ಕುಂದಾಪುರ

ಅಡಿಕೆ ಕೃಷಿಯಲ್ಲಿ ಸ್ವಾವಲಂಬಿ ಬದುಕು ಕಟ್ಟಿಕೊಂಡ-ಮಡ್ಲಗೇರಿ ಬಾಬು ಆಚಾರ್ಯ

Share

Advertisement
Advertisement

ಕುಂದಾಪುರ:ಬೈಂದೂರು ತಾಲೂಕಿನ ಹೇರೂರು ಗ್ರಾಮದ ಮಡ್ಲಗೇರಿ ನಿವಾಸಿಯಾದ ಬಾಬು ಆಚಾರ್ಯ ಅವರು ಬಿ.ಕಾಂ ಪದವೀಧರನಾಗಿದ್ದರೂ ಅವರ ಒಲವು ಮಾತ್ರ ಕೃಷಿ ಕ್ಷೇತ್ರದತ್ತ ಸೆಳೆದಿದೆ.ಕಳೆದ 30 ವರ್ಷಗಳಿಂದ ಕೃಷಿಯಲ್ಲಿ ತೊಡಗಿಕೊಂಡಿರುವ ಅವರು ರಾಸಾಯನಿಕ ಗೊಬ್ಬರವನ್ನು ಬಳಕೆ ಮಾಡದೆ ಕೊಟ್ಟಿಗೆ ಗೊಬ್ಬರ,ಜೀವಾಮೃತ,ಎರೆಹುಳ ಗೊಬ್ಬರವನ್ನು ಉಪಯೋಗಿಸಿಕೊಂಡು ವಿನೂತನ ರೀತಿಯಲ್ಲಿ ತೋಟಗಾರಿಕೆ ಕೃಷಿಯನ್ನು ಮಾಡುತ್ತಾ ಜೀವನೋಪಾಯ ಕಂಡುಕೊಂಡಿದ್ದಾರೆ.
ತಮ್ಮ 5 ಎಕರೆ ಕೃಷಿ ಭೂಮಿಯಲ್ಲಿ ಅಡಿಕೆ,ಕಾಳು ಮೆಣಸು ಮತ್ತು ತೆಂಗಿನ ಕೃಷಿ ಮಾಡಿಕೊಂಡು ಆದಾಯವನ್ನು ಗಳಿಸುವುದರ ಮುಖೇನ ಸ್ವಾಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ.ಕೃಷಿ ತೋಟದ ರಚನೆ ಮಾಡುವವರಿಗೆ ಉಚಿತವಾಗಿ ಮಾಹಿತಿಯನ್ನು ನೀಡುವ ಅವರು ರೈತರ ಜೀವನ ಮಟ್ಟ ಸುಧಾರಿಸುವ ನಿಟ್ಟಿನಲ್ಲಿ ತಮ್ಮದೆ ಆದ ಕೊಡುಗೆಯನ್ನು ನೀಡುತ್ತಿದ್ದಾರೆ.

Advertisement

ಕೃಷಿ ಜತೆಗೆ ಮಣ್ಣಿನ ಫಲವತ್ತತೆ ಕಾಪಾಡಲು ಹೆಚ್ಚಿನ ಒತ್ತನ್ನು ನೀಡುತ್ತಿರುವ ಬಾಬು ಆಚಾರ್ಯ ಅವರು ರಾಸಾಯನಿಕ ಗೊಬ್ಬರವನ್ನು ಮಣ್ಣಿನ ಮೇಲೆ ಒಮ್ಮೆಯೂ ಪ್ರಯೋಗ ಮಾಡಿದ್ದೆ ಇಲ್ಲಾ.ಮಣ್ಣು ಇರುವ ವ್ಯವಸ್ಥೆ ಅಡಿಯಲ್ಲೆ ಕೃಷಿ ತೋಟವನ್ನು ಹೇಗೆ ರಚನೆ ಮಾಡಬಹುದು ಎನ್ನುವ ಬಗ್ಗೆ ಅಗಾಧವಾದ ಜ್ಞಾನವನ್ನು ಹೊಂದಿರುವ ಅವರು ಕೃಷಿ ತೋಟವನ್ನು ಮಾಡುವವರಿಗೆ ಉಚಿತವಾಗಿ ಮಾಹಿತಿಯನ್ನು ನೀಡುತ್ತಾರೆ.ಪ್ರಕೃತಿ ಕಾಪಾಡುವುದರ ಜತೆಗೆ ರೈತರ ಜೀವನ ಮಟ್ಟ ಸುದಾರಿಸಬೇಕ್ಕೆನ್ನುವುದು ಅವರ ಬಯಕೆ.


