ಕುಂದಾಪುರ:ಸಕಲ ಸೌಲಭ್ಯಗಳೊಂದಿಗೆ
ನಾಡಗುಡ್ಡೆಯಂಗಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಎಸ್ ಪಿ ಪಾರ್ಕ್ ವಾಣಿಜ್ಯ ಸಂಕೀರ್ಣದ ಉದ್ಘಾಟನಾ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಕಟ್ಟಡದ ಉದ್ಘಾಟನೆಯ ಕಾರ್ಯಕ್ರಮದ ಪ್ರಯುಕ್ತ ಪುರೋಹಿತರ ಮಾರ್ಗದರ್ಶನದಲ್ಲಿ ಸುದರ್ಶನ ಹೋಮ,ವಾಸ್ತು ಪೂಜೆ, ಗಣಹೋಮ,ಸತ್ಯನಾರಾಯಣ ಪೂಜೆ ಜರುಗಿತು.
ಮಾಹಾರಾಜ ಸ್ವಾಮಿ ಮರವಂತೆ ದೇವಸ್ಥಾನ ಆಡಳಿತ ಮೊಕ್ತೇಸರರಾದ ಸತೀಶ್ ಎಂ ನಾಯಕ್ ಮಾತನಾಡಿ,ನಾಡ ಗುಡ್ಡೆಯಂಗಡಿಯಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ
ಎಸ್ ಪಿ ಪಾರ್ಕ್ ನಲ್ಲಿ ಎಲ್ಲಾ ರೀತಿಯ ಮಳಿಗೆಗಳು ಕಾರ್ಯಾಚರಣೆ ಮಾಡುತ್ತಿರುವುದರಿಂದ ಒಂದೇ ಸೂರಿನಡಿ ಸಕಲ ಸೌಲಭ್ಯಗಳು ಸಿಗಲಿದೆ.ಗ್ರಾಮೀಣ ಪ್ರದೇಶದಲ್ಲಿ ವಾಣಿಜ್ಯ ಸಂಕೀರ್ಣಗಳು,ಸಣ್ಣ ಸಣ್ಣ ಕೈಗಾರಿಕೆಗಳು ನಿರ್ಮಾಣ ವಾಗುವುದ ರಿಂದ ಗ್ರಾಮೀಣಾಭಿವೃದ್ಧಿ ಆಗುವುದರ ಜೊತೆಗೆ ಸ್ಥಳೀಯವಾಗಿ ಜನರಿಗೆ ಸೌಲಭ್ಯಗಳು ಸಿಗಲು ಸಹಕಾರಿ ಆಗುತ್ತದೆ ಎಂದು ಹೇಳಿದರು.ಎಸ್ ಪಿ ಪಾರ್ಕ್ ವಾಣಿಜ್ಯ ಸಂಕೀರ್ಣದ ಮಾಲೀಕರಾದ ವಿಜಯ ಕುಮಾರ್ ಶೆಟ್ಟಿ ಮತ್ತು ದಂಪತಿಗಳ ಮಕ್ಕಳಾದ ಶ್ರುತಿ ಮತ್ತು ಪುನೀತ್ ಜಂಟಿಯಾಗಿ ಉದ್ಘಾಟಿಸಿದರು.
ಈ ಸಂದರ್ಭ ಎಸ್ ಪಿ ಪಾರ್ಕ್ ಮಾಲೀಕರಾದ ವಿಜಯಕುಮಾರ್ ಶೆಟ್ಟಿ,ಚಂದ್ರಾವತಿ ಶೆಟ್ಟಿ ಬಡಾಕೆರೆ,ದಿನೇಶ್ ಶೆಟ್ಟಿ,ಕರುಣಾಕರ ಶೆಟ್ಟಿ,ಸಂಜು ಶೆಟ್ಟಿ ವಕ್ಕೇರಿ,ಅನಿಲ್ ಶೆಟ್ಟಿ ವಕ್ಕೇರಿ,ಅನುಜಾ ಶೆಟ್ಟಿ ವಕ್ಕೇರಿ, ಹರೀಶ್ ಶೆಟ್ಟಿ ವಕ್ಕೇರಿ, ಕರುಣಾಕರ ಶೆಟ್ಟಿ ವಕ್ಕೇರಿ, ಶರತ್ ಕುಮಾರ್ ಶೆಟ್ಟಿ ಆಲೂರು,ವಿಶ್ವನಾಥ ಶೆಟ್ಟಿ ಮತ್ತು ಅವರ ಸ್ನೇಹಿತರು ಉಪಸ್ಥಿತರಿದ್ದರು.
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…