ಹೆಮ್ಮಾಡಿ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ನ.9 ಗುರುವಾರ ದಂದು ಜನತಾ ಆವಿಷ್ಕಾರ್
2023 (ವಿಜ್ಞಾನ-ವ್ಯವಹಾರ-ಸಾಂಸ್ಕ್ರತಿಕ ಸಂಗಮ) ವೈಭವದ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ವೈಶಿಷ್ಟ್ಯಗಳು:
ವ್ಯವಹಾರ ಮೇಳ:ವಿದ್ಯಾರ್ಥಿಗಳಿಗೆ ವ್ಯವಹಾರ ಜ್ಞಾನ ಹಾಗೂ ಮಾರ್ಕೆಟಿಂಗ್ ಕೌಶಲ್ಯ ಬೆಳೆಸುವ ಉದ್ದೇಶದಿಂದ,ವಿಶಾಲವಾದ ಜನತಾ ಕ್ರೀಡಾಂಗಣದಲ್ಲಿ ತೆರೆದ 30 ಮಳಿಗೆಗಳ
ಮೂಲಕ ಜನತಾ ವಿದ್ಯಾರ್ಥಿಗಳ ವ್ಯವಹಾರ ಮೇಳ.
ಜಾನಪದ ಹಬ್ಬ:ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಸಾಮೂಹಿಕ ಜಾನಪದ ನೃತ್ಯ ಸ್ಪರ್ಧೆ.
ವಿಜ್ಞಾನ ವಿಸ್ಮಯ:ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆ.
ಚಿತ್ರ-ಚಿತ್ತಾರ:ಜನತಾ ವಿದ್ಯಾರ್ಥಿಗಳು ಸ್ವರಚಿಸಿದ ಚಿತ್ರ ಕಲಾ ಪ್ರದರ್ಶನ.
ಭಾವ-ಸಂಗಮ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಭಾವ ಗೀತೆಗಳ ಸ್ವರ ಮಾಧುರ್ಯ ನಡೆಯಲಿದೆ.
ಉದ್ಘಾಟನಾ ಸಮಾರಂಭದಲ್ಲಿ,
ಶ್ರೀ ವಿ.ವಿ.ವಿ.ಮಂಡಳಿ(ರಿ) ಹೆಮ್ಮಾಡಿ ಅಧ್ಯಕ್ಷರು ಹಾಗೂ ಬೈಂದೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ.ಕೆ.ಗೋಪಾಲ ಪೂಜಾರಿಯವರು ಅಧ್ಯಕ್ಷತೆ ವಹಿಸಲಿದ್ದು,ಸಮಾರಂಭದಲ್ಲಿ
ಕರ್ನಾಟಕ ಸರ್ಕಾರದ ಮೀನುಗಾರಿಕೆ ಹಾಗೂ ಒಳನಾಡು ಸಾರಿಗೆ ಸಚಿವರಾದ ಶ್ರೀ ಮಾಂಕಾಳ ವೈದ್ಯ,ನಾಡೋಜ ಜಿ.ಶಂಕರ್,
ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ ಶೆಟ್ಟಿ ಗಂಟಿಹೊಳೆ,ಉಡುಪಿ
ಜಿಲ್ಲಾಧಿಕಾರಿ ಡಾ|ವಿದ್ಯಾ ಕುಮಾರಿ, ಉದ್ಯಮಿ ಆನಂದ ಸಿ.ಕುಂದರ್ ಪದ್ಮಶ್ರೀ ಪ್ರಸಸ್ತಿ ಪುರಸ್ಕೃತರಾದ ಶ್ರೀ ಹರೆಕಾಲ ಹಾಜಬ್ಬ, ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾಗಿರುವ ಶ್ರೀ ಮಾರುತಿ,ಹಾಗೂ ಇನ್ನಿತರ ಯುವ ಉದ್ಯಮಿಗಳು, ಜನ ಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ.
ಈ ವೈಭವದ ಕಾರ್ಯಕ್ರಮಕ್ಕೆ ಸಮಸ್ತ ವಿದ್ಯಾಭಿಮಾನಿಗಳು, ಬೈಂದೂರು ಹಾಗೂ ಕುಂದಾಪುರ ತಾಲೂಕಿನ ವಿವಿಧ ಪ್ರೌಢಶಾಲಾ ವಿದ್ಯಾರ್ಥಿಗಳು, ಭಾಗವಹಿಸಲಿದ್ದು, ಸರಿ ಸುಮಾರು 5,000ಜನ ಸೇರುವ ನೀರಿಕ್ಷೆ ಇದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…