ಕುಂದಾಪುರ:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಮತ್ತು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಮುಖ್ಯಮಂತ್ರಿ ಸಿದ್ದರಾಮ್ಯನವರನ್ನು ಬೆಂಗಳೂರಿನಲ್ಲಿ ಬುಧವಾರ ಭೇಟಿಮಾಡಿ ಕುಂದಾಪುರ ತಾಲೂಕಿನ ಗಂಗೊಳ್ಳಿ ವಾರ್ಪ್ ಬಂದರಿನಲ್ಲಿ ಸೋಮವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಸಂಕಷ್ಟಕ್ಕೆ ಈಡಾಗಿದ್ದ ಮೀನುಗಾರರಿಗೆ ಪರಿಹಾರ ನೀಡುವಂತೆ ಮನವಿಯನ್ನು ಸಲ್ಲಿಸಿದರು.ಈ ಸಂದರ್ಭ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರ ಸಂಸದ ಬಿ.ವೈ.ರಾಘವೇಂದ್ರ ಅವರು ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿ ಬಳಿಕ ಮಾತನಾಡಿ,ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಸಂಭವಿಸಿದ ತೂಫಾನ್,ಚಂಡಮಾರುತ ಹಾಗೂ ಇನ್ನಿತರೆ ಕಾರಣಗಳಿಂದ ಮೀನುಗಾರಿಕೆ ಸರಿಯಾಗಿ ನಡೆಯದೆ ಮೀನುಗಾರರು ಆರ್ಥಿಕ ನಷ್ಟವನ್ನು ಅನುಭವಿಸಿದ್ದಾರೆ.ಅದರ ನಡುವೆ ಗಂಗೊಳ್ಳಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಮೀನುಗಾರರು ಇನ್ನಷ್ಟು ಆಘಾತಕ್ಕೆ ಒಳಗಾಗಿದ್ದಾರೆ.ಪ್ರಸ್ತುತ ಅಗ್ನಿ ಅವಘಡದಲ್ಲಿ ಹಾನಿಗೊಳಗಾದ ಬೋಟ್ ಮತ್ತು ದೋಣಿಗಳ ಮಾಲೀಕರಿಗೆ ಅಂದಾಜು 10 ಕೋಟಿಗೂ ಅಧಿಕ ನಷ್ಟವಾಗಿದ್ದು,ಮೀನುಗಾರರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಗಿದೆ.ಮೀನುಗಾರರ ಜತೆ ಸದಾ ನಾವೀದ್ದೇವೆ ಎಂದು ಹೇಳಿದರು.
ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಮಾತನಾಡಿ,ದೇಶದ ಆರ್ಥಿಕ ಪ್ರಗತಿಗೆ ಮೀನುಗಾರರ ಕೊಡುಗೆ ಅಪಾರವಾದುದು.ಮೀನುಗಾರರಿಲ್ಲದೆ ನಾವಿಲ್ಲ.ಅವರ ನೋವಿನ ಜತೆ ಸದಾ ನಾವು ಭಾಗಿದಾರರಾಗುತ್ತೇವೆ.ಪರಿಹಾರವನ್ನು ದೊರಕಿಸಿ ಕೊಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು ಎಂದರು.
ಗಂಗೊಳ್ಳಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 9 ಮೀನುಗಾರಿಕಾ ಬೋಟ್,1 ಸಣ್ಣ ದೋಣಿ,4 ಡಿಂಗಿ ದೋಣಿಗಳು ಸಹಿತ 2ಬೈಕ್ ಸುಟ್ಟು ಭಸ್ಮವಾಗಿ ಹೋಗಿದೆ.ಅಂದಾಜು 10 ಕೋಟಿಗೂ ಅಧಿಕ ನಷ್ಟ ಉಂಟಾಗಿದೆ.
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…