ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಪಾಡಿ ಶ್ರೀಗುಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಅಂಗವಾಗಿ ಹಮ್ಮಿಕೊಂಡಿದ್ದ ಅಷ್ಟಮಂಗಲ ಪ್ರಶ್ನಾ ಚಿಂತನಾ ವಿಮರ್ಶೆಯ ಪ್ರಕಾರ ಮೊದಲ ಹಂತದ ಪ್ರಾಯಶ್ಚಿತ ಭಾಗವಾಗಿ ಹಾಗೂ ಲೋಕ ಕಲ್ಯಾಣ ಮತ್ತು ರುದ್ರಕೋಪ ಶಮನಾರ್ಥವಾಗಿ ಸಂಜೀವಿನಿ ಮೃತ್ಯುಂಜಯ ಹೋಮ,ಗಣಹೋಮ,ಮುಷ್ಠಿಕಾಣಿಕೆ ಸಮರ್ಪಣೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ನಡೆಯಿತು.
ಶ್ರೀಗುಹೇಶ್ವರ ದೇವಾಲಯದ ತಂತ್ರಿಗಳಾಗಿ ನೇಮಕಗೊಂಡಿರುವ ವೇ.ಮೂ ಶ್ರೀಶ ಅಡಿಗ ಅವರಿಗೆ ಗ್ರಾಮಸ್ಥರ ಪರವಾಗಿ ವರಣೆಯನ್ನು ನೀಡಲಾಯಿತು.ಈ ಸಂದರ್ಭ ವ್ಯವಸ್ಥಾಪನಾ ಮತ್ತು ಕ್ಷೇತ್ರಾಭಿವೃದ್ಧಿ ಸಮಿತಿ ಅಧ್ಯಕ್ಷರು,ಪದಾಧಿಕಾರಿಗಳು,ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು.ಪ್ರತಿ ಸೋಮವಾರ ಗ್ರಾಮಸ್ಥರು ಹಾಗೂ ಭಕ್ತರಿಗೆ ಮುಷ್ಠಿ ಕಾಣಿಕೆಯನ್ನು ಹಾಕುವ ಅವಕಾಶ ದೊರೆಯಲಿದೆ.ಮಡಿಯಿಂದ ಬರುವುದು ಅವಶ್ಯಕವಾಗಿದೆ.ಶ್ರೀಗುಹೇಶ್ವರ,ಸ್ಕಂದ,ಪಾರ್ವತಿ,ಮಹಾಗಣಪತಿ ಮತ್ತು ಭದ್ರಕಾಳಿ ಅಮ್ಮನವರ ಸಾನಿಧ್ಯವನ್ನು ಹೊಂದಿರುವ ಪುರಾಣ ಪ್ರಸಿದ್ಧ ಶ್ರೀಗುಹೇಶ್ವರ ದೇವಾಲಯವನ್ನು ಜೀರ್ಣೋದ್ಧಾರ ಮಾಡಲು ಸಂಕಲ್ಪವನ್ನು ಮಾಡಲಾಗಿದೆ.ಪುರಾತನ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಗ್ರಾಮಸ್ಥರು,ಸಾರ್ವಜನಿಕರು,ದಾನಿಗಳು ಸಹಕಾರವನ್ನು ನೀಡಬೇಕು ಎಂದು ದೇವಸ್ಥಾನದ ಕ್ಷೇತ್ರಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಾಮಚಂದ್ರ ಮಯ್ಯ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಾಜು ಗಾಣಿಗ ವಿನಂತಿಸಿಕೊಂಡಿದ್ದಾರೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…