ಕುಂದಾಪುರ

ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಸಂಗ್ರಹಣಾ ವಾಹನ ಉದ್ಘಾಟನೆ

Share

Advertisement
Advertisement
Advertisement

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಸಂಗ್ರಹಣಾ ವಾಹನದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಒಡೆಯರಮಠ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಶುಕ್ರವಾರ ನಡೆಯಿತು.ಭವ್ಯ ಮೆರವಣಿಗೆ ಮೂಲಕ ಅತಿಥಿಗಳನ್ನು ಬರಮಾಡಿಕೊಳ್ಳಲಾಯಿತು.ಕೊಂಬು ಕಹಳೆ ವಾದನ ಮೆರವಣಿಗೆಯ ಸೊಬಗನ್ನು ಹೆಚ್ಚಿಸಿತು.

Advertisement

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಅವರು ಹಾಲು ಸಂಗ್ರಹಣಾ ಸಂಚಾರಿ ವಾಹನವನ್ನು
ಉದ್ಘಾಟಿಸಿ ಮಾತನಾಡಿ,
ಹಳ್ಳಿ ಭಾಗದ ಜನರು ಕೃಷಿ ಮತ್ತು ಹೈನುಗಾರಿಕೆಯಲ್ಲಿ ತೊಡಗಿ ಕೊಳ್ಳುವುದರಿಂದ ಬದುಕು, ಸಂಸ್ಕೃತಿ ಮತ್ತು ಜೀವನ ಪದ್ಧತಿ ಉಳಿಯುತ್ತದೆ.ಹೈನುಗಾರಿಕೆಯನ್ನು ಉದ್ಯೋಗವನ್ನಾಗಿ ಪರಿಗಣಿಸಿದಾಗ ಮಾತ್ರ ಲಾಭಾಂಶಗಳಿಸಲು ಸಾಧ್ಯವಿದೆ ಎಂದು ಹೇಳಿದರು.ಹಳ್ಳಿಗಳಲ್ಲಿ ಕ್ಷೀರ ಕ್ರಾಂತಿ ಆಗಬೇಕೆಂದರು.ಹಾಲು ಸಂಗ್ರಹಣಾ ಸಂಚಾರಿ ವಾಹನದಿಂದ ಹೈನುಗಾರಿಕೆಯಲ್ಲಿ ತೊಡಗಿ ಕೊಂಡಿರುವ ಹಿರಿಯ ಮಹಿಳೆಯರಿಗೆ ಸಾಕಷ್ಟು ಅನುಕೂಲ ವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರು ಸಾಕಾಣಿಕೆಗೆ ಉತ್ತೇಜನ ಹಾಗೂ ದೂರದ ಊರುಗಳಿಂದ ದನಗಳನ್ನು ಖರೀದಿಸಲು ರೈತರಿಗೆ ಧನಸಹಾಯವನ್ನು ನೀಡುವಂತಹ ಯೋಜನೆಗಳನ್ನು ಜಾರಿ ಮಾಡಲಾಗಿದೆ ಎಂದು ಹೇಳಿದರು.ಹಾಲಿಗೆ ಕನಿಷ್ಠ 50.ರೂ ಮಾರುಕಟ್ಟೆ ಮೌಲ್ಯ ರೈತರಿಗೆ ದೊರಕುವಂತೆ ಆಗಬೇಕು ಇದರಿಂದ ಹಾಲು ಉತ್ಪಾದನೆಯನ್ನು ಕೂಡ ಹೆಚ್ಚಿಸಬಹುದು ರೈತರಿಗೂ ಸಹಾಯವಾಗುತ್ತದೆ ಎಂದರು.

ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ನಿರ್ದೇಶಕರಾದ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಶುಭಾಸಂಶನೆಗೈದು ಮಾತನಾಡಿ,ಸಹಕಾರಿ ಸಂಘ ಸಂಸ್ಥೆಗಳು ಯಾವತ್ತೂ ಲಾಭದ ನಿರೀಕ್ಷೆಯಿಂದ ಕೆಲಸ ಮಾಡದೆ ಹೈನುಗಾರರ ಒಳಿತಿಗಾಗಿ ಶ್ರಮಿಸುತ್ತಿದೆ.ಸಹಕಾರಿ ಕ್ಷೇತ್ರದ ಬೆಳವಣಿಗೆಯನ್ನು ನೋಡಿದಾಗ ಹಿರಿಯರ ಶ್ರಮವನ್ನು ನೆನೆಯ ಬೇಕಾಗುತ್ತದೆ.ಹಾಲಿನ ಕ್ಷೇತ್ರ ಎನ್ನುವುದು ಅದ್ಭುತವಾದ ಕ್ಷೇತ್ರವಾಗಿದ್ದು ಗ್ರಾಮೀಣ ಭಾಗದ ಜನರಿಗೆ ಬದುಕನ್ನು ಕಟ್ಟಿಕೊಳ್ಳಲು ಸಹಕಾರವನ್ನು ನೀಡಿದೆ ಎಂದು ಹೇಳಿದರು.

ಸಭಾ ಅಧ್ಯಕ್ಷೆಯನ್ನು ವಹಿಸಿದ್ದ ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ ಮಾತನಾಡಿ,ಹೈನುಗಾರ ಮಹಿಳೆಯರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಇವೊಂದು ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗಿದೆ ಎಲ್ಲರೂ ಉತ್ತಮವಾದ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ರೈತರು ಬೆಳೆದಾಗ ಮಾತ್ರ ಸಂಘವೂ ಅಭಿವೃದ್ಧಿ ಹೊಂದಲಿದೆ ಸದಾ ನಿಮ್ಮೆಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಉಪ ವ್ಯವಸ್ಥಾಪಕ ಡಾ.ಮಾಧವ ಐತಾಳ್ ,ಕಿ.ಹಾ.ಉ.ಸ.ಸಂಘ ಕಿರಿಮಂಜೇಶ್ವರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗುಣವಂತ ನಾಯರಿ ಮತ್ತು ಉಪಾಧ್ಯಕ್ಷ ಪದ್ಮನಾಭ ಹೆಬ್ಬಾರ್,ಬೈಂದೂರು ವಲಯ ವ್ಯವಸ್ಥಾಪಕ ರಾಜಾರಾಂ, ಆಡಳಿತ ಮಂಡಳಿ ಸದಸ್ಯರಾದ ವಿಶ್ವನಾಥ್ ಹವಾಲ್ದಾರ್, ಗೋಪಾಲ ನುಕ್ಕಿತ್ತಾರು, ರಮೇಶ್ ನುಕ್ಕಿತ್ತಾರು, ರಾಮಚಂದ್ರ ನಾವಡ, ಗೋವಿಂದ ಪೂಜಾರಿ, ರೇಣುಕಾ ನಾಯರಿ,ನೀಲು, ಲಕ್ಷ್ಮೀ,ಸರೋಜಾ ಹಾಗೂ ರೈತ ಮುಖಂಡರ ಈಶ್ವರ ದೇವಾಡಿಗ, ಹಿರಿಯರಾದ ಆನಂದ ಪೂಜಾರಿ, ಹಾಲು ಉತ್ಪಾದಕ ಸದಸ್ಯರು ಉಪಸ್ಥಿತರಿದ್ದರು.ಸಂಘದ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಸುಮಂಗಲ ಕಾರಂತ ಪ್ರಾರ್ಥಿಸಿದರು .ಗೋವಿಂದ ನಾಯ್ಕ್ ನಿರೂಪಿಸಿದರು.ರತನ್ ಬಿಜೂರು ಸಹಕರಿಸಿದರು.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗುಣವಂತ ನಾಯರಿ ವಂದಿಸಿದರು.

Advertisement
Advertisement

Share
Team Kundapur Times

Recent Posts

ಶ್ರೀ ಕೃಷ್ಣಾನಂದತೀರ್ಥಮಹಾಸ್ವಾಮಿ ಗೋಪಾಲಕೃಷ್ಣ ದೇವಸ್ಥಾನಕ್ಕೆ ಭೇಟಿ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…

1 week ago

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ “ಐಕ್ಯಂ” 2k25 ಕಾರ್ಯಕ್ರಮ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…

1 week ago

ಯುವಕ ಮಂಡಲ ತ್ರಾಸಿ 59ನೇ ವಾರ್ಷಿಕೋತ್ಸವ ಸಂಭ್ರಮ

ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…

2 weeks ago

ಕೃಷ್ಣ ಮಠ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ

ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…

2 weeks ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕ ಕ್ರೀಡಾಕೂಟ 2024-2025

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…

2 weeks ago

ಸ್ಕೈಡೈನಿಂಗ್ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಸಚಿವ

ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…

3 weeks ago