ಕುಂದಾಪುರ

ಚರ್ಮರೋಗ ಮಾರಣಾಂತಿಕ ಕಾಯಿಲೆ ಅಲ್ಲದಿದ್ದರೂ ನಿರ್ಲಕ್ಷಿಸ ಬಾರದು- ಡಾ.ಕೆ.ಪ್ರೇಮಾನಂದ

Share

ಕುಂದಾಪುರ:ಚರ್ಮರೋಗ ಮಾರಣಾಂತಿಕ ಕಾಯಿಲೆ ಅಲ್ಲದಿದ್ದರೂ ನಿರ್ಲಕ್ಷಿಸುವುದು ಸರಿಯಲ್ಲ.ಕಾಯಿಲೆ ಇನ್ನಷ್ಟು ಉಲ್ಬಣಗೊಂಡಾಗ ದೇಹದ ಅನ್ಯ ವ್ಯವಸ್ಥೆಗಳ ಮೇಲೂ ಪ್ರಭಾವಬೀರಿ ಸಮಸ್ಯೆ ಸೃಷ್ಟಿ ಆಗುತ್ತದೆ ಎಂದು ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ.ಕೆ.ಪ್ರೇಮಾನಂದ ಹೇಳಿದರು.
ಜಿಲ್ಲಾ ಪಂಚಾಯತ್ ಉಡುಪಿ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಕುಷ್ಠರೋಗ ನಿರ್ಮೂಲನ ವಿಭಾಗ,ತಾಲೂಕು ಆರೋಗ್ಯ ಇಲಾಖೆ,ಸಾಧನಾ ಜನಾರ್ದನ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ನಡೆದ ಚರ್ಮರೋಗ ಚಿಕಿತ್ಸಾ ಶಿಬಿರದಲ್ಲಿ ಅವರು ಮಾತನಾಡಿದರು.
ಚರ್ಮರೋಗ ತಜ್ಞ ಡಾ.ಉಮೇಶ ನಾಯಕ್ ಕುಷ್ಠರೋಗದ ಕುರಿತು ಮಾಹಿತಿ ನೀಡಿ ಮಾತನಾಡಿ,ದೇಹದ ಯಾವುದೇ ಭಾಗದಲ್ಲಿ ಕಾಣಿಸಿಕೊಳ್ಳುವ ಬಿಳಿ ಅಥವಾ ತಾಮ್ರ ವರ್ಣದ ನೋವಿಲ್ಲದ ಕಲೆ ಕುಷ್ಠರೋಗದ ಆರಂಭಿಕ ಚಿಹ್ನೆ ಆಗಿದೆ.ಅದನ್ನು ತಕ್ಷಣ ವೈದ್ಯರಿಂದ ಪರೀಕ್ಷಿಸಿಕೊಂಡು ಚಿಕಿತ್ಸೆ ಪಡೆದರೆ ಕುಷ್ಠರೋಗವನ್ನು ಸಂಪೂರ್ಣವಾಗಿ ಗುಣ ಪಡಿಸಲು ಸಾಧ್ಯವಿದೆ ಎಂದರು. ಮರವಂತೆ ಪಂಚಾಯಿತಿ ಅಧ್ಯಕ್ಷ ಲೋಕೇಶ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಸಾಧನಾ ಜನಾರ್ದನ ಪ್ರತಿಷ್ಠಾನದ ಆಡಳಿತ ವಿಶ್ವಸ್ತ ಎಸ್.ಜನಾರ್ದನ ಮರವಂತೆ ಮತ್ತು ವಿಶ್ವಸ್ತೆ ಡಾ.ರೂಪಶ್ರೀ,ಆಡಳಿತ ವೈದ್ಯಾಧಿಕಾರಿ ಡಾ.ಕೆ.ಗಣೇಶ ಭಟ್ಟ ಉಪಸ್ಥಿತರಿದ್ದರು.ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಭಾಗ್ಯಲಕ್ಷ್ಮೀ ಸ್ವಾಗತಿಸಿದರು. ಆರೋಗ್ಯ ನಿರೀಕ್ಷಣಾಧಿಕಾರಿ ಹುಲಿಯಪ್ಪ ಗೌಡ ನಿರೂಪಿಸಿದರು.ಆರೋಗ್ಯ ಸುರಕ್ಷಣಾಧಿಕಾರಿ ಅನಿಸ್ ಸ್ಕರಿಯಾ ವಂದಿಸಿದರು.ಶಿಬಿರದಲ್ಲಿ ಭಾಗವಹಿಸಿದ್ದ ಜನರಿಗೆ ಚರ್ಮರೋಗ ತಪಾಸಣೆ ನಡೆಸಿ ಉಚಿತ ಔಷಧ ವಿತರಿಸಲಾಯಿತು.

Advertisement

Share
Team Kundapur Times

Recent Posts

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 week ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

3 weeks ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

3 weeks ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

4 weeks ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

4 weeks ago