ಕುಂದಾಪುರ

ಗುಜ್ಜಾಡಿ:ಶ್ರೀ ಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿ ದೇವಸ್ಥಾನ ಬೆಣ್ಗೆರೆ ಗುಜ್ಜಾಡಿ

Share

ಕುಂದಾಪುರ:ನಂಬಿದ ಕುಟುಂಬಸ್ಥರು ಮತ್ತು ದಾನಿಗಳ ಸಹಕಾರದಿಂದ ಸುಮಾರು 2 ಕೋಟಿ.ಗೂ ಅಧಿಕ ಹಣವನ್ನು ವೆಚ್ಚ ಮಾಡಿ ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀಜಟ್ಟಿಗೇಶ್ವರ ಮತ್ತು ಭದ್ರಕಾಳಿ ಸಪರಿವಾರ ಗರಡಿ ದೇವಸ್ಥಾನವನ್ನು ಕಳೆದ ಐದು ವರ್ಷಗಳ ಹಿಂದೆ ಜೀರ್ಣೋದ್ಧಾರ ಕೆಲಸವನ್ನು ಮಾಡಲಾಗಿದೆ.ಸಾರ್ವಜನಿಕರು ಮತ್ತು ಊರಿನವರಿಗೆ ಹಾಗೂ ಭಕ್ತರಿಗೆ ಅನುಕೂಲ ವಾಗುವ ದೃಷ್ಟಿಯಿಂದ ಸಭಾಭವನವನ್ನು ನಿರ್ಮಿಸಲಾಗಿದ್ದು ಹಣ ಕೊರತೆಯಿಂದ ಕಟ್ಟಡದ ನಿರ್ಮಾಣದ ಕೆಲಸ ಇನ್ನೂ ಪೂರ್ಣಗೊಂಡಿಲ್ಲ ಸಭಾಭವನದ ನಿರ್ಮಾಣದ ಕೆಲಸವ್ನನು ಪೂರ್ಣಗೊಳಿಸಲು ಸರಕಾರ ಮತ್ತು ದಾನಿಗಳು,ಭಕ್ತಾದಿಗಳು ಸಹಕಾರವನ್ನು ನೀಡಬೇಕೆಂದು ದೇವಸ್ಥಾನದ ಸಮಿತಿ ಅಧ್ಯಕ್ಷ ಬಾಬು.ಜೆ ಪೂಜಾರಿ ಉಪ್ಪುಂದ ಅವರು ಕೇಳಿಕೊಂಡರು.
ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.
ದೇವಸ್ಥಾನದಲ್ಲಿ ಸುಸಜ್ಜಿತವಾದ ಸಭಾಭವನ ನಿರ್ಮಾಣವಾದರೆ ಮದುವೆ,ಧಾರ್ಮಿ ಕಾರ್ಯಕ್ರಮಗಳು,ಸಭಾ ಕಾರ್ಯಕ್ರಮಗಳು ಸೇರಿದಂತೆ ಇನ್ನಿತರ ಕಾರ್ಯಕ್ರಗಳನ್ನಯ ಆಯೋಜನೆ ಮಾಡಲು ಅನುಕೂಲವಾಗುತ್ತದೆ.ದೇವಸ್ಥಾನದ ಅಭಿವೃದ್ಧಿ ಕೆಲಸವನ್ನು ಪೂರ್ಣಗೊಳಿಸಲು ಸರಕಾರ ಮತ್ತು ಜನಪ್ರತಿನಿಧಿಗಳು ಸಹಕಾರ ನೀಡಬೇಕು ಎಂದು ಮತ್ತೊಮ್ಮೆ ವಿನಂತಿಸಿದರು.ದೂರದ ಊರಿನಿಂದ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಪ್ರತಿ ಸಂಕ್ರಾತಿ ದಿನದಂದು ಅನ್ನದಾನದ ವ್ಯವಸ್ಥೆಯನ್ನು ಮಾಡಲಾಗಿದೆ.ಕಳೆದ ಐದು ವಷಗಳಿಂಧ ಶರನ್ನವರಾತ್ರಿ ಉತ್ಸವವನ್ನು ಬಹಳಷ್ಟು ವಿಜೃಂಭಣೆಯಿಂದ ನಡೆಸಿಕೊಂಡು ಬರಲಾಗುತ್ತಿದೆ ಎಲ್ಲವೂ ದೇವರ ಅನುಗ್ರಹ ಮತ್ತು ಭಕ್ತಾದಿಗಳ ಸಹಕಾರದಿಂದ ಸಾಧ್ಯ ಎಂದರು.ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಾಳಾಗಿದೆ ರಸ್ತೆಯನ್ನು ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭ ಕೆ.ಸುರೇಶ ಪೂಜಾರಿ ಚಿತ್ತೂರು,ಮಾಹಬಲ ದೇವಾಡಿಗ,ಪಾತ್ರಿಗಲಾದ ನಾರಾಯಣ ಪೂಜಾರಿ ಕೊಡಪಾಡಿ,ಅರ್ಚಕರಾದ ಚಿಕ್ಕಯ್ಯ ಪೂಜಾರಿ,ನರಸಿಂಹ ಪೂಜಾರಿ ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

4 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago