ಕುಂದಾಪುರ:ರಾಜಕೀಯ ಜೀವನದಲ್ಲಿ ಯಾವುದೇ ರೀತಿಯ ಪದವಿಯನ್ನು ಬಯಸದಿರುವ ಶೇಖರ್ ಪೂಜಾರಿ ತಲ್ಲೂರು ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಮುಖಂಡರಾಗಿದ್ದಾರೆ ಅವರ ಪಕ್ಷ ನಿಷ್ಠೆ ಇತರರಿಗೂ ಪ್ರೇರಣೆ ಆಗಿರುವಂತಹದ್ದು.ಸಾಮಾಜಿಕ ಮನೋಭಾವದಿಂದ ಕೆಲಸವನ್ನು ಮಾಡುತ್ತಿರುವ ಅವರ ಅಕಾಲಿಕ ನಿಧನದಿಂದ ಪಕ್ಷಕ್ಕೆ ಮಾತ್ರವಲ್ಲದೆ ಸಮಾಜಕ್ಕೂ ನಷ್ಟವಾಗಿದೆ ಎಂದು ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.
ತಲ್ಲೂರು ಮೂರ್ತೇದಾರ ಸಭಾಭವನದಲ್ಲಿ ಭಾನುವಾರ ನಡೆದ ನುಡಿನಮನ ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿಧರಾದ ಕಾಂಗ್ರೆಸ್ ಪಕ್ಷದ ಮುಖಂಡ ಆಟೋ ಚಾಲಕ ಶೇಖರ ಪೂಜಾರಿ ಅವರ ಭಾವ ಚಿತ್ರಕ್ಕೆ ಪೂಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.ರಾಜಕೀಯ ವಿರೋಧಿಗಳೆ ಇಲ್ಲದ ಅಜಾತ ಶತ್ರು ಶೇಖರ್ ಪೂಜಾರಿ ಅವರ ಅಗಲುವಿಕೆಯಿಂದ ಇಡಿ ಊರೆ ಮರುಗಿದೆ ಇದು ಅವರು ಗಳಿಸಿದ ಪ್ರೀತಿಯ ಸಂಕೇತವಾಗಿದೆ ಎಂದರು.
ಶ್ರೀಗೋಪಾಲಕೃಷ್ಣ ದೇವಸ್ಥಾನ ಉಪ್ಪಿನಕುದ್ರು ಉಪಾಧ್ಯಕ್ಷರಾದ ಉದ್ಯಮಿ ರಾಜೇಶ ಕಾರಂತ ಉಪ್ಪಿನಕುದ್ರು ಮಾತನಾಡಿ,ಜಾತಿ,ಧರ್ಮ ಭೇದಭಾವ ಇಲ್ಲದ ಮನೋಭಾವವನ್ನು ಹೊಂದಿದ್ದ ಶೇಖರ ಪೂಜಾರಿ ಅವರ ಬದುಕಿನ ದಿನಗಳು ಸಾಮಾಜಿಕ,ಶೈಕ್ಷಣಿಕ,ಧಾರ್ಮಿಕ ಸೇವೆಗೆಂದೇ ಮೀಸಲಾಗಿದೆ ಅವರದ್ದು ಮನುಷ್ಯತ್ವದ ಗುಣಗಳನ್ನು ಹೊಂದಿರುವ ಹೃದಯವಾಗಿತ್ತು ಎಂದು ಅವರ ನಡುವಿನ ಒಡನಾಟದ ಎಳೆಯನ್ನು ಬಿಚ್ಚಿಟ್ಟರು.
ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಆನಂದ ಬಿಲ್ಲವ ಮಾತನಾಡಿ,ಸಮಾನ ಮನಸ್ಸನ್ನು ಹೊಂದಿರುವ ಒಬ್ಬ ನಿಷ್ಠಾವಂತ ಒಡನಾಡಿಯನ್ನು ಕಳೆದುಕೊಂಡಿರುವುದು ಬಹಳಷ್ಟು ದುಖ:ವಾದ ಸಂಗತಿ ಆಗಿದೆ.ಮಾನವೀಯ ಗುಣಗಳನ್ನೇ ಮೈಗೂಡಿಸಿಕೊಂಡಿರುವ ಅಂತಹ ವ್ಯಕ್ತಿಯನ್ನು ಮತ್ತೆ ನೋಡಲು ಸಾಧ್ಯವಿಲ್ಲ ಎಂದರು.
ಈ ಸಂದರ್ಭದಲ್ಲಿ ವಕೀಲರಾದ ಟಿ.ಬಿ ಶೆಟ್ಟಿ ತಲ್ಲೂರು,ಶ್ರೀಮಾಲಿಂಗೇಶ್ವರ ದೇವಳದ ಆಡಳಿತ ಧರ್ಮದರ್ಶಿ ವಸಂತ.ಆರ್ ಹೆಗ್ಡೆ,ಆನಂದ ಬಿಲ್ಲವ,ತಲ್ಲೂರು ಪಂಚಾಯಿತಿ ಅಧ್ಯಕ್ಷ ಗಿರೀಶ್ ನಾಯಕ್,ಮಾಜಿ ತಾ.ಪಂ ಸದಸ್ಯ ಕರುಣಾಕರ ಪೂಜಾರಿ,ಉದ್ಯಮಿ ಅರುಣ್ ಮೆಂಡೊನ್ಸಾ,ಪಂಚಾಯಿತಿ ಸದಸ್ಯರಾದ ಚಂದ್ರ ದೇವಾಡಿಗ,ಜುಡಿನ್ ಮೆಂಡೊನ್ಸಾ,ತಲ್ಲೂರು ಆಟೋ ಮಾಲೀಕರು ಮತ್ತು ಚಾಲಕ ಸಂಘದ ಪ್ರತಿನಿಧಿ ಚಂದ್ರ ಪೂಜಾರಿ,ಉದಯ ಕುಮಾರ್ ತಲ್ಲೂರು,ಗ್ರಾಮಸ್ಥರು,ಆಟೋ ಸಂಘದ ಸದಸ್ಯರು ಉಪಸ್ಥಿತರಿದ್ದರು.ಅಕಾಲಿಕವಾಗಿ ನಿಧನರಾದ ಕಾಂಗ್ರೆಸ್ ಮುಖಂಡ ಆಟೋ ಚಾಲಕ ಶೇಖರ ಪೂಜಾರಿ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಮಿಸಲಾಯಿತು.ಮೌನಾಚರಣೆ ಮಾಡಿ ಗೌರವ ಸಲ್ಲಿಸಲಾಯಿತು.ದೇವರಾಜ್ ಪೂಜಾರಿ ನಿರೂಪಸಿ,ವಂದಿಸಿದರು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…