ಕುಂದಾಪುರ:ರಾಜಕೀಯ ಜೀವನದಲ್ಲಿ ಯಾವುದೇ ರೀತಿಯ ಪದವಿಯನ್ನು ಬಯಸದಿರುವ ಶೇಖರ್ ಪೂಜಾರಿ ತಲ್ಲೂರು ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಮುಖಂಡರಾಗಿದ್ದಾರೆ ಅವರ ಪಕ್ಷ ನಿಷ್ಠೆ ಇತರರಿಗೂ ಪ್ರೇರಣೆ ಆಗಿರುವಂತಹದ್ದು.ಸಾಮಾಜಿಕ ಮನೋಭಾವದಿಂದ ಕೆಲಸವನ್ನು ಮಾಡುತ್ತಿರುವ ಅವರ ಅಕಾಲಿಕ ನಿಧನದಿಂದ ಪಕ್ಷಕ್ಕೆ ಮಾತ್ರವಲ್ಲದೆ ಸಮಾಜಕ್ಕೂ ನಷ್ಟವಾಗಿದೆ ಎಂದು ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.
ತಲ್ಲೂರು ಮೂರ್ತೇದಾರ ಸಭಾಭವನದಲ್ಲಿ ಭಾನುವಾರ ನಡೆದ ನುಡಿನಮನ ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿಧರಾದ ಕಾಂಗ್ರೆಸ್ ಪಕ್ಷದ ಮುಖಂಡ ಆಟೋ ಚಾಲಕ ಶೇಖರ ಪೂಜಾರಿ ಅವರ ಭಾವ ಚಿತ್ರಕ್ಕೆ ಪೂಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.ರಾಜಕೀಯ ವಿರೋಧಿಗಳೆ ಇಲ್ಲದ ಅಜಾತ ಶತ್ರು ಶೇಖರ್ ಪೂಜಾರಿ ಅವರ ಅಗಲುವಿಕೆಯಿಂದ ಇಡಿ ಊರೆ ಮರುಗಿದೆ ಇದು ಅವರು ಗಳಿಸಿದ ಪ್ರೀತಿಯ ಸಂಕೇತವಾಗಿದೆ ಎಂದರು.
ಶ್ರೀಗೋಪಾಲಕೃಷ್ಣ ದೇವಸ್ಥಾನ ಉಪ್ಪಿನಕುದ್ರು ಉಪಾಧ್ಯಕ್ಷರಾದ ಉದ್ಯಮಿ ರಾಜೇಶ ಕಾರಂತ ಉಪ್ಪಿನಕುದ್ರು ಮಾತನಾಡಿ,ಜಾತಿ,ಧರ್ಮ ಭೇದಭಾವ ಇಲ್ಲದ ಮನೋಭಾವವನ್ನು ಹೊಂದಿದ್ದ ಶೇಖರ ಪೂಜಾರಿ ಅವರ ಬದುಕಿನ ದಿನಗಳು ಸಾಮಾಜಿಕ,ಶೈಕ್ಷಣಿಕ,ಧಾರ್ಮಿಕ ಸೇವೆಗೆಂದೇ ಮೀಸಲಾಗಿದೆ ಅವರದ್ದು ಮನುಷ್ಯತ್ವದ ಗುಣಗಳನ್ನು ಹೊಂದಿರುವ ಹೃದಯವಾಗಿತ್ತು ಎಂದು ಅವರ ನಡುವಿನ ಒಡನಾಟದ ಎಳೆಯನ್ನು ಬಿಚ್ಚಿಟ್ಟರು.
ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಆನಂದ ಬಿಲ್ಲವ ಮಾತನಾಡಿ,ಸಮಾನ ಮನಸ್ಸನ್ನು ಹೊಂದಿರುವ ಒಬ್ಬ ನಿಷ್ಠಾವಂತ ಒಡನಾಡಿಯನ್ನು ಕಳೆದುಕೊಂಡಿರುವುದು ಬಹಳಷ್ಟು ದುಖ:ವಾದ ಸಂಗತಿ ಆಗಿದೆ.ಮಾನವೀಯ ಗುಣಗಳನ್ನೇ ಮೈಗೂಡಿಸಿಕೊಂಡಿರುವ ಅಂತಹ ವ್ಯಕ್ತಿಯನ್ನು ಮತ್ತೆ ನೋಡಲು ಸಾಧ್ಯವಿಲ್ಲ ಎಂದರು.
ಈ ಸಂದರ್ಭದಲ್ಲಿ ವಕೀಲರಾದ ಟಿ.ಬಿ ಶೆಟ್ಟಿ ತಲ್ಲೂರು,ಶ್ರೀಮಾಲಿಂಗೇಶ್ವರ ದೇವಳದ ಆಡಳಿತ ಧರ್ಮದರ್ಶಿ ವಸಂತ.ಆರ್ ಹೆಗ್ಡೆ,ಆನಂದ ಬಿಲ್ಲವ,ತಲ್ಲೂರು ಪಂಚಾಯಿತಿ ಅಧ್ಯಕ್ಷ ಗಿರೀಶ್ ನಾಯಕ್,ಮಾಜಿ ತಾ.ಪಂ ಸದಸ್ಯ ಕರುಣಾಕರ ಪೂಜಾರಿ,ಉದ್ಯಮಿ ಅರುಣ್ ಮೆಂಡೊನ್ಸಾ,ಪಂಚಾಯಿತಿ ಸದಸ್ಯರಾದ ಚಂದ್ರ ದೇವಾಡಿಗ,ಜುಡಿನ್ ಮೆಂಡೊನ್ಸಾ,ತಲ್ಲೂರು ಆಟೋ ಮಾಲೀಕರು ಮತ್ತು ಚಾಲಕ ಸಂಘದ ಪ್ರತಿನಿಧಿ ಚಂದ್ರ ಪೂಜಾರಿ,ಉದಯ ಕುಮಾರ್ ತಲ್ಲೂರು,ಗ್ರಾಮಸ್ಥರು,ಆಟೋ ಸಂಘದ ಸದಸ್ಯರು ಉಪಸ್ಥಿತರಿದ್ದರು.ಅಕಾಲಿಕವಾಗಿ ನಿಧನರಾದ ಕಾಂಗ್ರೆಸ್ ಮುಖಂಡ ಆಟೋ ಚಾಲಕ ಶೇಖರ ಪೂಜಾರಿ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಮಿಸಲಾಯಿತು.ಮೌನಾಚರಣೆ ಮಾಡಿ ಗೌರವ ಸಲ್ಲಿಸಲಾಯಿತು.ದೇವರಾಜ್ ಪೂಜಾರಿ ನಿರೂಪಸಿ,ವಂದಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…