ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಪಾಡಿ ಶ್ರೀಗುಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಅಂಗವಾಗಿ ಹಮ್ಮಿಕೊಂಡಿದ್ದ ಅಷ್ಟಮಂಗಲ ಪ್ರಶ್ನಾ ಚಿಂತನಾ ವಿಮರ್ಶೆಯ ಪ್ರಕಾರ ಮೊದಲ ಹಂತದ ಪ್ರಾಯಶ್ಚಿತ ಭಾಗವಾಗಿ ಹಾಗೂ ಲೋಕ ಕಲ್ಯಾಣ ಮತ್ತು ರುದ್ರಕೋಪ ಶಮನಾರ್ಥವಾಗಿ ಸಂಜೀವಿನಿ ಮೃತ್ಯುಂಜಯ ಹೋಮ,ಗಣಹೋಮ,ಮುಷ್ಠಿಕಾಣಿಕೆ ಸಮರ್ಪಣೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ನಡೆಯಿತು.
ಶ್ರೀಗುಹೇಶ್ವರ ದೇವಾಲಯದ ತಂತ್ರಿಗಳಾಗಿ ನೇಮಕಗೊಂಡಿರುವ ವೇ.ಮೂ ಶ್ರೀಶ ಅಡಿಗ ಅವರಿಗೆ ಗ್ರಾಮಸ್ಥರ ಪರವಾಗಿ ವರಣೆಯನ್ನು ನೀಡಲಾಯಿತು.ಈ ಸಂದರ್ಭ ವ್ಯವಸ್ಥಾಪನಾ ಮತ್ತು ಕ್ಷೇತ್ರಾಭಿವೃದ್ಧಿ ಸಮಿತಿ ಅಧ್ಯಕ್ಷರು,ಪದಾಧಿಕಾರಿಗಳು,ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು.ಪ್ರತಿ ಸೋಮವಾರ ಗ್ರಾಮಸ್ಥರು ಹಾಗೂ ಭಕ್ತರಿಗೆ ಮುಷ್ಠಿ ಕಾಣಿಕೆಯನ್ನು ಹಾಕುವ ಅವಕಾಶ ದೊರೆಯಲಿದೆ.ಮಡಿಯಿಂದ ಬರುವುದು ಅವಶ್ಯಕವಾಗಿದೆ.ಶ್ರೀಗುಹೇಶ್ವರ,ಸ್ಕಂದ,ಪಾರ್ವತಿ,ಮಹಾಗಣಪತಿ ಮತ್ತು ಭದ್ರಕಾಳಿ ಅಮ್ಮನವರ ಸಾನಿಧ್ಯವನ್ನು ಹೊಂದಿರುವ ಪುರಾಣ ಪ್ರಸಿದ್ಧ ಶ್ರೀಗುಹೇಶ್ವರ ದೇವಾಲಯವನ್ನು ಜೀರ್ಣೋದ್ಧಾರ ಮಾಡಲು ಸಂಕಲ್ಪವನ್ನು ಮಾಡಲಾಗಿದೆ.ಪುರಾತನ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಗ್ರಾಮಸ್ಥರು,ಸಾರ್ವಜನಿಕರು,ದಾನಿಗಳು ಸಹಕಾರವನ್ನು ನೀಡಬೇಕು ಎಂದು ದೇವಸ್ಥಾನದ ಕ್ಷೇತ್ರಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಾಮಚಂದ್ರ ಮಯ್ಯ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಾಜು ಗಾಣಿಗ ವಿನಂತಿಸಿಕೊಂಡಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…