ಕುಂದಾಪುರ

ನ.09 ರಂದುಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಜನತಾ ಆವಿಷ್ಕಾರ್ 2023 ವಿಶೇಷ,ವಿನೂತನ ಕಾರ್ಯಕ್ರಮ.

Share

ಹೆಮ್ಮಾಡಿ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ನ.9 ಗುರುವಾರ ದಂದು ಜನತಾ ಆವಿಷ್ಕಾರ್
2023 (ವಿಜ್ಞಾನ-ವ್ಯವಹಾರ-ಸಾಂಸ್ಕ್ರತಿಕ ಸಂಗಮ) ವೈಭವದ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದ ವೈಶಿಷ್ಟ್ಯಗಳು:
ವ್ಯವಹಾರ ಮೇಳ:ವಿದ್ಯಾರ್ಥಿಗಳಿಗೆ ವ್ಯವಹಾರ ಜ್ಞಾನ ಹಾಗೂ ಮಾರ್ಕೆಟಿಂಗ್ ಕೌಶಲ್ಯ ಬೆಳೆಸುವ ಉದ್ದೇಶದಿಂದ,ವಿಶಾಲವಾದ ಜನತಾ ಕ್ರೀಡಾಂಗಣದಲ್ಲಿ ತೆರೆದ 30 ಮಳಿಗೆಗಳ
ಮೂಲಕ ಜನತಾ ವಿದ್ಯಾರ್ಥಿಗಳ ವ್ಯವಹಾರ ಮೇಳ.
ಜಾನಪದ ಹಬ್ಬ:ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಸಾಮೂಹಿಕ ಜಾನಪದ ನೃತ್ಯ ಸ್ಪರ್ಧೆ.

ವಿಜ್ಞಾನ ವಿಸ್ಮಯ:ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆ.

ಚಿತ್ರ-ಚಿತ್ತಾರ:ಜನತಾ ವಿದ್ಯಾರ್ಥಿಗಳು ಸ್ವರಚಿಸಿದ ಚಿತ್ರ ಕಲಾ ಪ್ರದರ್ಶನ.

ಭಾವ-ಸಂಗಮ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಭಾವ ಗೀತೆಗಳ ಸ್ವರ ಮಾಧುರ್ಯ ನಡೆಯಲಿದೆ.

ಉದ್ಘಾಟನಾ ಸಮಾರಂಭದಲ್ಲಿ,
ಶ್ರೀ ವಿ.ವಿ.ವಿ.ಮಂಡಳಿ(ರಿ) ಹೆಮ್ಮಾಡಿ ಅಧ್ಯಕ್ಷರು ಹಾಗೂ ಬೈಂದೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ.ಕೆ.ಗೋಪಾಲ ಪೂಜಾರಿಯವರು ಅಧ್ಯಕ್ಷತೆ ವಹಿಸಲಿದ್ದು,ಸಮಾರಂಭದಲ್ಲಿ
ಕರ್ನಾಟಕ ಸರ್ಕಾರದ ಮೀನುಗಾರಿಕೆ ಹಾಗೂ ಒಳನಾಡು ಸಾರಿಗೆ ಸಚಿವರಾದ ಶ್ರೀ ಮಾಂಕಾಳ ವೈದ್ಯ,ನಾಡೋಜ ಜಿ.ಶಂಕರ್,
ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ ಶೆಟ್ಟಿ ಗಂಟಿಹೊಳೆ,ಉಡುಪಿ
ಜಿಲ್ಲಾಧಿಕಾರಿ ಡಾ|ವಿದ್ಯಾ ಕುಮಾರಿ, ಉದ್ಯಮಿ ಆನಂದ ಸಿ.ಕುಂದರ್ ಪದ್ಮಶ್ರೀ ಪ್ರಸಸ್ತಿ ಪುರಸ್ಕೃತರಾದ ಶ್ರೀ ಹರೆಕಾಲ ಹಾಜಬ್ಬ, ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾಗಿರುವ ಶ್ರೀ ಮಾರುತಿ,ಹಾಗೂ ಇನ್ನಿತರ ಯುವ ಉದ್ಯಮಿಗಳು, ಜನ ಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ.

ಈ ವೈಭವದ ಕಾರ್ಯಕ್ರಮಕ್ಕೆ ಸಮಸ್ತ ವಿದ್ಯಾಭಿಮಾನಿಗಳು, ಬೈಂದೂರು ಹಾಗೂ ಕುಂದಾಪುರ ತಾಲೂಕಿನ ವಿವಿಧ ಪ್ರೌಢಶಾಲಾ ವಿದ್ಯಾರ್ಥಿಗಳು, ಭಾಗವಹಿಸಲಿದ್ದು, ಸರಿ ಸುಮಾರು 5,000ಜನ ಸೇರುವ ನೀರಿಕ್ಷೆ ಇದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

7 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago