ಕುಂದಾಪುರ

ಅಡಿಕೆ ಕೃಷಿಯಲ್ಲಿ ಸ್ವಾವಲಂಬಿ ಬದುಕು ಕಟ್ಟಿಕೊಂಡ-ಮಡ್ಲಗೇರಿ ಬಾಬು ಆಚಾರ್ಯ

Share

ಕುಂದಾಪುರ:ಬೈಂದೂರು ತಾಲೂಕಿನ ಹೇರೂರು ಗ್ರಾಮದ ಮಡ್ಲಗೇರಿ ನಿವಾಸಿಯಾದ ಬಾಬು ಆಚಾರ್ಯ ಅವರು ಬಿ.ಕಾಂ ಪದವೀಧರನಾಗಿದ್ದರೂ ಅವರ ಒಲವು ಮಾತ್ರ ಕೃಷಿ ಕ್ಷೇತ್ರದತ್ತ ಸೆಳೆದಿದೆ.ಕಳೆದ 30 ವರ್ಷಗಳಿಂದ ಕೃಷಿಯಲ್ಲಿ ತೊಡಗಿಕೊಂಡಿರುವ ಅವರು ರಾಸಾಯನಿಕ ಗೊಬ್ಬರವನ್ನು ಬಳಕೆ ಮಾಡದೆ ಕೊಟ್ಟಿಗೆ ಗೊಬ್ಬರ,ಜೀವಾಮೃತ,ಎರೆಹುಳ ಗೊಬ್ಬರವನ್ನು ಉಪಯೋಗಿಸಿಕೊಂಡು ವಿನೂತನ ರೀತಿಯಲ್ಲಿ ತೋಟಗಾರಿಕೆ ಕೃಷಿಯನ್ನು ಮಾಡುತ್ತಾ ಜೀವನೋಪಾಯ ಕಂಡುಕೊಂಡಿದ್ದಾರೆ.
ತಮ್ಮ 5 ಎಕರೆ ಕೃಷಿ ಭೂಮಿಯಲ್ಲಿ ಅಡಿಕೆ,ಕಾಳು ಮೆಣಸು ಮತ್ತು ತೆಂಗಿನ ಕೃಷಿ ಮಾಡಿಕೊಂಡು ಆದಾಯವನ್ನು ಗಳಿಸುವುದರ ಮುಖೇನ ಸ್ವಾಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ.ಕೃಷಿ ತೋಟದ ರಚನೆ ಮಾಡುವವರಿಗೆ ಉಚಿತವಾಗಿ ಮಾಹಿತಿಯನ್ನು ನೀಡುವ ಅವರು ರೈತರ ಜೀವನ ಮಟ್ಟ ಸುಧಾರಿಸುವ ನಿಟ್ಟಿನಲ್ಲಿ ತಮ್ಮದೆ ಆದ ಕೊಡುಗೆಯನ್ನು ನೀಡುತ್ತಿದ್ದಾರೆ.

ಕೃಷಿ ಜತೆಗೆ ಮಣ್ಣಿನ ಫಲವತ್ತತೆ ಕಾಪಾಡಲು ಹೆಚ್ಚಿನ ಒತ್ತನ್ನು ನೀಡುತ್ತಿರುವ ಬಾಬು ಆಚಾರ್ಯ ಅವರು ರಾಸಾಯನಿಕ ಗೊಬ್ಬರವನ್ನು ಮಣ್ಣಿನ ಮೇಲೆ ಒಮ್ಮೆಯೂ ಪ್ರಯೋಗ ಮಾಡಿದ್ದೆ ಇಲ್ಲಾ.ಮಣ್ಣು ಇರುವ ವ್ಯವಸ್ಥೆ ಅಡಿಯಲ್ಲೆ ಕೃಷಿ ತೋಟವನ್ನು ಹೇಗೆ ರಚನೆ ಮಾಡಬಹುದು ಎನ್ನುವ ಬಗ್ಗೆ ಅಗಾಧವಾದ ಜ್ಞಾನವನ್ನು ಹೊಂದಿರುವ ಅವರು ಕೃಷಿ ತೋಟವನ್ನು ಮಾಡುವವರಿಗೆ ಉಚಿತವಾಗಿ ಮಾಹಿತಿಯನ್ನು ನೀಡುತ್ತಾರೆ.ಪ್ರಕೃತಿ ಕಾಪಾಡುವುದರ ಜತೆಗೆ ರೈತರ ಜೀವನ ಮಟ್ಟ ಸುದಾರಿಸಬೇಕ್ಕೆನ್ನುವುದು ಅವರ ಬಯಕೆ.


ಗ್ರಾಮೀಣ ಭಾಗದ ಜನರಿಗೆ ಶಿಕ್ಷಣವೆ ಮರಿಚಿಕೆ ಎನ್ನುವ ಕಾಲಘಟ್ಟದಲ್ಲಿ ಬಿ.ಕಾಂ ಶಿಕ್ಷಣವನ್ನು ಪೂರೈಸಿರುವ ಬಾಬು ಆಚಾರ್ಯ ಅವರು ಸರಕಾರಿ ಕೆಲಸಗಳನ್ನು ಧಿಕ್ಕರಿಸಿ ಕೃಷಿಯಲ್ಲಿ ಆಸಕ್ತಿಯಿಂದ ತೊಡಗಿಕೊಂಡಿದ್ದಾರೆ.ಪುತ್ತೂರು ಮತ್ತು ವಿಟ್ಲ ಭಾಗದಿಂದ ಒಣ ಅಡಿಕೆ ಬೀಜಗಳನ್ನು ತಂದು ಸ್ವತಹ ಗಿಡಗಳನ್ನು ತಯಾರು ಮಾಡುತ್ತಾರೆ.ವರ್ಷಕ್ಕೆ ಸರಿ ಸುಮಾರು 1.ಲಕ್ಷ.ಕ್ಕೂ ಅಧಿಕ ಅಡಿಕೆ ಗಿಡಗಳನ್ನು ತಯಾರಿಸಿ ಮಾರಾಟ ಮಾಡುತ್ತಾರೆ.ಊರು,ಪರ ಊರು ಸೇರಿದಂತೆ ಕೇರಳ ಇನ್ನಿತರ ರಾಜ್ಯಗಳಲ್ಲಿಯೂ ಬೇಡಿಕೆ ಇದೆ.ಮೋಹಿತ್ ನಗರ,ವಿಟ್ಲ ಮಂಗಳ,ಪುತ್ತೂರು ಮಂಗಳ,ಶ್ರೀಮಂಗಳ ಸೇರಿದಂತೆ ವಿವಿಧ ಜಾತಿಯ ಅಡಿಕೆ ಗಿಡಗಳು ಬಾಬು ಆಚಾರ್ಯ ಅವರ ಬಳಿ ಇದೆ.ವ್ಯಾಪಾರದ ದೃಷ್ಟಿಕೋನದಕ್ಕಿಂತಲೂ,ಆಸಕ್ತ ರೈತರಿಗೆ ಉತ್ತಮ ರೀತಿಯ ಅಡಿಕೆ ಗಿಡಗಳನ್ನು ನೀಡುವ ಉದ್ದೇಶದಿಂದ ಗಿಡಗಳನ್ನು ತಯಾರು ಮಾಡುತ್ತಿದ್ದೇನೆ ಆದಾಯದ ಗಳಿಕೆಯನ್ನು ನೋಡದೆ ಅತಿ ಕಡಿಮೆ ದರದಲ್ಲಿ ಗಿಡಗಳನ್ನು ಮಾರಾಟ ಮಾಡುತ್ತೇನೆ ನನ್ನ ಕೈಲಾದಷ್ಟು ರೈತರಿಗೆ ನೆರವು ನೀಡಬೇಕ್ಕುನ್ನುವುದು ತನ್ನ ಮೂಲ ಉದ್ದೇಶವಾಗಿದೆ ಎಂದು ಅವರು ಹೇಳುತ್ತಾರೆ.
ವರದಿ-ಜಗದೀಶ ದೇವಾಡಿಗ

Advertisement

Share
Team Kundapur Times

Recent Posts

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 week ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

3 weeks ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

3 weeks ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

4 weeks ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

4 weeks ago