ಕುಂದಾಪುರ

ಅರಾಟೆಯಲ್ಲಿ ಖಾಸಗಿ ಬಸ್ ಪಲ್ಟಿ:20ಕ್ಕೂ ಅಧಿಕ ಮಂದಿಗೆ ಗಾಯ

Share

ಕುಂದಾಪುರ:ಅತಿ ವೇಗದಿಂದ ಸಾಗುತ್ತಿದ್ದ ಖಾಸಗಿ ಬಸ್‍ವೊಂದು ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 66 ರ ಅರಾಟೆ ಎಂಬಲ್ಲಿ ಹೈಮಾಸ್ಟ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಪಕ್ಕದ ರಸ್ತೆಯಲ್ಲಿ ಉರುಳಿ ಬಿದ್ದ ಘಟನೆ ಬುಧವಾರ ರಾತ್ರಿ ನಡೆದಿದೆ.ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆ ಸೇರಿದಂತೆ ಸುಮಾರು 20 ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು,ಗಾಯಾಳುಗಳನ್ನು ಕುಂದಾಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಕುಂದಾಪುರದಿಂದ ಪ್ರಯಾಣಿಕರನ್ನು ತುಂಬಿಸಿ ಕೊಂಡು ರಾಷ್ಟ್ರೀಯ ಹೆದ್ದಾರಿ 66 ರ ಮುಳ್ಳಿಕಟ್ಟೆ ಮಾರ್ಗದಿಂದ ಬೈಂದೂರು ಕಡೆಗೆ ಸಾಗುತ್ತಿದ್ದಾಗ ಬಸ್ ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ಕಳೆದು ಕೊಂಡು ಅರಾಟೆಯಲ್ಲಿ ಹೆಮಾಸ್ಟ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿದ್ದೆ.ಅಪಘಾತದ ಹೊಡೆತಕ್ಕೆ ಬಸ್ ಸಂಪೂರ್ಣ ಜಖಂಗೊಂಡಿದೆ.ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ 20 ಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದೆ.ಪವಾಡದೃಶವಶಾತ್ ಎಂಬಂತೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬಾರಿ ದೊಡ್ಡ ದುರಂತ ವೊಂದು ತಪ್ಪಿದ ಘಟನೆ ಅರಾಟೆಯಲ್ಲಿ ಸಂಭವಿಸಿದೆ.


ಹೆಮಾಸ್ಟ್ ವಿದ್ಯುತ್ ಕಂಬ ಬುಡ ಸಮೇತ ಕಿತ್ತು ಬಿದ್ದು ಮುದ್ದಿಯಾಗಿದೆ.ಕ್ರೆನ್ ಸಹಾಯದಿಂದ ರಸ್ತೆ ಮೇಲೆ ಪಲ್ಟಿಯಾಗಿ ಬಿದ್ದ ಬಸ್‍ನ್ನು ತೆರವು ಮಾಡಲಾಯಿತು ರಾಷ್ಟ್ರೀಯ ಹೆದ್ದಾರಿ ಮೇಲೆ ಬಸ್ ಪಲ್ಟಿಯಾಗಿ ಬಿದ್ದಿದ್ದರಿಂದ ಅರಾಟೆಯಿಂದ ಹೆಮ್ಮಾಡಿ,ಅರಾಟೆಯಿಂದ ತ್ರಾಸಿ ವರೆಗೆ ಸುಮಾರು 3.ಕಿ.ಮೀ ವರೆಗೆ ಟ್ರಾಪಿಕ್ ಜಾಮ್ ಉಂಟಾಯಿತು.ಗಂಗೊಳ್ಳಿ ಪೊಲೀಸ್ ಠಾಣೆಯ ಪಿಎಸ್‍ಐ ಹರೀಶ್ ಆರ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಟ್ರಾಪಿಕ್ ಜಾಮ್ ಸಡಿಲಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಸ್ಥಳೀಯರು ಸಹರಿಸಿದರು.ಇಬ್ರಾಹಿಂ ಗಂಗೊಳ್ಳಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲು ಸಹಕರಿಸಿದ್ದರು.

Advertisement

Share
Team Kundapur Times

Recent Posts

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

3 weeks ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

4 weeks ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

1 month ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

2 months ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

2 months ago