ್ಘಾಟನಾ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಕಟ್ಟಡದ ಉದ್ಘಾಟನೆಯ ಕಾರ್ಯಕ್ರಮದ ಪ್ರಯುಕ್ತ ಪುರೋಹಿತರ ಮಾರ್ಗದರ್ಶನದಲ್ಲಿ ಸುದರ್ಶನ ಹೋಮ,ವಾಸ್ತು ಪೂಜೆ, ಗಣಹೋಮ,ಸತ್ಯನಾರಾಯಣ ಪೂಜೆ ಜರುಗಿತು.

Advertisement

ಮಾಹಾರಾಜ ಸ್ವಾಮಿ ಮರವಂತೆ ದೇವಸ್ಥಾನ ಆಡಳಿತ ಮೊಕ್ತೇಸರರಾದ ಸತೀಶ್ ಎಂ ನಾಯಕ್ ಮಾತನಾಡಿ,ನಾಡ ಗುಡ್ಡೆಯಂಗಡಿಯಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ
ಎಸ್ ಪಿ ಪಾರ್ಕ್ ನಲ್ಲಿ ಎಲ್ಲಾ ರೀತಿಯ ಮಳಿಗೆಗಳು ಕಾರ್ಯಾಚರಣೆ ಮಾಡುತ್ತಿರುವುದರಿಂದ ಒಂದೇ ಸೂರಿನಡಿ ಸಕಲ ಸೌಲಭ್ಯಗಳು ಸಿಗಲಿದೆ.ಗ್ರಾಮೀಣ ಪ್ರದೇಶದಲ್ಲಿ ವಾಣಿಜ್ಯ ಸಂಕೀರ್ಣಗಳು,ಸಣ್ಣ ಸಣ್ಣ ಕೈಗಾರಿಕೆಗಳು ನಿರ್ಮಾಣ ವಾಗುವುದ ರಿಂದ ಗ್ರಾಮೀಣಾಭಿವೃದ್ಧಿ ಆಗುವುದರ ಜೊತೆಗೆ ಸ್ಥಳೀಯವಾಗಿ‌ ಜನರಿಗೆ ಸೌಲಭ್ಯಗಳು ಸಿಗಲು ಸಹಕಾರಿ ಆಗುತ್ತದೆ ಎಂದು ಹೇಳಿದರು.ಎಸ್ ಪಿ ಪಾರ್ಕ್ ವಾಣಿಜ್ಯ ಸಂಕೀರ್ಣದ ಮಾಲೀಕರಾದ ವಿಜಯ ಕುಮಾರ್ ಶೆಟ್ಟಿ ಮತ್ತು ದಂಪತಿಗಳ ಮಕ್ಕಳಾದ ಶ್ರುತಿ ಮತ್ತು ಪುನೀತ್ ಜಂಟಿಯಾಗಿ ಉದ್ಘಾಟಿಸಿದರು.
ಈ ಸಂದರ್ಭ ಎಸ್ ಪಿ ಪಾರ್ಕ್ ಮಾಲೀಕರಾದ ವಿಜಯಕುಮಾರ್ ಶೆಟ್ಟಿ,ಚಂದ್ರಾವತಿ ಶೆಟ್ಟಿ ಬಡಾಕೆರೆ,ದಿನೇಶ್ ಶೆಟ್ಟಿ,ಕರುಣಾಕರ ಶೆಟ್ಟಿ,ಸಂಜು ಶೆಟ್ಟಿ ವಕ್ಕೇರಿ,ಅನಿಲ್ ಶೆಟ್ಟಿ ವಕ್ಕೇರಿ,ಅನುಜಾ ಶೆಟ್ಟಿ ವಕ್ಕೇರಿ, ಹರೀಶ್ ಶೆಟ್ಟಿ ವಕ್ಕೇರಿ, ಕರುಣಾಕರ ಶೆಟ್ಟಿ ವಕ್ಕೇರಿ, ಶರತ್ ಕುಮಾರ್ ಶೆಟ್ಟಿ ಆಲೂರು,ವಿಶ್ವನಾಥ ಶೆಟ್ಟಿ ಮತ್ತು ಅವರ ಸ್ನೇಹಿತರು ಉಪಸ್ಥಿತರಿದ್ದರು.

Advertisement
Advertisement

Share
Team Kundapur Times

Recent Posts

ಶ್ರೀ ಕೃಷ್ಣಾನಂದತೀರ್ಥಮಹಾಸ್ವಾಮಿ ಗೋಪಾಲಕೃಷ್ಣ ದೇವಸ್ಥಾನಕ್ಕೆ ಭೇಟಿ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…

1 week ago

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ “ಐಕ್ಯಂ” 2k25 ಕಾರ್ಯಕ್ರಮ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…

1 week ago

ಯುವಕ ಮಂಡಲ ತ್ರಾಸಿ 59ನೇ ವಾರ್ಷಿಕೋತ್ಸವ ಸಂಭ್ರಮ

ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…

2 weeks ago

ಕೃಷ್ಣ ಮಠ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ

ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…

2 weeks ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕ ಕ್ರೀಡಾಕೂಟ 2024-2025

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…

2 weeks ago

ಸ್ಕೈಡೈನಿಂಗ್ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಸಚಿವ

ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…

3 weeks ago