ಬಿ.ವೈ.ವಿಜಯೇಂದ್ರ ರಾಜ್ಯ ಬಿಜೆಪಿ ನೂತನ ಸಾರಥಿ ಆಗಿ ನೇಮಕ

Share

Advertisement
Advertisement
Advertisement

ಬೆಂಗಳೂರು:ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ , ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.ಬಿಜೆಪಿ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿದ್ದ ಶಿಕಾರಿಪುರ ಶಾಸಕರಾದ ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಈ ಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ರಾಜ್ಯಾಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಕೊನೆ ಗೊಂಡು ಆರು ತಿಂಗಳ ಬಳಿಕ ಹಲವು ಲೆಕ್ಕಾಚಾರ ಹಾಗೂ ಜಾತಿ ಆಧಾರದ ಮೇಲೆ ಲಿಂಗಾಯತ ಸಮುದಾಯದ ಯುವ ಮುಖಂಡ ಬಿ.ವೈ ವಿಜೇಂದ್ರ ಅವರಿಗೆ ಪಕ್ಷ ಮಣೆ ಹಾಕಿದೆ.ಲೋಕಸಭೆ ಚುನಾವಣೆಗೆ ಕೆಲವು ತಿಂಗಳು ಮುಂಚಿತವಾಗಿ ಆಗಿರುವ ಈ ಬದಲಾವಣೆ ಪಕ್ಷದ ಕಾರ್ಯಕರ್ತರಲ್ಲಿ ಸಂಚಲನ ಮೂಡಿಸಿದೆ.

Advertisement


Share

Leave a comment

Your email address will not be published. Required fields are marked *

You cannot copy content of this page