ಕುಂದಾಪುರ:ಅಕಾಲಿಕವಾಗಿ ಸುರಿದ ಬಾರಿ ಮಳೆಗೆ ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಾಕೆರೆ,ನಾಡ,ತಾರಿಬೇರು,ಜಡ್ಡಾಡಿ,ಕಡಿಕೆ,ಕೋಣ್ಕಿ ಹಾಗೂ ಹೆಮ್ಮಾಡಿ ಭಾಗದಲ್ಲಿ ಕೃಷಿ ನಷ್ಟ ಉಂಟಾಗಿದೆ.ಜಾನುವಾರುಗಳ ಬೈಹುಲ್ಲು ಬೈಲಿನಲ್ಲಿ ಕೊಳೆಯುತ್ತಿದೆ.
ಹವಾಮಾನ ವೈಪರಿತ್ಯದಿಂದಾಗಿ ಭಾನುವಾರ ಕುಂದಾಪುರ ಮತ್ತು ಬೈಂದೂರು ತಾಲೂಕಿನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಭತ್ತ ಬೆಳೆಗೆ ಸಂಕಷ್ಟ ಎದುರಾಗಿದ್ದು ಮಳೆ ಕಾರಣದಿಂದ ಸಮಯಕ್ಕೆ ಸರಿಯಾಗಿ ಕೊಯ್ಲು ಮಾಡದೆ ಫಸಲು ಭರಿತ ಬೆಳೆ ಬೈಲಿನಲ್ಲಿ ನಶೀಸುತ್ತಿದೆ.ಭತ್ತದ ಬೆಳೆಗೆ ಅವಶ್ಯಕವಾಗಿರುವ ಸಂದರ್ಭ ಮಳೆ ಕೈಕೊಟ್ಟಿದ್ದು ಕೊಯ್ಲು ಸಮಯದಲ್ಲಿ ಮಳೆ ಎಡಬಿಡದೆ ಸುರಿಯುತ್ತಿದೆ.ಕೊಯ್ಲು ಮಾಡಿದ ಬೈಹುಲ್ಲು ನೀರಿನಲ್ಲಿ ಮುಳುಗಿದ್ದು ಜಾನುವಾರುಗಳಿಗೆ ಅಗತ್ಯವಾಗಿರುವ ಒಣ ಹುಲ್ಲು ಮಳೆ ಅಪೋಷಣೆ ಗೈಯುತ್ತಿದೆ.ನಾಡ ಗ್ರಾಮ ಪಂಚಾಯತ್ ವ್ಯಾಪ್ತಿ ಪ್ರದೇಶ ಒಂದರಲ್ಲೇ ಹತ್ತಾರು ಎಕರೆ ಕೃಷಿ ಭೂಮಿಯಲ್ಲಿ ಕೊಯ್ಲು ಮಾಡಿದ ಬೈಹುಲ್ಲು ನೀರಿನಲ್ಲಿ ಕೊಳೆಯುತ್ತಿದೆ ಹೈನುಗಾರಿಕೆಯಲ್ಲಿ ತೊಡಗಿ ಕೊಂಡಿರುವ ಕೃಷಿಕರ ಪಾಡು ಕಷ್ಟದ ಪರಿಸ್ಥಿತಿಗೆ ಸಿಲುಕಿದೆ.ಭತ್ತದ ಪೈರು ಒಣಗಿ ಸೊರಗಿ ಹೋಗಿದ್ದು ತೆನೆಗಳು ನೆಲಕ್ಕೆ ಉದುರಿ ಬೀಳುವ ಹಂತಕ್ಕೆ ತಲುಪಿದೆ.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…