ಕುಂದಾಪುರ:ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್ ವತಿಯಿಂದ ಕುಂದಗನ್ನಡ ಉತ್ಸವ 2023 ಕಾರ್ಯಕ್ರಮ ಅ.29 ರಂದು ದುಬೈನ ಅಜ್ಮಾನ್ನಲ್ಲಿ ನಡೆಯಲಿದೆ.ಪ್ರಥಮ ಬಾರಿಗೆ ಶ್ರೀ ಕ್ಷೇತ್ರ ಮಂದಾರ್ತಿ ಮೇಳದವರಿಂದ ಯಕ್ಷಗಾನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು ಉತ್ಸವದಲ್ಲಿ ಅಪರೂಪದ ಸಾಧಕರನ್ನು ಗೌರವಿಸಿ ಕುಂದಾಪುರ ರತ್ನ ಪ್ರಶಸ್ತಿಯನ್ನು ನೀಡಲಾಗುವುದು ಎಂದು ರಘುರಾಮ ದೇವಾಡಿಗ ಆಲೂರು ಹೇಳಿದರು.
ತ್ರಾಸಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ದುಬೈನಲ್ಲಿ ವಾಸವಾಗಿರುವ ಕುಂದಗನ್ನಡಿಗರ ಸಹಾಯ ಹಾಗೂ ದಾನಿಗಳ ಸಹಕಾರದಿಂದ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್ ವತಿಯಿಂದ ಈ ವರ್ಷ ದುಬೈನಲ್ಲಿ ಕುಂದಗನ್ನಡ ಉತ್ಸವ ಆಯೋಜನೆ ಮಾಡಲಾಗಿದೆ.ವಿಶಿಷ್ಟ ರೀತಿಯಲ್ಲಿ ಸಾಧನೆಯನ್ನು ಮಾಡಿರುವ ನಾಟಿ ವೈದ್ಯ ಮ್ಯಾಕ್ಸಿಮ್ ಒಲಿವೆರಾ ಪಡುಕೋಣೆ,ಗೋಪ್ರೇಮಿ ಸಂಜೀವ ದೇವಾಡಿಗ ಹಾಗೂ ಜೀವ ರಕ್ಷಕ ಮುಳುಗುತಜ್ಞ ದಿನೇಶ್ ಖಾರ್ವಿ ಗಂಗೊಳ್ಳಿ ಅವರಿಗೆ ಕುಂದಾಪುರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುದೆಂದು ತಿಳಿಸಿದರು.
ಪ್ರಕರ್ತ ಅರುಣ್ ಶಿರೂರು ಮಾತನಾಡಿ,ಅರಬ್ ದೇಶದಲ್ಲಿ ಕನ್ನಡ ಸಂಘವನ್ನು ಕಟ್ಟಿಕೊಂಡು ಕನ್ನಡ ನಾಡುನುಡಿ ಉಳುವಿನ ಬಗ್ಗೆ ಕಾರ್ಯಚಟುವಟಿಕೆಗಳನ್ನು ಮಾಡುತ್ತಿರುವುದು ಮಾತ್ರವಲ್ಲದೆ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಪ್ ಸಮಾಜಿಕ,ಶೈಕ್ಷಣಿಕ ಚಟುವಟಿಕೆಗಳಿಗೂ ಹೆಚ್ಚಿನ ಒತ್ತನ್ನು ನೀಡುತ್ತಾ ಬಂದಿದೆ ಎಂದರು.ಈ ಸಂದರ್ಭ ಸಂಘದ ಸದಸ್ಯರಾದ ಶೀನ ದೇವಾಡಿಗ,ಸುಧಾಕರ ಆಚಾರ್ಯ,ತಮ್ಮಯ್ಯ ದೇವಾಡಿಗ ಉಪಸ್ಥಿತರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…