ಕುಂದಾಪುರ

ಗುಜ್ಜಾಡಿ:ಶ್ರೀ ಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿ ದೇವಸ್ಥಾನ ಬೆಣ್ಗೆರೆ ಗುಜ್ಜಾಡಿ

Share

ಕುಂದಾಪುರ:ನಂಬಿದ ಕುಟುಂಬಸ್ಥರು ಮತ್ತು ದಾನಿಗಳ ಸಹಕಾರದಿಂದ ಸುಮಾರು 2 ಕೋಟಿ.ಗೂ ಅಧಿಕ ಹಣವನ್ನು ವೆಚ್ಚ ಮಾಡಿ ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀಜಟ್ಟಿಗೇಶ್ವರ ಮತ್ತು ಭದ್ರಕಾಳಿ ಸಪರಿವಾರ ಗರಡಿ ದೇವಸ್ಥಾನವನ್ನು ಕಳೆದ ಐದು ವರ್ಷಗಳ ಹಿಂದೆ ಜೀರ್ಣೋದ್ಧಾರ ಕೆಲಸವನ್ನು ಮಾಡಲಾಗಿದೆ.ಸಾರ್ವಜನಿಕರು ಮತ್ತು ಊರಿನವರಿಗೆ ಹಾಗೂ ಭಕ್ತರಿಗೆ ಅನುಕೂಲ ವಾಗುವ ದೃಷ್ಟಿಯಿಂದ ಸಭಾಭವನವನ್ನು ನಿರ್ಮಿಸಲಾಗಿದ್ದು ಹಣ ಕೊರತೆಯಿಂದ ಕಟ್ಟಡದ ನಿರ್ಮಾಣದ ಕೆಲಸ ಇನ್ನೂ ಪೂರ್ಣಗೊಂಡಿಲ್ಲ ಸಭಾಭವನದ ನಿರ್ಮಾಣದ ಕೆಲಸವ್ನನು ಪೂರ್ಣಗೊಳಿಸಲು ಸರಕಾರ ಮತ್ತು ದಾನಿಗಳು,ಭಕ್ತಾದಿಗಳು ಸಹಕಾರವನ್ನು ನೀಡಬೇಕೆಂದು ದೇವಸ್ಥಾನದ ಸಮಿತಿ ಅಧ್ಯಕ್ಷ ಬಾಬು.ಜೆ ಪೂಜಾರಿ ಉಪ್ಪುಂದ ಅವರು ಕೇಳಿಕೊಂಡರು.
ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.
ದೇವಸ್ಥಾನದಲ್ಲಿ ಸುಸಜ್ಜಿತವಾದ ಸಭಾಭವನ ನಿರ್ಮಾಣವಾದರೆ ಮದುವೆ,ಧಾರ್ಮಿ ಕಾರ್ಯಕ್ರಮಗಳು,ಸಭಾ ಕಾರ್ಯಕ್ರಮಗಳು ಸೇರಿದಂತೆ ಇನ್ನಿತರ ಕಾರ್ಯಕ್ರಗಳನ್ನಯ ಆಯೋಜನೆ ಮಾಡಲು ಅನುಕೂಲವಾಗುತ್ತದೆ.ದೇವಸ್ಥಾನದ ಅಭಿವೃದ್ಧಿ ಕೆಲಸವನ್ನು ಪೂರ್ಣಗೊಳಿಸಲು ಸರಕಾರ ಮತ್ತು ಜನಪ್ರತಿನಿಧಿಗಳು ಸಹಕಾರ ನೀಡಬೇಕು ಎಂದು ಮತ್ತೊಮ್ಮೆ ವಿನಂತಿಸಿದರು.ದೂರದ ಊರಿನಿಂದ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಪ್ರತಿ ಸಂಕ್ರಾತಿ ದಿನದಂದು ಅನ್ನದಾನದ ವ್ಯವಸ್ಥೆಯನ್ನು ಮಾಡಲಾಗಿದೆ.ಕಳೆದ ಐದು ವಷಗಳಿಂಧ ಶರನ್ನವರಾತ್ರಿ ಉತ್ಸವವನ್ನು ಬಹಳಷ್ಟು ವಿಜೃಂಭಣೆಯಿಂದ ನಡೆಸಿಕೊಂಡು ಬರಲಾಗುತ್ತಿದೆ ಎಲ್ಲವೂ ದೇವರ ಅನುಗ್ರಹ ಮತ್ತು ಭಕ್ತಾದಿಗಳ ಸಹಕಾರದಿಂದ ಸಾಧ್ಯ ಎಂದರು.ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಾಳಾಗಿದೆ ರಸ್ತೆಯನ್ನು ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭ ಕೆ.ಸುರೇಶ ಪೂಜಾರಿ ಚಿತ್ತೂರು,ಮಾಹಬಲ ದೇವಾಡಿಗ,ಪಾತ್ರಿಗಲಾದ ನಾರಾಯಣ ಪೂಜಾರಿ ಕೊಡಪಾಡಿ,ಅರ್ಚಕರಾದ ಚಿಕ್ಕಯ್ಯ ಪೂಜಾರಿ,ನರಸಿಂಹ ಪೂಜಾರಿ ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

3 weeks ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

4 weeks ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

1 month ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

2 months ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

2 months ago