ಗ್ರಾಮೀಣ ಭಾಗದ ಜನರಿಗೆ ಶಿಕ್ಷಣವೆ ಮರಿಚಿಕೆ ಎನ್ನುವ ಕಾಲಘಟ್ಟದಲ್ಲಿ ಬಿ.ಕಾಂ ಶಿಕ್ಷಣವನ್ನು ಪೂರೈಸಿರುವ ಬಾಬು ಆಚಾರ್ಯ ಅವರು ಸರಕಾರಿ ಕೆಲಸಗಳನ್ನು ಧಿಕ್ಕರಿಸಿ ಕೃಷಿಯಲ್ಲಿ ಆಸಕ್ತಿಯಿಂದ ತೊಡಗಿಕೊಂಡಿದ್ದಾರೆ.ಪುತ್ತೂರು ಮತ್ತು ವಿಟ್ಲ ಭಾಗದಿಂದ ಒಣ ಅಡಿಕೆ ಬೀಜಗಳನ್ನು ತಂದು ಸ್ವತಹ ಗಿಡಗಳನ್ನು ತಯಾರು ಮಾಡುತ್ತಾರೆ.ವರ್ಷಕ್ಕೆ ಸರಿ ಸುಮಾರು 1.ಲಕ್ಷ.ಕ್ಕೂ ಅಧಿಕ ಅಡಿಕೆ ಗಿಡಗಳನ್ನು ತಯಾರಿಸಿ ಮಾರಾಟ ಮಾಡುತ್ತಾರೆ.ಊರು,ಪರ ಊರು ಸೇರಿದಂತೆ ಕೇರಳ ಇನ್ನಿತರ ರಾಜ್ಯಗಳಲ್ಲಿಯೂ ಬೇಡಿಕೆ ಇದೆ.ಮೋಹಿತ್ ನಗರ,ವಿಟ್ಲ ಮಂಗಳ,ಪುತ್ತೂರು ಮಂಗಳ,ಶ್ರೀಮಂಗಳ ಸೇರಿದಂತೆ ವಿವಿಧ ಜಾತಿಯ ಅಡಿಕೆ ಗಿಡಗಳು ಬಾಬು ಆಚಾರ್ಯ ಅವರ ಬಳಿ ಇದೆ.ವ್ಯಾಪಾರದ ದೃಷ್ಟಿಕೋನದಕ್ಕಿಂತಲೂ,ಆಸಕ್ತ ರೈತರಿಗೆ ಉತ್ತಮ ರೀತಿಯ ಅಡಿಕೆ ಗಿಡಗಳನ್ನು ನೀಡುವ ಉದ್ದೇಶದಿಂದ ಗಿಡಗಳನ್ನು ತಯಾರು ಮಾಡುತ್ತಿದ್ದೇನೆ ಆದಾಯದ ಗಳಿಕೆಯನ್ನು ನೋಡದೆ ಅತಿ ಕಡಿಮೆ ದರದಲ್ಲಿ ಗಿಡಗಳನ್ನು ಮಾರಾಟ ಮಾಡುತ್ತೇನೆ ನನ್ನ ಕೈಲಾದಷ್ಟು ರೈತರಿಗೆ ನೆರವು ನೀಡಬೇಕ್ಕುನ್ನುವುದು ತನ್ನ ಮೂಲ ಉದ್ದೇಶವಾಗಿದೆ ಎಂದು ಅವರು ಹೇಳುತ್ತಾರೆ.
ವರದಿ-ಜಗದೀಶ ದೇವಾಡಿಗ

Advertisement
Advertisement

Share
Team Kundapur Times

Recent Posts

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

14 hours ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

2 days ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

3 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

4 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

5 days ago

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…

6 days ago