ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ರೆಡ್ ಕ್ರಾಸ್ ಘಟಕ ಉದ್ಘಾಟನೆ

Share

Advertisement
Advertisement
Advertisement

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕಾಲೇಜಿನ ಪ್ರಿನ್ಸಿಪಾಲ್ ಡಾ.ಸೀಮಾ ಜಿ ಭಟ್ ಮಾತನಾಡಿ,ರೆಡ್ ಕ್ರಾಸ್ ಸಂಸ್ಥೆ ಘಟಕದ ಸ್ಥಾಪನೆಯ ಮೂಲ ಉದ್ದೇಶ ಹಾಗೂ ಮಹತ್ವದ ಕುರಿತು ಮಾಹಿತಿ ನೀಡಿದರು.ಕಾಲೇಜಿನ ನಿರ್ದೇಶಕಿ ಶ್ರೀಮತಿ ಮಮತಾ,ಕಾಲೇಜು ಘಟಕದ ಸಂಚಾಲಕಿ ಉಪನ್ಯಾಸಕಿ ಶ್ರೀಮತಿ ಶೈಲಾ,ವಿದ್ಯಾರ್ಥಿ ಪ್ರತಿನಿಧಿ ತ್ರಿದೇಶ್,ಪ್ರಾಂಜಲಿ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಮತ್ತು ರೆಡ್ ಕ್ರಾಸ್ ನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿನಿ ಮಹಿಮಾ ಸ್ವಾಗತಿಸಿದರು.ಸೌಜನ್ಯ ವಂದಿಸಿದರು.ಕನ್ನಡ ವಿಭಾಗದ ಮುಖ್ಯಸ್ಥೆ ಉಪನ್ಯಾಸಕಿ ಶ್ರೀಮತಿ ಅನುಪಮ ಪಿ ಭಟ್ ನಿರೂಪಿಸಿದರು.

Advertisement


Share

Leave a comment

Your email address will not be published. Required fields are marked *

You cannot copy content of this page