ಕುಂದಾಪುರ

ಮೀನುಗಾರರಿಗೆ ಪರಿಹಾರ ನೀಡುವಂತೆ ಸಂಸದ ಬಿ.ವೈ.ರಾಘವೇಂದ್ರ ಮುಖ್ಯಮಂತ್ರಿಗಳಿಗೆ ಮನವಿ

Share

ಕುಂದಾಪುರ:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಮತ್ತು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಮುಖ್ಯಮಂತ್ರಿ ಸಿದ್ದರಾಮ್ಯನವರನ್ನು ಬೆಂಗಳೂರಿನಲ್ಲಿ ಬುಧವಾರ ಭೇಟಿಮಾಡಿ ಕುಂದಾಪುರ ತಾಲೂಕಿನ ಗಂಗೊಳ್ಳಿ ವಾರ್ಪ್ ಬಂದರಿನಲ್ಲಿ ಸೋಮವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಸಂಕಷ್ಟಕ್ಕೆ ಈಡಾಗಿದ್ದ ಮೀನುಗಾರರಿಗೆ ಪರಿಹಾರ ನೀಡುವಂತೆ ಮನವಿಯನ್ನು ಸಲ್ಲಿಸಿದರು.ಈ ಸಂದರ್ಭ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರ ಸಂಸದ ಬಿ.ವೈ.ರಾಘವೇಂದ್ರ ಅವರು ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿ ಬಳಿಕ ಮಾತನಾಡಿ,ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಸಂಭವಿಸಿದ ತೂಫಾನ್,ಚಂಡಮಾರುತ ಹಾಗೂ ಇನ್ನಿತರೆ ಕಾರಣಗಳಿಂದ ಮೀನುಗಾರಿಕೆ ಸರಿಯಾಗಿ ನಡೆಯದೆ ಮೀನುಗಾರರು ಆರ್ಥಿಕ ನಷ್ಟವನ್ನು ಅನುಭವಿಸಿದ್ದಾರೆ.ಅದರ ನಡುವೆ ಗಂಗೊಳ್ಳಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಮೀನುಗಾರರು ಇನ್ನಷ್ಟು ಆಘಾತಕ್ಕೆ ಒಳಗಾಗಿದ್ದಾರೆ.ಪ್ರಸ್ತುತ ಅಗ್ನಿ ಅವಘಡದಲ್ಲಿ ಹಾನಿಗೊಳಗಾದ ಬೋಟ್ ಮತ್ತು ದೋಣಿಗಳ ಮಾಲೀಕರಿಗೆ ಅಂದಾಜು 10 ಕೋಟಿಗೂ ಅಧಿಕ ನಷ್ಟವಾಗಿದ್ದು,ಮೀನುಗಾರರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಗಿದೆ.ಮೀನುಗಾರರ ಜತೆ ಸದಾ ನಾವೀದ್ದೇವೆ ಎಂದು ಹೇಳಿದರು.
ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಮಾತನಾಡಿ,ದೇಶದ ಆರ್ಥಿಕ ಪ್ರಗತಿಗೆ ಮೀನುಗಾರರ ಕೊಡುಗೆ ಅಪಾರವಾದುದು.ಮೀನುಗಾರರಿಲ್ಲದೆ ನಾವಿಲ್ಲ.ಅವರ ನೋವಿನ ಜತೆ ಸದಾ ನಾವು ಭಾಗಿದಾರರಾಗುತ್ತೇವೆ.ಪರಿಹಾರವನ್ನು ದೊರಕಿಸಿ ಕೊಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು ಎಂದರು.
ಗಂಗೊಳ್ಳಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 9 ಮೀನುಗಾರಿಕಾ ಬೋಟ್,1 ಸಣ್ಣ ದೋಣಿ,4 ಡಿಂಗಿ ದೋಣಿಗಳು ಸಹಿತ 2ಬೈಕ್ ಸುಟ್ಟು ಭಸ್ಮವಾಗಿ ಹೋಗಿದೆ.ಅಂದಾಜು 10 ಕೋಟಿಗೂ ಅಧಿಕ ನಷ್ಟ ಉಂಟಾಗಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

7 days ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago