ಕುಂದಾಪುರ

ಆಲೂರು:ಕನ್ನಡ ಕಲರವ-2023 ಕಾರ್ಯಕ್ರಮ ಉದ್ಘಾಟನೆ

Share

ಕುಂದಾಪುರ:ಗ್ರಾಮೀಣ ಭಾರತ ಉಳಿಯಬೇಕಾದರೆ ಸ್ಥಳೀಯ ಭಾಷೆ ಮತ್ತು ಆಚಾರ ವಿಚಾರಗಳನ್ನು ಉಳಿಸುವಂತಹ ಕೆಲಸ ಮಾಡಬೇಕು.ಒಂದೊಂದು ಭಾಷೆ ಒಂದೊಂದು ರೀತಿಯ ಸ್ವಭಾವವನ್ನು ಹೊಂದಿದ್ದು ಭಾಷೆಯ ಆಧಾರದ ಮೇಲೆ ರಾಜ್ಯಗಳ ರಚನೆ ಆಗಿದೆ.ಭಾಷೆ ಎನ್ನುವುದು ಸಾಂಸ್ಕøತಿಕ ಅಸ್ತಿತ್ವದಿಂದ ಕೂಡಿದೆ ಹೊರತು ರಾಜಕೀಯ ಅಸ್ತಿತ್ವದಿಂದಲ್ಲ ಎಂದು ಸಾಹಿತಿ ಅರವಿಂದ ಚೊಕ್ಕಾಡಿ ಅಭಿಪ್ರಾಯ ಪಟ್ಟರು.
ಕನ್ನಡ ರಾಜ್ಯೋತ್ಸವ ಅಂಗವಾಗಿ ಕಲ್ಪತರು ಕಲಾವಿದರು ಆಲೂರು ವತಿಯಿಂದ ಸರಸ್ವತಿ ವಿದ್ಯಾಲಯ ಆಲೂರು ಶಾಲೆಯಲ್ಲಿ ಬುಧವಾರ ನಡೆದ ಎರಡನೇ ವರ್ಷದ ಕನ್ನಡ ಕಲರವ-2023 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಲೆ,ಸಾಹಿತ್ಯ ಮತ್ತು ಸಾಂಸ್ಕøತಿಕ ಲೋಕ ಭಾಷೆಯೊಳಗೆ ಸಂಯೋಜನೆಗೊಂಡಿದೆ,ಪಾರಂಪರಿಕ ಮತ್ತು ಆಧುನಿಕ ವ್ಯವಸ್ಥೆ ಅಡಿಯಲ್ಲಿ ಕನ್ನಡ ಭಾಷೆಯನ್ನು ಉಳಿಸಲು ಸಾಕಷ್ಟು ಪ್ರಯತ್ನಗಳು ಬೇಕು.ಇಂದಿನ ಯುವಪೀಳಿಗೆಗೆ ಮಾತೃ ಭಾಷೆ ಬಗ್ಗೆ ಅಭಿಮಾನವನ್ನು ಮೂಡಿಸುವ ಕೆಲಸ ಹೆಚ್ಚು ಹೆಚ್ಚು ಮಾಡಬೇಕು ಎಂದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆಲೂರು ಪಂಚಾಯಿತಿ ಅಧ್ಯಕ್ಷ ರಾಜೇಶ್.ಎನ್ ದೇವಾಡಿಗ ಮಾತನಾಡಿ,ಕನ್ನಡ ಭಾಷೆ ಮತ್ತು ಸಂಸ್ಕøತಿಯನ್ನು ಗ್ರಾಮೀಣ ಪ್ರದೇಶದ ಭಾಗದಲ್ಲಿ ಉಳಿಸಿ ಬೆಳೆಸುವಲ್ಲಿ ಆಲೂರು ಕಲ್ಪತರು ಕಲಾವಿದರ ತಂಡ ವಿಶೇಷವಾದ ರೀತಿಯಲ್ಲಿ ಕೆಲಸವನ್ನು ಮಾಡುತ್ತಿದೆ.ಅವರ ಕಾರ್ಯ ಇತರ ಸಂಘ,ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದರು.


ಕಲ್ಪತರು ಕಲಾವಿದರು ಆಲೂರು ಅಧ್ಯಕ್ಷ ರಾಜೇಂದ್ರ ಶೆಟ್ಟಿ ಮತ್ತು ಸಂಚಾಲಕ ಸುನಿಲ್ ಕುಮಾರ್,ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆ ಸಂಚಾಲಕ ಹೇಮಂತ್ ಪಾಲ್ ಶೆಟ್ಟಿ,ಆಲೂರು ಪಂಚಾಯಿತಿ ಸದಸ್ಯ ರವಿ ಶೆಟ್ಟಿ ಆಲೂರು ಉಪಸ್ಥಿತರಿದ್ದರು.ಹಿರಿಯ ಯಕ್ಷಗಾನ ಕಲಾವಿದ ಸುರೇಂದ್ರ ಆಲೂರು,ಮಾಜಿ ತಾ.ಪಂ ಅಧ್ಯಕ್ಷೆ ಇಂದಿರಾ ಶೆಟ್ಟಿ,ಶೈಲಜಾ ಶೆಟ್ಟಿ,ನಿವೃತ್ತ ಶಿಕ್ಷಕ ಎಸ್ ಉಡುಪ ಅವರು ಜಂಟಿಯಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತರಾದ ಪ್ರವೀಣ್ ಕುಮಾರ್ ಶೆಟ್ಟಿ,ನಿವೃತ್ತ ಸೈನಿಕರಾದ ದಿನೇಶ್ ಆಚಾರ್ಯ,ಸಾಧಕ ಶಿಕ್ಷಕ ಪ್ರಶಸ್ತಿ ಪುರಸ್ಕøತರಾದ ಉದಯ್ ಕುಮಾರ್ ಶೆಟ್ಟಿ,ಸಮಾಜ ಸೇವಕರಾದ ಹೆರಿಯ ಪೂಜಾರಿ,ಸುಧಾಕರ ದೇವಾಡಿಗ ಕಟ್ಟಿನಮಕ್ಕಿ,ರಘುರಾಮ ಕುಲಾಲ,ಅನೀಶ್ ಶೆಟ್ಟಿ,ವಿಠ್ಠಲ್ ಸುವರ್ಣ,ನವೀನ್ ಪೂಜಾರಿ ಹೊಯ್ಯಾಣ ಅವರನ್ನು ಸನ್ಮಾನಿಸಲಾಯಿತು.,ಆಶಾ ಕಾರ್ಯಕರ್ತೆಯರನ್ನು,ಮತ್ತು ಎಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಾದ ವೀಕ್ಷಿತಾ ಪೂಜಾರಿ,ರಕ್ಷಾ ಶೆಟ್ಟಿ ಅವರನ್ನು ಗೌರವಿಸಲಾಯಿತು.ಆರ್ಥಿಕ ನೆರವನ್ನು ವಿತರಿಸಲಾಯಿತು.ರಾಘವೇಂದ್ರ.ಡಿ ಆಲೂರು ಸ್ವಾಗತಿಸಿ,ನಿರೂಪಿಸಿದರು.ರಾಘು ರಟ್ಟಾಡಿ ವಂದಿಸಿದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago