ಕುಂದಾಪುರ:ನಂಬಿದ ಕುಟುಂಬಸ್ಥರು ಮತ್ತು ದಾನಿಗಳ ಸಹಕಾರದಿಂದ ಸುಮಾರು 2 ಕೋಟಿ.ಗೂ ಅಧಿಕ ಹಣವನ್ನು ವೆಚ್ಚ ಮಾಡಿ ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀಜಟ್ಟಿಗೇಶ್ವರ ಮತ್ತು ಭದ್ರಕಾಳಿ ಸಪರಿವಾರ ಗರಡಿ ದೇವಸ್ಥಾನವನ್ನು ಕಳೆದ ಐದು ವರ್ಷಗಳ ಹಿಂದೆ ಜೀರ್ಣೋದ್ಧಾರ ಕೆಲಸವನ್ನು ಮಾಡಲಾಗಿದೆ.ಸಾರ್ವಜನಿಕರು ಮತ್ತು ಊರಿನವರಿಗೆ ಹಾಗೂ ಭಕ್ತರಿಗೆ ಅನುಕೂಲ ವಾಗುವ ದೃಷ್ಟಿಯಿಂದ ಸಭಾಭವನವನ್ನು ನಿರ್ಮಿಸಲಾಗಿದ್ದು ಹಣ ಕೊರತೆಯಿಂದ ಕಟ್ಟಡದ ನಿರ್ಮಾಣದ ಕೆಲಸ ಇನ್ನೂ ಪೂರ್ಣಗೊಂಡಿಲ್ಲ ಸಭಾಭವನದ ನಿರ್ಮಾಣದ ಕೆಲಸವ್ನನು ಪೂರ್ಣಗೊಳಿಸಲು ಸರಕಾರ ಮತ್ತು ದಾನಿಗಳು,ಭಕ್ತಾದಿಗಳು ಸಹಕಾರವನ್ನು ನೀಡಬೇಕೆಂದು ದೇವಸ್ಥಾನದ ಸಮಿತಿ ಅಧ್ಯಕ್ಷ ಬಾಬು.ಜೆ ಪೂಜಾರಿ ಉಪ್ಪುಂದ ಅವರು ಕೇಳಿಕೊಂಡರು.
ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.
ದೇವಸ್ಥಾನದಲ್ಲಿ ಸುಸಜ್ಜಿತವಾದ ಸಭಾಭವನ ನಿರ್ಮಾಣವಾದರೆ ಮದುವೆ,ಧಾರ್ಮಿ ಕಾರ್ಯಕ್ರಮಗಳು,ಸಭಾ ಕಾರ್ಯಕ್ರಮಗಳು ಸೇರಿದಂತೆ ಇನ್ನಿತರ ಕಾರ್ಯಕ್ರಗಳನ್ನಯ ಆಯೋಜನೆ ಮಾಡಲು ಅನುಕೂಲವಾಗುತ್ತದೆ.ದೇವಸ್ಥಾನದ ಅಭಿವೃದ್ಧಿ ಕೆಲಸವನ್ನು ಪೂರ್ಣಗೊಳಿಸಲು ಸರಕಾರ ಮತ್ತು ಜನಪ್ರತಿನಿಧಿಗಳು ಸಹಕಾರ ನೀಡಬೇಕು ಎಂದು ಮತ್ತೊಮ್ಮೆ ವಿನಂತಿಸಿದರು.ದೂರದ ಊರಿನಿಂದ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಪ್ರತಿ ಸಂಕ್ರಾತಿ ದಿನದಂದು ಅನ್ನದಾನದ ವ್ಯವಸ್ಥೆಯನ್ನು ಮಾಡಲಾಗಿದೆ.ಕಳೆದ ಐದು ವಷಗಳಿಂಧ ಶರನ್ನವರಾತ್ರಿ ಉತ್ಸವವನ್ನು ಬಹಳಷ್ಟು ವಿಜೃಂಭಣೆಯಿಂದ ನಡೆಸಿಕೊಂಡು ಬರಲಾಗುತ್ತಿದೆ ಎಲ್ಲವೂ ದೇವರ ಅನುಗ್ರಹ ಮತ್ತು ಭಕ್ತಾದಿಗಳ ಸಹಕಾರದಿಂದ ಸಾಧ್ಯ ಎಂದರು.ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಾಳಾಗಿದೆ ರಸ್ತೆಯನ್ನು ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭ ಕೆ.ಸುರೇಶ ಪೂಜಾರಿ ಚಿತ್ತೂರು,ಮಾಹಬಲ ದೇವಾಡಿಗ,ಪಾತ್ರಿಗಲಾದ ನಾರಾಯಣ ಪೂಜಾರಿ ಕೊಡಪಾಡಿ,ಅರ್ಚಕರಾದ ಚಿಕ್ಕಯ್ಯ ಪೂಜಾರಿ,ನರಸಿಂಹ ಪೂಜಾರಿ ಉಪಸ್ಥಿತರಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…