ಕುಂದಾಪುರ

ನ.09 ರಂದುಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಜನತಾ ಆವಿಷ್ಕಾರ್ 2023 ವಿಶೇಷ,ವಿನೂತನ ಕಾರ್ಯಕ್ರಮ.

Share

Advertisement
Advertisement

ಹೆಮ್ಮಾಡಿ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ನ.9 ಗುರುವಾರ ದಂದು ಜನತಾ ಆವಿಷ್ಕಾರ್
2023 (ವಿಜ್ಞಾನ-ವ್ಯವಹಾರ-ಸಾಂಸ್ಕ್ರತಿಕ ಸಂಗಮ) ವೈಭವದ ಕಾರ್ಯಕ್ರಮ ನಡೆಯಲಿದೆ.

Advertisement

ಕಾರ್ಯಕ್ರಮದ ವೈಶಿಷ್ಟ್ಯಗಳು:
ವ್ಯವಹಾರ ಮೇಳ:ವಿದ್ಯಾರ್ಥಿಗಳಿಗೆ ವ್ಯವಹಾರ ಜ್ಞಾನ ಹಾಗೂ ಮಾರ್ಕೆಟಿಂಗ್ ಕೌಶಲ್ಯ ಬೆಳೆಸುವ ಉದ್ದೇಶದಿಂದ,ವಿಶಾಲವಾದ ಜನತಾ ಕ್ರೀಡಾಂಗಣದಲ್ಲಿ ತೆರೆದ 30 ಮಳಿಗೆಗಳ
ಮೂಲಕ ಜನತಾ ವಿದ್ಯಾರ್ಥಿಗಳ ವ್ಯವಹಾರ ಮೇಳ.
ಜಾನಪದ ಹಬ್ಬ:ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಸಾಮೂಹಿಕ ಜಾನಪದ ನೃತ್ಯ ಸ್ಪರ್ಧೆ.

ವಿಜ್ಞಾನ ವಿಸ್ಮಯ:ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆ.

ಚಿತ್ರ-ಚಿತ್ತಾರ:ಜನತಾ ವಿದ್ಯಾರ್ಥಿಗಳು ಸ್ವರಚಿಸಿದ ಚಿತ್ರ ಕಲಾ ಪ್ರದರ್ಶನ.

ಭಾವ-ಸಂಗಮ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಭಾವ ಗೀತೆಗಳ ಸ್ವರ ಮಾಧುರ್ಯ ನಡೆಯಲಿದೆ.

ಉದ್ಘಾಟನಾ ಸಮಾರಂಭದಲ್ಲಿ,
ಶ್ರೀ ವಿ.ವಿ.ವಿ.ಮಂಡಳಿ(ರಿ) ಹೆಮ್ಮಾಡಿ ಅಧ್ಯಕ್ಷರು ಹಾಗೂ ಬೈಂದೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ.ಕೆ.ಗೋಪಾಲ ಪೂಜಾರಿಯವರು ಅಧ್ಯಕ್ಷತೆ ವಹಿಸಲಿದ್ದು,ಸಮಾರಂಭದಲ್ಲಿ
ಕರ್ನಾಟಕ ಸರ್ಕಾರದ ಮೀನುಗಾರಿಕೆ ಹಾಗೂ ಒಳನಾಡು ಸಾರಿಗೆ ಸಚಿವರಾದ ಶ್ರೀ ಮಾಂಕಾಳ ವೈದ್ಯ,ನಾಡೋಜ ಜಿ.ಶಂಕರ್,
ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ ಶೆಟ್ಟಿ ಗಂಟಿಹೊಳೆ,ಉಡುಪಿ
ಜಿಲ್ಲಾಧಿಕಾರಿ ಡಾ|ವಿದ್ಯಾ ಕುಮಾರಿ, ಉದ್ಯಮಿ ಆನಂದ ಸಿ.ಕುಂದರ್ ಪದ್ಮಶ್ರೀ ಪ್ರಸಸ್ತಿ ಪುರಸ್ಕೃತರಾದ ಶ್ರೀ ಹರೆಕಾಲ ಹಾಜಬ್ಬ, ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾಗಿರುವ ಶ್ರೀ ಮಾರುತಿ,ಹಾಗೂ ಇನ್ನಿತರ ಯುವ ಉದ್ಯಮಿಗಳು, ಜನ ಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ.

ಈ ವೈಭವದ ಕಾರ್ಯಕ್ರಮಕ್ಕೆ ಸಮಸ್ತ ವಿದ್ಯಾಭಿಮಾನಿಗಳು, ಬೈಂದೂರು ಹಾಗೂ ಕುಂದಾಪುರ ತಾಲೂಕಿನ ವಿವಿಧ ಪ್ರೌಢಶಾಲಾ ವಿದ್ಯಾರ್ಥಿಗಳು, ಭಾಗವಹಿಸಲಿದ್ದು, ಸರಿ ಸುಮಾರು 5,000ಜನ ಸೇರುವ ನೀರಿಕ್ಷೆ ಇದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

8 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

8 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

9 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

12 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

3 days ago