ಕುಂದಾಪುರ:ಸಕಲ ಸೌಲಭ್ಯಗಳೊಂದಿಗೆ
ನಾಡಗುಡ್ಡೆಯಂಗಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಎಸ್ ಪಿ ಪಾರ್ಕ್ ವಾಣಿಜ್ಯ ಸಂಕೀರ್ಣದ ಉದ್ಘಾಟನಾ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಕಟ್ಟಡದ ಉದ್ಘಾಟನೆಯ ಕಾರ್ಯಕ್ರಮದ ಪ್ರಯುಕ್ತ ಪುರೋಹಿತರ ಮಾರ್ಗದರ್ಶನದಲ್ಲಿ ಸುದರ್ಶನ ಹೋಮ,ವಾಸ್ತು ಪೂಜೆ, ಗಣಹೋಮ,ಸತ್ಯನಾರಾಯಣ ಪೂಜೆ ಜರುಗಿತು.
ಮಾಹಾರಾಜ ಸ್ವಾಮಿ ಮರವಂತೆ ದೇವಸ್ಥಾನ ಆಡಳಿತ ಮೊಕ್ತೇಸರರಾದ ಸತೀಶ್ ಎಂ ನಾಯಕ್ ಮಾತನಾಡಿ,ನಾಡ ಗುಡ್ಡೆಯಂಗಡಿಯಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ
ಎಸ್ ಪಿ ಪಾರ್ಕ್ ನಲ್ಲಿ ಎಲ್ಲಾ ರೀತಿಯ ಮಳಿಗೆಗಳು ಕಾರ್ಯಾಚರಣೆ ಮಾಡುತ್ತಿರುವುದರಿಂದ ಒಂದೇ ಸೂರಿನಡಿ ಸಕಲ ಸೌಲಭ್ಯಗಳು ಸಿಗಲಿದೆ.ಗ್ರಾಮೀಣ ಪ್ರದೇಶದಲ್ಲಿ ವಾಣಿಜ್ಯ ಸಂಕೀರ್ಣಗಳು,ಸಣ್ಣ ಸಣ್ಣ ಕೈಗಾರಿಕೆಗಳು ನಿರ್ಮಾಣ ವಾಗುವುದ ರಿಂದ ಗ್ರಾಮೀಣಾಭಿವೃದ್ಧಿ ಆಗುವುದರ ಜೊತೆಗೆ ಸ್ಥಳೀಯವಾಗಿ ಜನರಿಗೆ ಸೌಲಭ್ಯಗಳು ಸಿಗಲು ಸಹಕಾರಿ ಆಗುತ್ತದೆ ಎಂದು ಹೇಳಿದರು.ಎಸ್ ಪಿ ಪಾರ್ಕ್ ವಾಣಿಜ್ಯ ಸಂಕೀರ್ಣದ ಮಾಲೀಕರಾದ ವಿಜಯ ಕುಮಾರ್ ಶೆಟ್ಟಿ ಮತ್ತು ದಂಪತಿಗಳ ಮಕ್ಕಳಾದ ಶ್ರುತಿ ಮತ್ತು ಪುನೀತ್ ಜಂಟಿಯಾಗಿ ಉದ್ಘಾಟಿಸಿದರು.
ಈ ಸಂದರ್ಭ ಎಸ್ ಪಿ ಪಾರ್ಕ್ ಮಾಲೀಕರಾದ ವಿಜಯಕುಮಾರ್ ಶೆಟ್ಟಿ,ಚಂದ್ರಾವತಿ ಶೆಟ್ಟಿ ಬಡಾಕೆರೆ,ದಿನೇಶ್ ಶೆಟ್ಟಿ,ಕರುಣಾಕರ ಶೆಟ್ಟಿ,ಸಂಜು ಶೆಟ್ಟಿ ವಕ್ಕೇರಿ,ಅನಿಲ್ ಶೆಟ್ಟಿ ವಕ್ಕೇರಿ,ಅನುಜಾ ಶೆಟ್ಟಿ ವಕ್ಕೇರಿ, ಹರೀಶ್ ಶೆಟ್ಟಿ ವಕ್ಕೇರಿ, ಕರುಣಾಕರ ಶೆಟ್ಟಿ ವಕ್ಕೇರಿ, ಶರತ್ ಕುಮಾರ್ ಶೆಟ್ಟಿ ಆಲೂರು,ವಿಶ್ವನಾಥ ಶೆಟ್ಟಿ ಮತ್ತು ಅವರ ಸ್ನೇಹಿತರು ಉಪಸ್ಥಿತರಿದ್ದರು.
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…