ಕುಂದಾಪುರ

ಶ್ರೀಗುಹೇಶ್ವರ ದೇವಸ್ಥಾನದಲ್ಲಿ ಸಂಜೀವಿನಿ ಮೃತ್ಯುಂಜಯ ಹೋಮ,ಮುಷ್ಠಿಕಾಣಿಕೆ ಸಮರ್ಪಣೆ

Share

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಪಾಡಿ ಶ್ರೀಗುಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಅಂಗವಾಗಿ ಹಮ್ಮಿಕೊಂಡಿದ್ದ ಅಷ್ಟಮಂಗಲ ಪ್ರಶ್ನಾ ಚಿಂತನಾ ವಿಮರ್ಶೆಯ ಪ್ರಕಾರ ಮೊದಲ ಹಂತದ ಪ್ರಾಯಶ್ಚಿತ ಭಾಗವಾಗಿ ಹಾಗೂ ಲೋಕ ಕಲ್ಯಾಣ ಮತ್ತು ರುದ್ರಕೋಪ ಶಮನಾರ್ಥವಾಗಿ ಸಂಜೀವಿನಿ ಮೃತ್ಯುಂಜಯ ಹೋಮ,ಗಣಹೋಮ,ಮುಷ್ಠಿಕಾಣಿಕೆ ಸಮರ್ಪಣೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ನಡೆಯಿತು.
ಶ್ರೀಗುಹೇಶ್ವರ ದೇವಾಲಯದ ತಂತ್ರಿಗಳಾಗಿ ನೇಮಕಗೊಂಡಿರುವ ವೇ.ಮೂ ಶ್ರೀಶ ಅಡಿಗ ಅವರಿಗೆ ಗ್ರಾಮಸ್ಥರ ಪರವಾಗಿ ವರಣೆಯನ್ನು ನೀಡಲಾಯಿತು.ಈ ಸಂದರ್ಭ ವ್ಯವಸ್ಥಾಪನಾ ಮತ್ತು ಕ್ಷೇತ್ರಾಭಿವೃದ್ಧಿ ಸಮಿತಿ ಅಧ್ಯಕ್ಷರು,ಪದಾಧಿಕಾರಿಗಳು,ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು.ಪ್ರತಿ ಸೋಮವಾರ ಗ್ರಾಮಸ್ಥರು ಹಾಗೂ ಭಕ್ತರಿಗೆ ಮುಷ್ಠಿ ಕಾಣಿಕೆಯನ್ನು ಹಾಕುವ ಅವಕಾಶ ದೊರೆಯಲಿದೆ.ಮಡಿಯಿಂದ ಬರುವುದು ಅವಶ್ಯಕವಾಗಿದೆ.ಶ್ರೀಗುಹೇಶ್ವರ,ಸ್ಕಂದ,ಪಾರ್ವತಿ,ಮಹಾಗಣಪತಿ ಮತ್ತು ಭದ್ರಕಾಳಿ ಅಮ್ಮನವರ ಸಾನಿಧ್ಯವನ್ನು ಹೊಂದಿರುವ ಪುರಾಣ ಪ್ರಸಿದ್ಧ ಶ್ರೀಗುಹೇಶ್ವರ ದೇವಾಲಯವನ್ನು ಜೀರ್ಣೋದ್ಧಾರ ಮಾಡಲು ಸಂಕಲ್ಪವನ್ನು ಮಾಡಲಾಗಿದೆ.ಪುರಾತನ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಗ್ರಾಮಸ್ಥರು,ಸಾರ್ವಜನಿಕರು,ದಾನಿಗಳು ಸಹಕಾರವನ್ನು ನೀಡಬೇಕು ಎಂದು ದೇವಸ್ಥಾನದ ಕ್ಷೇತ್ರಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಾಮಚಂದ್ರ ಮಯ್ಯ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಾಜು ಗಾಣಿಗ ವಿನಂತಿಸಿಕೊಂಡಿದ್ದಾರೆ.

Advertisement

Share
Team Kundapur Times

Recent Posts

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 days ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 days ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

3 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago