ಕುಂದಾಪುರ

ಮರವಂತೆ ಶ್ರೀರಾಮ ಮಂದಿರದಲ್ಲಿ ಕಳವಿಗೆ ವಿಫಲ ಯತ್ನ

Share

ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ ಶ್ರೀರಾಮ ಮಂದಿರದಲ್ಲಿ ಶುಕ್ರವಾರ ಬೆಳಗಿನ ಜಾವಾ ಕಳವಿಗೆ ಯತ್ನಿಸಿದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸೆ.3 ರಂದು ಶುಕ್ರವಾರ ಬೆಳಗಿನ ಜಾವಾ 1.40 ರ ಸುಮಾರಿಗೆ ರಾಷ್ಷ್ರೀಯ ಹೆದ್ದಾರಿ 66 ರಲ್ಲಿ ಬೈಕ್‍ನಲ್ಲಿ ಬಂದಿಳಿದ ಇಬ್ಬರು ಕಳ್ಳರು ಮರವಂತೆ ಶ್ರೀರಾಮ ಮಂದಿರದ ಪ್ರಾಂಗಣಕ್ಕೆ ನುಗ್ಗಿದ್ದಾರೆ.ಹೆಲ್ಮೆಟ್ ಧರಿಸಿದ ವ್ಯಕ್ತಿಯೊರ್ವ ದೇವಸ್ಥಾನದ ಮುಖ್ಯ ದ್ವಾರದ ಬೀಗವನ್ನು ಮುರಿದು ಕಳವಿಗೆ ಯತ್ನಿಸಿದ್ದಾನೆ.ಕಬ್ಬಿಣದ ಬಾಗಿಲನ್ನು ಮುರಿದು ಒಳನುಗ್ಗಲು ಅಸಾಧ್ಯವೇನಿಸಿದಾಗ ಕಳ್ಳರಿಬ್ಬರೂ ಬೈಕ್‍ನಲ್ಲಿ ಪರಾರಿಯಾಗಿದ್ದಾರೆ.

ಮರವಂತೆ ಶ್ರೀರಾಮ ಮಂದಿರದಲ್ಲಿ ಕಳವಿಗೆ ಯತ್ನಿಸಿ ವಿಫಲರಾಗಿದ್ದ ಕಳ್ಳರು,
ನಾವುಂದ-ಮರವಂತೆ ಜುಮ್ಮಾ ಮಸೀದಿಗೆ ನುಗ್ಗಿ ಕಾಣಿಕೆ ಡಬ್ಬಿ ಬೀಗ ಮುರಿದ್ದಿದ್ದಾರೆ.
ಕಿರಿಮಂಜೇಶ್ವರ ಕಾನವೀರ ಮಾಸ್ತಿಅಮ್ಮ ದೇವಸ್ಥಾನದ ಮುಖ್ಯ ದ್ವಾರದ ಬೀಗವನ್ನು ಸಹ ಮುರಿದಿದ್ದಾರೆ.
ಸರಣಿ ಕಳ್ಳತನದಲ್ಲಿ ಭಾಗಿಯಾಗಿದ್ದ ಕಳ್ಳರು ಅಮೂಲ್ಯವಾದ ಸ್ವತ್ತುಗಳನ್ನು ದೋಚಲು ವಿಫಲರಾಗಿದ್ದಾರೆ.
ಮೂರು ಕಡೆಗಳಲ್ಲಿ ನಡೆದ ಕಳ್ಳತನದಲ್ಲಿ ಒಂದೇ ತಂಡ ಭಾಗಿಯಾಗಿರುವ ಬಗ್ಗೆ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

Advertisement

Share
Team Kundapur Times

Recent Posts

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 hour ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago