ಕುಂದಾಪುರ

ಗಂಗೊಳ್ಳಿ:ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ದುರಂತಕ್ಕೆ ಬೋಟ್‍ಗಳು ಆಹುತಿ,10 ಕೋಟಿಗೂ ಅಧಿಕ ನಷ್ಟ

Share

https://kundapurtimes.com/vbib

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮ್ಯಾಂಗನೀಸ್ ರಸ್ತೆ ವಾರ್ಪ್ ಬಂದರಿನಲ್ಲಿ ಸೋಮವಾರ ಬೆಳಿಗ್ಗೆ ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ದುರಂತದಲ್ಲಿ 09 ಬೋಟ್,4 ಡಿಂಗಿ ದೋಣಿ,1 ಸಣ್ಣ ದೋಣಿ ಸೇರಿದಂತೆ 6 ಸೇಟ್ ಮಾಟ್ ಬಲೆ,2 ದ್ವಿಚಕ್ರ ವಾಹನ ಅಗ್ನಿಗೆ ಆಹುತಿ ಆಗಿದೆ.ಇವೊಂದು ಘಟನೆಯಲ್ಲಿ ಅಂದಾಜು 10 ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ.
ಗಂಗೊಳ್ಳಿ ಮ್ಯಾಂಗನೀಸ್ ರಸ್ತೆ ವಾರ್ಪ್ ಬಂದರಿನಲ್ಲಿ ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕರೆ ಗಾಳಿಗೆ ಧಗದಹಿಸಿದ ಬೆಂಕಿ ವಾರ್ಪ್ ಬಂದರಿನಲ್ಲಿ ದುರಸ್ತಿ ಕಾರ್ಯಕ್ಕೆಂದು ನಿಲ್ಲಿಸಿದ ಬೋಟ್‍ಗಳಿಗೆ ತಗುಲಿದೆ.ಪ್ರಾಥಮಿಕ ಮಾಹಿತಿ ಪ್ರಕಾರ ಬೆಂಕಿ ದುರಂತದಲ್ಲಿ ಯಕ್ಷೇಶ್ವರಿ,ಸಾಗರ,ಪ್ರಿಯದರ್ಶಿನಿ,ಮೂಕಾಂಬಿಕಾ,ಜಲರಾಣಿ,ಪರ್ಲ್,ಶ್ರೀಶನೇಶ್ವರ,ಮಧುಶ್ರೀ,ಮಂಜುನಾಥ -370 ಎಂಬ ಹೆಸರಿನ ಬೋಟ್ ಮತ್ತು ಡಿಂಗಿ ದೋಣಿಗಳು,ಬಲೆಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿ ಹೋಗಿದೆ.
ಮಳೆಗಾಲಕ್ಕೂ ಮುಂಚೆ ಗಂಗೊಳ್ಳಿ ವಾರ್ಪ್ ಬಂದರಿನಲ್ಲಿ ಬೋಟ್‍ಗಳನ್ನು ರಿಪೇರಿ ಮಾಡಲೆಂದು ನಿಲ್ಲಿಸಲಾಗುತ್ತದೆ.ಹಾಗಾಗಿ ಈ ಬೋಟ್‍ಗಳು ಇಲ್ಲಿ ಲಂಗರು ಹಾಕಿದ್ದವು ಬೋಟ್‍ಗಳ ರಿಪೇರಿ ಕೆಲಸ ಕಾರ್ಯಗಳು ಮುಗಿದಿದ್ದು ಇನ್ನೆರಡು ದಿನದಲ್ಲಿ ಮೀನುಗಾರಿಕೆಗೆ ತೆರಳಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿತ್ತು.ದುರದೃಷ್ಟವಶಾತ್ ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೀನುಗಾರರ ಕಣ್ಣೆದುರೆ ಬೋಟ್‍ಗಳು ಧಗದಹಿಸಿದೆ.ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಗಂಗೊಳ್ಳಿಯಲ್ಲಿ ಅಕ್ಷರಸಹ ಸೂತಕದ ವಾತಾವರಣ ಮಡುಗಟ್ಟಿತ್ತು.
ಸಮುದ್ರದಿಂದ ಬೀಸುತ್ತಿದ್ದ ಕರೆ ಗಾಳಿಗೆ ಬೆಂಕಿ ಕೆನ್ನಾಲಿಗೆಯನ್ನು ನಿಯಂತ್ರಿಸುವುದೆ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರಿಗೆ ಸವಾಲಿನ ಕೆಲಸವಾಗಿತ್ತು.ಬೋಟ್‍ಗಳ ಇಂಜಿನ್‍ನಲ್ಲಿ ತುಂಬಿಸಿದ ಡಿಸೇಲ್ ಬೆಂಕಿ ಕೆನ್ನಾಲೆ ಇನ್ನಷ್ಷು ತೀವೃಗೊಳ್ಳಲು ಸಹಕಾರಿ ಆಗಿತ್ತು.ಕುಂದಾಪುರ,ಬೈಂದೂರು,ಉಡುಪಿ,ಮಲ್ಪೆ ಸೇರಿ ಒಟ್ಟು ನಾಲ್ಕ ಅಗ್ನಿಶಾಮಕ ದಳದ ವಾಹನಗಳು ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಗಿರಲಿಲ್ಲ.ಎಲ್ಲೆರ ಕಣ್ಣೆದುರೆ ಕೋಟ್ಯಾಂತರ.ರೂ ಮೌಲ್ಯದ ಸ್ವತ್ತುಗಳು ಭಸ್ಮವಾಗಿದೆ.
ಗಂಗೊಳ್ಳಿ ವಾರ್ಪ್ ಬಂದರಿನಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ನಿಯಂತ್ರಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿ ಮತ್ತು ಪೆÇಲೀಸ್ ಸಿಬ್ಬಂದಿಗಳ ಜತೆ ಕೈಜೋಡಿಸಿದ ಸ್ಥಳೀಯರು ಖಾಸಗಿ ಗಾಡಿಗಳ ಮೂಲಕವೂ ನೀರನ್ನು ಪೂರೈಕೆ ಮಾಡಿದ್ದರು.4 ಪಂಪ್ ಸೇಟ್ ಮೂಲಕ ನದಿ ಮೂಲಕ ನೀರನ್ನು ಸಿಂಪಡಿಸಲಾಯಿತು.ಜನರು ಕೊಡಪಾನ,ಬಕೇಟ್‍ಗಳ ಮೂಲಕವೂ ನೀರನ್ನು ತಂದು ಬೆಂಕಿಯನ್ನು ನಂದಿಸಲು ಪ್ರಯತ್ನಪಟ್ಟರು.ಗಂಗೊಳ್ಳಿ ಮತ್ತು ಆಸುಪಾಸಿನ ಗ್ರಾಮಗಳ ಭಾಗಗಳಲ್ಲಿ ಬೆಂಕಿ ಅನಾಹುತದಂತಹ ಘಟನೆಗಳು ಸಂಭವಿಸಿದ ಸಂದರ್ಭದಲ್ಲಿ ಕುಂದಾಪುರ ಅಥವಾ ಬೈಂದೂರಿನಿಂದ ಅಗ್ನಿ ಶಾಮಕದಳದ ವಾಹನಗಳು ಬರಬೇಕಾಗುತ್ತದೆ.ಘಟನೆ ಸ್ಥಳಕ್ಕೆ ಅಗ್ನಿ ಶಾಮಕ ದಳದ ವಾಹನಗಳು ಸಕಾಲಕ್ಕೆ ತಲುಪಲು ಸಾಧ್ಯವಾಗದೆ ಇರುವುದರಿಂದಲೇ ಅನಾಹುತಗಳು ದೊಡ್ಡ ಪ್ರಮಾಣದಲ್ಲಿ ಹಾನಿಯನ್ನು ಉಂಟು ಮಾಡುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ
:ರಾಜ್ಯದ ಪ್ರಮುಖ ಬಂದರುಗಳಲ್ಲಿ ಒಂದಾಗಿರುವ ಗಂಗೊಳ್ಳಿ ಬಂದರಿನಲ್ಲಿ 200 ಅಧಿಕ ಬೋಟ್‍ಗಳು,ನೂರಾರು ಸಂಖ್ಯೆ ದೋಣಿಗಳು ಲಂಗರು ಹಾಕುತ್ತವೆ.ಗಂಗೊಳ್ಳಿ ಬಂದರಿನಲ್ಲಿ ಕೋಟ್ಯಾಂತರ.ರೂ ವ್ಯವಹಾರ ನಡೆಯುತ್ತಿದೆ.ಗಂಗೊಳ್ಳಿ ಬಂದರು ಮತ್ತು ಗ್ರಾಮೀಣ ಭಾಗದ ಜನರ ಹಿತ ದೃಷ್ಟಿಯಿಂದ ಗಂಗೊಳ್ಳಿ ಠಾಣೆ ವ್ಯಾಪ್ತಿ ಪ್ರದೇಶದಲ್ಲಿ ಅಗ್ನಿಶಾಮಕ ದಳದ ಸಬ್ ಸ್ಟೇಷನ್ ನಿರ್ಮಾಣ ಮಾಡಬೇಕ್ಕೆನ್ನುವುದು ಸಾರ್ವಜನಿಕರ ಬಹು ಕಾಲದ ಬೇಡಿಕೆ ಆಗಿದೆ.ಜನರ ಹಲವಾರು ವರ್ಷಗಳ ಬೇಡಿಕೆಗೆ ಇಲ್ಲಿ ತನಕ ಯಾವುದೇ ಸರಕಾರಗಳು ಜನಪ್ರತಿನಿಧಿಗಳು ಸ್ಪಂದನೆ ಮಾಡಿಲ್ಲ.ಗಂಗೊಳ್ಳಿಯಲ್ಲಿ ಘಟಿದಿಸಿದ ಇದು ನಾಲ್ಕನೇ ದುರಂತವಾಗಿದೆ.
ಬಹು ಕೋಟಿ.ರೂ ವೆಚ್ಚದಲ್ಲಿ ಗಂಗೊಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಜಟ್ಟಿ ಕಳಪೆ ಕಾಮಗಾರಿಯಿಂದ ಕುಸಿದು ಬಿದ್ದಿದೆ.ವಾರ್ಪ್ ಬಂದರಿನಲ್ಲೂ ಮೂಲ ಸೌಕರ್ಯದ ವ್ಯವಸ್ಥೆಗಳಿಲ್ಲ.ಅತೀವ ಒತ್ತಡದಿಂದ ಕೂಡಿದ ಗಂಗೊಳ್ಳಿ ಬಂದರಿನಲ್ಲಿ ಬೋಟ್‍ಗಳನ್ನು ಲ್ಯಾಂಡ್ ಮಾಡಲು ಸರಿಯಾದ ಜಾಗದ ವ್ಯವಸ್ಥೆ ಇಲ್ಲಾ.ಬಲೆಗಳನ್ನು ಇಡಲು ಕೊಠಡಿಗಳಿಲ್ಲ.ಗಂಗೊಳ್ಳಿ ಬಂದರಿನಲ್ಲಿ ಮೂಲ ಸೌಕರ್ಯ ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರಕಾರ ಪ್ರಥಮ ಆದ್ಯತೆ ನೀಡಬೇಕ್ಕುನ್ನುವುದು ಮೀನುಗಾರರ ಬಹುಮುಖ್ಯ ಬೇಡಿಕೆಯಾಗಿದೆ.
ಜೀವನಕ್ಕೆ ಆಧಾರವಾಗಿರುವ ಬೋಟ್‍ಗಳು ಸುಟ್ಟು ಕರಕಲಾಗಿದ್ದರಿಂದ ಮೀನುಗಾರರ ಬದುಕು ಆತಂಕಕ್ಕೆ ಸಿಲುಕಿದೆ.ಕೋಟ್ಯಾಂತರ.ರೂ ಮೌಲ್ಯದ ಸ್ವತ್ತುಗಳು ಬೆಂಕಿಯಲ್ಲಿ ಭಸ್ಮವಾಗಿದೆ.ತಮ್ಮ ಜೀವನವನ್ನು ಪುನರ್ ನಿರ್ಮಿಸಿಕೊಳ್ಳಲು ಪರಿಹಾರವನ್ನು ಆದಷ್ಟು ಬೇಗನೆ ನೀಡಲು ಕ್ರಮಕೈಗೊಳ್ಳಬೇಕೆಂದು ಘಟನೆ ಸ್ಥಳಕ್ಕೆ ಆಗಮಿಸಿದ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಅವರ ಹತ್ತಿರ ಮೀನುಗಾರರು ಕಣ್ಣಿರಿನ ಮೂಲಕ ತಮ್ಮ ಮನವಿಯನ್ನು ಸಲ್ಲಿಸಿದರು.ಮೀನುಗಾರರಿಗೆ ಸಾಂತ್ವನದ ಮಾತುಗಳನ್ನು ಹೇಳಿದ ಸಚಿವರು ಆದಷ್ಟು ಬೇಗನೆ ಪರಿಹಾರ ನೀಡಲು ನಮ್ಮ ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಭರವಸೆಯನ್ನು ನೀಡಿದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 months ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago