ಕುಂದಾಪುರ:ಸೇವಾ ಸಂಘ,ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ವತಿಯಿಂದ ನವರಾತ್ರಿ ಉತ್ಸವದ ಪ್ರಯುಕ್ತ ಆಚರಿಸಲ್ಪಡುತ್ತಿರುವ 49ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀ ಶಾರದಾ ದೇವಿ ವಿಗ್ರಹವನ್ನು ಮೆರವಣಿಗೆ ಮೂಲಕ ತಂದು ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗಂಗೊಳ್ಳಿ ಶ್ರೀ ಶಾರದಾ ಮಂಟಪದಲ್ಲಿ ಶುಕ್ರವಾರ ಪ್ರತಿಷ್ಠಾಪಿಸಿ ತ್ರಿಕಾಲ ಪೂಜೆಯನ್ನು ನೆರವೇರಿಸಲಾಯಿತು.ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಗಂಗೊಳ್ಳಿ ಶ್ರೀ ಶಾರದಾ ಮಂಟಪದಲ್ಲಿ ಪ್ರತಿಷ್ಠಾಪಿಸಿದ ಶ್ರೀ ಶಾರದಾ ದೇವಿ ವಿಗ್ರಹವನ್ನು ಅ.25 ರಂದು ಪುರಮೆರವಣಿಗೆ ಮೂಲಕ ಜಲಸ್ಥಂಭನ ಮಾಡಲಾಗುತ್ತದೆ.
ಶ್ರೀ ಶಾರದಾ ದೇವಿಗೆ ಚಂಡಿಕಾಯಾಗ ಸಮರ್ಪಣೆ
ಸೇವಾ ಸಂಘ,ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ವತಿಯಿಂದ ಶ್ರೀ ಶಾರದಾ ಮಂಟಪದಲ್ಲಿ ನಡೆಯುತ್ತಿರುವ 49ನೇ ವರ್ಷದ ಶಾರದಾ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀ ಶಾರದಾ ದೇವಿಗೆ ಲೋಕ ಕಲ್ಯಾಣಾರ್ಥ ಹಾಗೂ ಶ್ರೀ ದೇವಿಯ ಪ್ರೀತ್ಯರ್ಥವಾಗಿ ಚಂಡಿಕಾಯಾಗವನ್ನು ಶನಿವಾರ ಸಮರ್ಪಣೆ ಮಾಡಲಾಯಿತು.
ವೇ.ಮೂ ಜಿ.ರಾಘವೇಂದ್ರ ಆಚಾರ್ಯ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ಜರಗಿತು.ಶ್ರೀ ಶಾರದೋತ್ಸವ ಸಮಿತಿ ಮತ್ತು ಮಹಿಳಾ ಮಂಡಳಿ ಪದಾಧಿಕಾರಿಗಳು,ಸದಸ್ಯರು,ಸ್ಥಳೀಯರು, ಭಜಕರು, ಉಪಸ್ಥಿತರಿದ್ದರು.
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…