ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ ಶ್ರೀರಾಮ ಮಂದಿರದಲ್ಲಿ ಶುಕ್ರವಾರ ಬೆಳಗಿನ ಜಾವಾ ಕಳವಿಗೆ ಯತ್ನಿಸಿದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸೆ.3 ರಂದು ಶುಕ್ರವಾರ ಬೆಳಗಿನ ಜಾವಾ 1.40 ರ ಸುಮಾರಿಗೆ ರಾಷ್ಷ್ರೀಯ ಹೆದ್ದಾರಿ 66 ರಲ್ಲಿ ಬೈಕ್ನಲ್ಲಿ ಬಂದಿಳಿದ ಇಬ್ಬರು ಕಳ್ಳರು ಮರವಂತೆ ಶ್ರೀರಾಮ ಮಂದಿರದ ಪ್ರಾಂಗಣಕ್ಕೆ ನುಗ್ಗಿದ್ದಾರೆ.ಹೆಲ್ಮೆಟ್ ಧರಿಸಿದ ವ್ಯಕ್ತಿಯೊರ್ವ ದೇವಸ್ಥಾನದ ಮುಖ್ಯ ದ್ವಾರದ ಬೀಗವನ್ನು ಮುರಿದು ಕಳವಿಗೆ ಯತ್ನಿಸಿದ್ದಾನೆ.ಕಬ್ಬಿಣದ ಬಾಗಿಲನ್ನು ಮುರಿದು ಒಳನುಗ್ಗಲು ಅಸಾಧ್ಯವೇನಿಸಿದಾಗ ಕಳ್ಳರಿಬ್ಬರೂ ಬೈಕ್ನಲ್ಲಿ ಪರಾರಿಯಾಗಿದ್ದಾರೆ.
ಮರವಂತೆ ಶ್ರೀರಾಮ ಮಂದಿರದಲ್ಲಿ ಕಳವಿಗೆ ಯತ್ನಿಸಿ ವಿಫಲರಾಗಿದ್ದ ಕಳ್ಳರು,
ನಾವುಂದ-ಮರವಂತೆ ಜುಮ್ಮಾ ಮಸೀದಿಗೆ ನುಗ್ಗಿ ಕಾಣಿಕೆ ಡಬ್ಬಿ ಬೀಗ ಮುರಿದ್ದಿದ್ದಾರೆ.
ಕಿರಿಮಂಜೇಶ್ವರ ಕಾನವೀರ ಮಾಸ್ತಿಅಮ್ಮ ದೇವಸ್ಥಾನದ ಮುಖ್ಯ ದ್ವಾರದ ಬೀಗವನ್ನು ಸಹ ಮುರಿದಿದ್ದಾರೆ.
ಸರಣಿ ಕಳ್ಳತನದಲ್ಲಿ ಭಾಗಿಯಾಗಿದ್ದ ಕಳ್ಳರು ಅಮೂಲ್ಯವಾದ ಸ್ವತ್ತುಗಳನ್ನು ದೋಚಲು ವಿಫಲರಾಗಿದ್ದಾರೆ.
ಮೂರು ಕಡೆಗಳಲ್ಲಿ ನಡೆದ ಕಳ್ಳತನದಲ್ಲಿ ಒಂದೇ ತಂಡ ಭಾಗಿಯಾಗಿರುವ ಬಗ್ಗೆ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…