ಕುಂದಾಪುರ

ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಸಂಗ್ರಹಣಾ ವಾಹನ ಉದ್ಘಾಟನೆ

Share

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಸಂಗ್ರಹಣಾ ವಾಹನದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಒಡೆಯರಮಠ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಶುಕ್ರವಾರ ನಡೆಯಿತು.ಭವ್ಯ ಮೆರವಣಿಗೆ ಮೂಲಕ ಅತಿಥಿಗಳನ್ನು ಬರಮಾಡಿಕೊಳ್ಳಲಾಯಿತು.ಕೊಂಬು ಕಹಳೆ ವಾದನ ಮೆರವಣಿಗೆಯ ಸೊಬಗನ್ನು ಹೆಚ್ಚಿಸಿತು.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಅವರು ಹಾಲು ಸಂಗ್ರಹಣಾ ಸಂಚಾರಿ ವಾಹನವನ್ನು
ಉದ್ಘಾಟಿಸಿ ಮಾತನಾಡಿ,
ಹಳ್ಳಿ ಭಾಗದ ಜನರು ಕೃಷಿ ಮತ್ತು ಹೈನುಗಾರಿಕೆಯಲ್ಲಿ ತೊಡಗಿ ಕೊಳ್ಳುವುದರಿಂದ ಬದುಕು, ಸಂಸ್ಕೃತಿ ಮತ್ತು ಜೀವನ ಪದ್ಧತಿ ಉಳಿಯುತ್ತದೆ.ಹೈನುಗಾರಿಕೆಯನ್ನು ಉದ್ಯೋಗವನ್ನಾಗಿ ಪರಿಗಣಿಸಿದಾಗ ಮಾತ್ರ ಲಾಭಾಂಶಗಳಿಸಲು ಸಾಧ್ಯವಿದೆ ಎಂದು ಹೇಳಿದರು.ಹಳ್ಳಿಗಳಲ್ಲಿ ಕ್ಷೀರ ಕ್ರಾಂತಿ ಆಗಬೇಕೆಂದರು.ಹಾಲು ಸಂಗ್ರಹಣಾ ಸಂಚಾರಿ ವಾಹನದಿಂದ ಹೈನುಗಾರಿಕೆಯಲ್ಲಿ ತೊಡಗಿ ಕೊಂಡಿರುವ ಹಿರಿಯ ಮಹಿಳೆಯರಿಗೆ ಸಾಕಷ್ಟು ಅನುಕೂಲ ವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರು ಸಾಕಾಣಿಕೆಗೆ ಉತ್ತೇಜನ ಹಾಗೂ ದೂರದ ಊರುಗಳಿಂದ ದನಗಳನ್ನು ಖರೀದಿಸಲು ರೈತರಿಗೆ ಧನಸಹಾಯವನ್ನು ನೀಡುವಂತಹ ಯೋಜನೆಗಳನ್ನು ಜಾರಿ ಮಾಡಲಾಗಿದೆ ಎಂದು ಹೇಳಿದರು.ಹಾಲಿಗೆ ಕನಿಷ್ಠ 50.ರೂ ಮಾರುಕಟ್ಟೆ ಮೌಲ್ಯ ರೈತರಿಗೆ ದೊರಕುವಂತೆ ಆಗಬೇಕು ಇದರಿಂದ ಹಾಲು ಉತ್ಪಾದನೆಯನ್ನು ಕೂಡ ಹೆಚ್ಚಿಸಬಹುದು ರೈತರಿಗೂ ಸಹಾಯವಾಗುತ್ತದೆ ಎಂದರು.

ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ನಿರ್ದೇಶಕರಾದ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಶುಭಾಸಂಶನೆಗೈದು ಮಾತನಾಡಿ,ಸಹಕಾರಿ ಸಂಘ ಸಂಸ್ಥೆಗಳು ಯಾವತ್ತೂ ಲಾಭದ ನಿರೀಕ್ಷೆಯಿಂದ ಕೆಲಸ ಮಾಡದೆ ಹೈನುಗಾರರ ಒಳಿತಿಗಾಗಿ ಶ್ರಮಿಸುತ್ತಿದೆ.ಸಹಕಾರಿ ಕ್ಷೇತ್ರದ ಬೆಳವಣಿಗೆಯನ್ನು ನೋಡಿದಾಗ ಹಿರಿಯರ ಶ್ರಮವನ್ನು ನೆನೆಯ ಬೇಕಾಗುತ್ತದೆ.ಹಾಲಿನ ಕ್ಷೇತ್ರ ಎನ್ನುವುದು ಅದ್ಭುತವಾದ ಕ್ಷೇತ್ರವಾಗಿದ್ದು ಗ್ರಾಮೀಣ ಭಾಗದ ಜನರಿಗೆ ಬದುಕನ್ನು ಕಟ್ಟಿಕೊಳ್ಳಲು ಸಹಕಾರವನ್ನು ನೀಡಿದೆ ಎಂದು ಹೇಳಿದರು.

ಸಭಾ ಅಧ್ಯಕ್ಷೆಯನ್ನು ವಹಿಸಿದ್ದ ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ ಮಾತನಾಡಿ,ಹೈನುಗಾರ ಮಹಿಳೆಯರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಇವೊಂದು ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗಿದೆ ಎಲ್ಲರೂ ಉತ್ತಮವಾದ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ರೈತರು ಬೆಳೆದಾಗ ಮಾತ್ರ ಸಂಘವೂ ಅಭಿವೃದ್ಧಿ ಹೊಂದಲಿದೆ ಸದಾ ನಿಮ್ಮೆಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಉಪ ವ್ಯವಸ್ಥಾಪಕ ಡಾ.ಮಾಧವ ಐತಾಳ್ ,ಕಿ.ಹಾ.ಉ.ಸ.ಸಂಘ ಕಿರಿಮಂಜೇಶ್ವರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗುಣವಂತ ನಾಯರಿ ಮತ್ತು ಉಪಾಧ್ಯಕ್ಷ ಪದ್ಮನಾಭ ಹೆಬ್ಬಾರ್,ಬೈಂದೂರು ವಲಯ ವ್ಯವಸ್ಥಾಪಕ ರಾಜಾರಾಂ, ಆಡಳಿತ ಮಂಡಳಿ ಸದಸ್ಯರಾದ ವಿಶ್ವನಾಥ್ ಹವಾಲ್ದಾರ್, ಗೋಪಾಲ ನುಕ್ಕಿತ್ತಾರು, ರಮೇಶ್ ನುಕ್ಕಿತ್ತಾರು, ರಾಮಚಂದ್ರ ನಾವಡ, ಗೋವಿಂದ ಪೂಜಾರಿ, ರೇಣುಕಾ ನಾಯರಿ,ನೀಲು, ಲಕ್ಷ್ಮೀ,ಸರೋಜಾ ಹಾಗೂ ರೈತ ಮುಖಂಡರ ಈಶ್ವರ ದೇವಾಡಿಗ, ಹಿರಿಯರಾದ ಆನಂದ ಪೂಜಾರಿ, ಹಾಲು ಉತ್ಪಾದಕ ಸದಸ್ಯರು ಉಪಸ್ಥಿತರಿದ್ದರು.ಸಂಘದ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಸುಮಂಗಲ ಕಾರಂತ ಪ್ರಾರ್ಥಿಸಿದರು .ಗೋವಿಂದ ನಾಯ್ಕ್ ನಿರೂಪಿಸಿದರು.ರತನ್ ಬಿಜೂರು ಸಹಕರಿಸಿದರು.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗುಣವಂತ ನಾಯರಿ ವಂದಿಸಿದರು.

Advertisement

Share
Team Kundapur Times

Recent Posts

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

6 days ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

3 months ago