ಕುಂದಾಪುರ

ನಾಡ:ಐಶ್ವರ್ಯ ಫೈನಾನ್ಸ್ & ಇನ್ವೆಸ್ಟ್‍ಮೆಂಟ್ಸ್ ನೂತನ ಕಛೇರಿ ಉದ್ಘಾಟನೆ

Share

ಕುಂದಾಪುರ:ನಾಡಗುಡ್ಡೆಅಂಗಡಿ ಎಸ್‍ಪಿ ಪಾರ್ಕ್‍ನ ವಾಣಿಜ್ಯ ಸಂಕೀರ್ಣದ ಕಟ್ಟಡದಲ್ಲಿ ಶುಭರಂಭಗೊಂಡಿರುವ ಐಶ್ವರ್ಯ ಫೈನಾನ್ಸ್ & ಇನ್ವೆಸ್ಟ್‍ಮೆಂಟ್ಸ್ ಕಛೇರಿಯ ಉದ್ಘಾಟನಾ ಕಾರ್ಯಕ್ರಮ ನಾನಾ ಧಾಮಿರ್ಕ ವಿಧಿವಿಧಾನಗಳೊಂದಿಗೆ ಮಂಗಳವಾರ ಅದ್ದೂರಿಯಾಗಿ ನಡೆಯಿತು.ಕಛೇರಿ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಪಡುಕೋಣೆ ಚರ್ಚ್ ನ ಧರ್ಮಗುರುಗಳಾದ ಫ್ರಾನ್ಸಿಸ್ ಕನೇಲಿಯಾ ಅವರು ಧಾರ್ಮಿಕ ಆಚರಣೆಗಳನ್ನು ನೆರವೇರಿಸಿ ಮಾತನಾಡಿ,ಶುಭ ಗಳಿಗೆಯಲ್ಲಿ ಕಛೇರಿ ಉದ್ಘಾಟನೆಗೊಂಡಿರುವುದು ಬಹಳಷ್ಟು ಒಳ್ಳೆಯ ವಿಚಾರವಾಗಿದೆ.ಫೈನಾನ್ಸ್ ಮಾಲೀಕರು ಮತ್ತು ಅವರ ಗ್ರಾಹಕರಿಗೆ ಶುಭವಾಗಲಿ ಎಂದು ಹಾರೈಸಿದರು.

ಐಶ್ವರ್ಯ ಫೈನಾನ್ಸ್ ಮುಖ್ಯರಸ್ಥರಾದ ಕೆನಡಿ ಪಿರೇರಾ ಅವರು ಮಾತನಾಡಿ,ಗ್ರಾಮೀಣ ಭಾಗದ ಜನರಿಗೆ ಸಾಲ,ಸೌಲಭ್ಯಗಳು ಸುಲಭವಾದ ರೀತಿಯಲ್ಲಿ ಸಿಗಬೇಕು ಎನ್ನುವ ಉದ್ದೇಶದಿಂದ 1995 ರ ಫೆಬ್ರವರಿ 15 ರಂದು ಐಶ್ವರ್ಯ ಫೈನಾನ್ಸ್ ಎಂಬ ಸಂಸ್ಥೆಯನ್ನು ಹುಟ್ಟು ಹಾಕಲಾಗಿದೆ.ನಮ್ಮ ಈ ಸಂಸ್ಥೆಗೆ 28 ವರ್ಷಗಳು ತುಂಬಿದೆ,ಜನರಿಗೆ ಉತ್ತಮವಾದ ಸೇವೆಯನ್ನು ನೀಡಿದಂತಹ ತೃಪ್ತಿ ನಮಗೆ ಇದೆ ಎಂದು ಹೇಳಿದರು.ಮುಂದಿನ ದಿನಗಳಲ್ಲಿಯೂ ಜನರಿಗೆ ಉತ್ತಮವಾದ ಸೇವೆಯನ್ನು ನೀಡಲಾಗುವುದು ಎಂದರು.

ವೆನಾನ್ಸಿಯಸ್ ಪಿರೇರಾ ಅವರು ಐಶ್ವರ್ಯ ಫೈನಾನ್ಸ್‍ನ ನೂತನ ಕಛೇರಿಯನ್ನು ಉದ್ಘಾಟಿಸಿ ಶುಭಹಾರೈಸಿದರು.ಈ ಸಂಧರ್ಭದಲ್ಲಿ ರೋಜರಿ ಸೊಸೈಟಿ ಕುಂದಾಪುರ ಅಧ್ಯಕ್ಷರಾದ ಜೋಕೊಬ್ ಡಿಸೋಜಾ,ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಶಂಕರ ಶೆಟ್ಟಿ ಬೆಳ್ಳಾಡಿ,ವ್ಯವಸಾಯ ಸೇವಾ ಸಹಕಾರಿ ಸಂಘ ಆಲೂರು ವ್ಯವಸ್ಥಾಪಕ ಮಂಜು ಪೂಜಾರಿ,ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ,ವಿನ್ಸೆಂಟ್ ಡಿ ಸೋಜಾ ಕುಂದಾಪುರ,ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಾಜೀವ ಶೆಟ್ಟಿ,ಕಟ್ಟಡದ ಮಾಲೀಕರಾದ ವಿಜಯ್ ಶೆಟ್ಟಿ ಮುಂಬೈ,ಗ್ರ್ರೆಗರಿ ಹೈಸ್ಕೂಲ್ ನಾಡ ಅಧ್ಯಾಪಕರಾದ ಸ್ಟಾಲಿನ್ ಪಿರೇರಾ,ಗ್ರೇಷನ್ ಕ್ರಾಸ್ತಾ ಮರವಂತೆ,ಗ್ರೆಗರಿ ಪ್ರೌಢ ಶಾಲೆ ನಾಡ ಸಂಚಾಲಕ ಸಿಲ್ವೆಸ್ಟರ್ ಅಲ್ಮೇಡಾ,ವಿಜಯ್ ಪಿರೇರಾ,ಆಶ್ಟನ್ ಲೆನಿನ್ ಪಿರೇರಾ,ಕಿರಣ್ ಲೋಬೋ ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago