ಕುಂದಾಪುರ

ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಸಂಪ್ರದಾಯದಂತೆ ಆಚರಣೆ,ಸಂಭ್ರಮದಿಂದ ಸಂಭ್ರಮಿಸಿದ ವಿದ್ಯಾರ್ಥಿಗಳು

Share

Advertisement
Advertisement

ಕುಂದಾಪುರ:ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು,ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ, ಹಾಗೂ ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆ,ಯಡಾಡಿ-ಮತ್ಯಾಡಿ ಇದರ ಸಹಯೋಗದಲ್ಲಿ ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ದೀಪಾವಳಿಯ ಸಾಂಪ್ರದಾಯಿಕ ಆಚರಣೆಗಳಾದ ಗೋಪೂಜೆ,ಬಲೀಂದ್ರ ಕೂಗುವುದು,ತುಳಸಿ ಪೂಜೆ,ಕೃಷಿ ಪರಿಕರ ಮತ್ತು ಸರಸ್ವತಿ ಪೂಜೆಯನ್ನು ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳೊಂದಿಗೆ ಆಚರಿಸಲಾಯಿತು.
ಕುಂದಕನ್ನಡದ ರಾಯಬಾರಿ,ಗ್ರಾವಿಟಿ ಆಂಗ್ಲಮಾಧ್ಯಮ ಶಾಲೆಯ ಅಧ್ಯಕ್ಷರಾಗಿರುವ ಮನು ಹಂದಾಡಿಯವರು ವಿದ್ಯಾರ್ಥಿಗಳಿಗೆ ದೀಪಾವಳಿ ಸಂದೇಶವನ್ನು ನೀಡುತ್ತಾ ಮಾತನಾಡಿ,ವಿದ್ಯಾರ್ಥಿಗಳಲ್ಲಿ ಭಾರತೀಯ ಸಂಸ್ಕøತಿ,ಪರಂಪರೆ ಬಗ್ಗೆ ಕಾಳಜಿ ಮತ್ತು ತಿಳುವಳಿಕೆ ಕಡಿಮೆಯಾಗುತ್ತಿದ್ದು ಎಕ್ಸಲೆಂಟ್ ಸಮೂಹ ಸಂಸ್ಥೆ ಹಮ್ಮಿಕೊಂಡಿರುವ ಗೋಪೂಜೆ,ತುಳಸಿ ಪೂಜೆ,ಸರಸ್ವತಿ ಪೂಜೆಯಂತಹ ದೀಪಾವಳಿಯ ಸಾಂಪ್ರದಾಯಿಕ ಪೂಜೆಯು ವಿದ್ಯಾರ್ಥಿಗಳಲ್ಲಿ ನಮ್ಮ ಸಂಸ್ಕøತಿ ಮತ್ತು ಆಚಾರ-ವಿಚಾರಗಳನ್ನು ಉಳಿಸಿ ಬೆಳೆಸಲು ಸಹಕಾರಿಯಾಗಲಿದೆ ಎಂದರು.
ಸಂಸ್ಥೆಯ ಸುಜ್ಞಾನ ಎಜುಕೇಶನಲ್ ಟ್ರಸ್ಟ್‍ನ ಅಧ್ಯಕ್ಷರಾಗಿರುವ ಡಾ. ರಮೇಶ ಶೆಟ್ಟಿ ಮಾತನಾqಡಿ,ನಮ್ಮ ಹಿರಿಯರು ಆಚರಿಸಿದ ಹಬ್ಬಗಳು,ಆಚರಣೆಗಳ ಮಹತ್ವ ವಿದ್ಯಾರ್ಥಿಗಳಿಗೆ ಸಾರಬೇಕು,ನಮ್ಮ ನಾಡು-ನುಡಿ, ನೆಲೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸಬೇಕು ಎಂಬ ಕಾರಣಕ್ಕಾಗಿ ಈ ಸಂಭ್ರಮಾಚರಣೆಯನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.
ಸಂಸ್ಥೆಯ ಖಜಾಂಚಿ ಭರತ್ ಶೆಟ್ಟಿ ಮಾತನಾಡಿ,ಸಂಸ್ಥೆಯ ವಿದ್ಯಾರ್ಥಿಗಳು ಮನೆಯವರನ್ನು ಬಿಟ್ಟು ವಿದ್ಯಾಭ್ಯಾಸಕ್ಕಾಗಿ ಹಾಸ್ಟೆಲ್‍ನಲ್ಲಿದ್ದಾರೆ ಈ ಸಂದರ್ಭದಲ್ಲಿ ಅವರಿಗೆ ಮನೆಯಲ್ಲಿ ಆಚರಿಸುವ ಯಾವುದೇ ಹಬ್ಬಗಳಿಂದ ವಂಚಿತರಾಗಬಾರದು ಎನ್ನುವ ಕಾರಣದಿಂದ ಎಲ್ಲಾ ಹಬ್ಬಗಳನ್ನು ಸಂಪ್ರದಾಯ ಬದ್ದವಾಗಿ ಆಚರಿಸಲಾಗುತ್ತದೆ ಎಂದರು. ಸಂಸ್ಥೆಯ ಕಾರ್ಯದರ್ಶಿ ಪ್ರತಾಪ್‍ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

Advertisement

ದೀಪಾವಳಿ ಸಾಂಪ್ರದಾಯಿಕ ಪೂಜೆ
ದೀಪಾವಳಿಯ ಆಚರಣೆಯ ಸಂದರ್ಭದಲ್ಲಿ ಕುಂದಾಪುರದ ಎಕ್ಸಲೆಂಟ್ ಕಾಲೇಜಿನ ಆವರಣ ಹಬ್ಬದಂತೆ ಕಂಗೊಳಿಸುತಿತ್ತು.ವಿದ್ಯಾರ್ಥಿಗಳೆಲ್ಲಾ ಸಾಂಪ್ರಾದಾಯಿಕ ಉಡುಗೆ-ತೊಡುಗೆಗಳನ್ನು ತೊಟ್ಟು ಬಹಳ ಉತ್ಸಾಹದಿಂದ ಹಬ್ಬದ ಆಚರಣೆಯಲ್ಲಿ ತೊಡಗಿಸಿಕೊಂಡಿದ್ದರು.
ಎಕ್ಸಲೆಂಟ್ ಆವರಣದಲ್ಲಿ ಗೋಪೂಜೆಗೆ ದನ ಮತ್ತು ಕರು ಶೃಂಗಾರಗೊಂಡಿರುವುದು ಎಲ್ಲರ ಕೂತುಹಲ ಕೆರಳಿಸಿತು. ಬೃಹತಾಕಾರದ ತುಳಸಿ ಕಟ್ಟೆಯನ್ನು ಹೂವಿನಿಂದ ಶೃಂಗಾರಗೊಳಿಸಲಾಗಿತ್ತು.
ಬಲೀಂದ್ರ ಕರೆಯುವ ವಿಧಿ – ವಿಧಾನಗಳನ್ನು ಸಂಪ್ರದಾಯಕ್ಕೆ ತಕ್ಕಂತೆ ಸಿದ್ಧಗೊಳಿಸಲಾಗಿತ್ತು. ಕೃಷಿ ಪರಿಕರಗಳಾದ ನೇಗಿಲು-ನೊಗ, ಹಾರೆ, ಕತ್ತಿ ಹಾಗೂ ಇತರ ಪರಿಕರಗಳನ್ನು ಪೂಜೆಗೆ ಸಿದ್ಧಗೊಳಿಸಿದ್ದು ವಿದ್ಯಾರ್ಥಿಗಳಿಗೆ ಹಳೆಯ ಕೃಷಿ ಪರಿಕರಗಳ ಬಗ್ಗೆ ಕುತೂಹಲ ಹೆಚ್ಚಿಸಿತು. ಒಟ್ಟಾರೆ ಅಪ್ಪಟ ಭಾರತೀಯ ಸಂಸ್ಕøತಿಯ ದೀಪಾವಳಿ ಎಕ್ಸಲೆಂಟ್ ಆವರಣದಲ್ಲಿ ಕಂಗೊಳಿಸುತ್ತಿದ್ದು ವಿದ್ಯಾರ್ಥಿಗಳೆಲ್ಲರೂ ಉತ್ಸಾಹಕರಾಗಿ ಓಡಾಡುತ್ತಿದ್ದು ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು. ಸಂಸ್ಕøತ ಉಪನ್ಯಾಸಕಿ ಶ್ರೀಮತಿ ಸುದಕ್ಷಿಣ, ಕನ್ನಡ ಉಪನ್ಯಾಸಕರಾದ ನಾಗರಾಜ ಶೆಟ್ಟಿ ಮತ್ತು ಗುರುಪ್ರಸಾದ ಅವರು ಕಾರ್ಯಕ್ರಮ ನಿರ್ವಹಿಸಿದರು. ಹಬ್ಬದ ಅಂಗವಾಗಿ ವಿಶೇಷ ಭೋಜನ ಏರ್ಪಡಿಸಲಾಗಿತ್ತು.

Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

18 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

18 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

19 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

22 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago