ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ರಕ್ತದಾನ ಶಿಬಿರ ಆಯೋಜನೆ

Share

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಹಾಗೂ ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ರಕ್ತದಾನ ಶಿಬಿರ ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಡೆಯಿತು.ಕುಂದಾಪುರ ಘಟಕದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಜಯಕರ ಶೆಟ್ಟಿ ಮತ್ತು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ರಕ್ತದಾನ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.100 ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು, ಉಪನ್ಯಾಸಕೇತರರು, ರಕ್ತದಾನವನ್ನು ಮಾಡಿದರು.ದೀಕ್ಷಾ ಎಚ್ ಡಿ ಎಫ್ ಸಿ ಬ್ಯಾಂಕ್ ಮ್ಯಾನೇಜರ್ ,ಸೀತಾರಾಮ್ , ಗಣೇಶ್ ಆಚಾರ್,ವೀರೇಂದ್ರ, ಹಾಗೂ ವಿದ್ಯಾಲಕ್ಷ್ಮಿ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ, ನಿರ್ದೇಶಕಿಯಾದ ಶ್ರೀಮತಿ ಮಮತಾ, ಪ್ರಾಂಶುಪಾಲರಾದ ಡಾ. ಸೀಮಾ ಜಿ ಭಟ್ ,ಕಾಲೇಜು ರೆಡ್ ಕ್ರಾಸ್ ಘಟಕದ ಸಂಚಾಲಕಿ ಉಪನ್ಯಾಸಕಿ ಶ್ರೀಮತಿ ಶೈಲಾ ಮತ್ತು ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement

Share

Leave a comment

Your email address will not be published. Required fields are marked *

You cannot copy content of this page