ಕುಂದಾಪುರ:ಸೇವಾ ಸಂಘ,ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ವತಿಯಿಂದ ನವರಾತ್ರಿ ಉತ್ಸವದ ಪ್ರಯುಕ್ತ ಆಚರಿಸಲ್ಪಡುತ್ತಿರುವ 49ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀ ಶಾರದಾ ದೇವಿ ವಿಗ್ರಹವನ್ನು ಮೆರವಣಿಗೆ ಮೂಲಕ ತಂದು ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗಂಗೊಳ್ಳಿ ಶ್ರೀ ಶಾರದಾ ಮಂಟಪದಲ್ಲಿ ಶುಕ್ರವಾರ ಪ್ರತಿಷ್ಠಾಪಿಸಿ ತ್ರಿಕಾಲ ಪೂಜೆಯನ್ನು ನೆರವೇರಿಸಲಾಯಿತು.ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಗಂಗೊಳ್ಳಿ ಶ್ರೀ ಶಾರದಾ ಮಂಟಪದಲ್ಲಿ ಪ್ರತಿಷ್ಠಾಪಿಸಿದ ಶ್ರೀ ಶಾರದಾ ದೇವಿ ವಿಗ್ರಹವನ್ನು ಅ.25 ರಂದು ಪುರಮೆರವಣಿಗೆ ಮೂಲಕ ಜಲಸ್ಥಂಭನ ಮಾಡಲಾಗುತ್ತದೆ.
ಶ್ರೀ ಶಾರದಾ ದೇವಿಗೆ ಚಂಡಿಕಾಯಾಗ ಸಮರ್ಪಣೆ
ಸೇವಾ ಸಂಘ,ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ವತಿಯಿಂದ ಶ್ರೀ ಶಾರದಾ ಮಂಟಪದಲ್ಲಿ ನಡೆಯುತ್ತಿರುವ 49ನೇ ವರ್ಷದ ಶಾರದಾ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀ ಶಾರದಾ ದೇವಿಗೆ ಲೋಕ ಕಲ್ಯಾಣಾರ್ಥ ಹಾಗೂ ಶ್ರೀ ದೇವಿಯ ಪ್ರೀತ್ಯರ್ಥವಾಗಿ ಚಂಡಿಕಾಯಾಗವನ್ನು ಶನಿವಾರ ಸಮರ್ಪಣೆ ಮಾಡಲಾಯಿತು.
ವೇ.ಮೂ ಜಿ.ರಾಘವೇಂದ್ರ ಆಚಾರ್ಯ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ಜರಗಿತು.ಶ್ರೀ ಶಾರದೋತ್ಸವ ಸಮಿತಿ ಮತ್ತು ಮಹಿಳಾ ಮಂಡಳಿ ಪದಾಧಿಕಾರಿಗಳು,ಸದಸ್ಯರು,ಸ್ಥಳೀಯರು, ಭಜಕರು, ಉಪಸ್ಥಿತರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…