ಕುಂದಾಪುರ

ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಸಂಗ್ರಹಣಾ ವಾಹನ ಉದ್ಘಾಟನೆ

Share

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಸಂಗ್ರಹಣಾ ವಾಹನದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಒಡೆಯರಮಠ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಶುಕ್ರವಾರ ನಡೆಯಿತು.ಭವ್ಯ ಮೆರವಣಿಗೆ ಮೂಲಕ ಅತಿಥಿಗಳನ್ನು ಬರಮಾಡಿಕೊಳ್ಳಲಾಯಿತು.ಕೊಂಬು ಕಹಳೆ ವಾದನ ಮೆರವಣಿಗೆಯ ಸೊಬಗನ್ನು ಹೆಚ್ಚಿಸಿತು.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಅವರು ಹಾಲು ಸಂಗ್ರಹಣಾ ಸಂಚಾರಿ ವಾಹನವನ್ನು
ಉದ್ಘಾಟಿಸಿ ಮಾತನಾಡಿ,
ಹಳ್ಳಿ ಭಾಗದ ಜನರು ಕೃಷಿ ಮತ್ತು ಹೈನುಗಾರಿಕೆಯಲ್ಲಿ ತೊಡಗಿ ಕೊಳ್ಳುವುದರಿಂದ ಬದುಕು, ಸಂಸ್ಕೃತಿ ಮತ್ತು ಜೀವನ ಪದ್ಧತಿ ಉಳಿಯುತ್ತದೆ.ಹೈನುಗಾರಿಕೆಯನ್ನು ಉದ್ಯೋಗವನ್ನಾಗಿ ಪರಿಗಣಿಸಿದಾಗ ಮಾತ್ರ ಲಾಭಾಂಶಗಳಿಸಲು ಸಾಧ್ಯವಿದೆ ಎಂದು ಹೇಳಿದರು.ಹಳ್ಳಿಗಳಲ್ಲಿ ಕ್ಷೀರ ಕ್ರಾಂತಿ ಆಗಬೇಕೆಂದರು.ಹಾಲು ಸಂಗ್ರಹಣಾ ಸಂಚಾರಿ ವಾಹನದಿಂದ ಹೈನುಗಾರಿಕೆಯಲ್ಲಿ ತೊಡಗಿ ಕೊಂಡಿರುವ ಹಿರಿಯ ಮಹಿಳೆಯರಿಗೆ ಸಾಕಷ್ಟು ಅನುಕೂಲ ವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರು ಸಾಕಾಣಿಕೆಗೆ ಉತ್ತೇಜನ ಹಾಗೂ ದೂರದ ಊರುಗಳಿಂದ ದನಗಳನ್ನು ಖರೀದಿಸಲು ರೈತರಿಗೆ ಧನಸಹಾಯವನ್ನು ನೀಡುವಂತಹ ಯೋಜನೆಗಳನ್ನು ಜಾರಿ ಮಾಡಲಾಗಿದೆ ಎಂದು ಹೇಳಿದರು.ಹಾಲಿಗೆ ಕನಿಷ್ಠ 50.ರೂ ಮಾರುಕಟ್ಟೆ ಮೌಲ್ಯ ರೈತರಿಗೆ ದೊರಕುವಂತೆ ಆಗಬೇಕು ಇದರಿಂದ ಹಾಲು ಉತ್ಪಾದನೆಯನ್ನು ಕೂಡ ಹೆಚ್ಚಿಸಬಹುದು ರೈತರಿಗೂ ಸಹಾಯವಾಗುತ್ತದೆ ಎಂದರು.

ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ನಿರ್ದೇಶಕರಾದ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಶುಭಾಸಂಶನೆಗೈದು ಮಾತನಾಡಿ,ಸಹಕಾರಿ ಸಂಘ ಸಂಸ್ಥೆಗಳು ಯಾವತ್ತೂ ಲಾಭದ ನಿರೀಕ್ಷೆಯಿಂದ ಕೆಲಸ ಮಾಡದೆ ಹೈನುಗಾರರ ಒಳಿತಿಗಾಗಿ ಶ್ರಮಿಸುತ್ತಿದೆ.ಸಹಕಾರಿ ಕ್ಷೇತ್ರದ ಬೆಳವಣಿಗೆಯನ್ನು ನೋಡಿದಾಗ ಹಿರಿಯರ ಶ್ರಮವನ್ನು ನೆನೆಯ ಬೇಕಾಗುತ್ತದೆ.ಹಾಲಿನ ಕ್ಷೇತ್ರ ಎನ್ನುವುದು ಅದ್ಭುತವಾದ ಕ್ಷೇತ್ರವಾಗಿದ್ದು ಗ್ರಾಮೀಣ ಭಾಗದ ಜನರಿಗೆ ಬದುಕನ್ನು ಕಟ್ಟಿಕೊಳ್ಳಲು ಸಹಕಾರವನ್ನು ನೀಡಿದೆ ಎಂದು ಹೇಳಿದರು.

ಸಭಾ ಅಧ್ಯಕ್ಷೆಯನ್ನು ವಹಿಸಿದ್ದ ಕಿರಿಮಂಜೇಶ್ವರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ ಮಾತನಾಡಿ,ಹೈನುಗಾರ ಮಹಿಳೆಯರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಇವೊಂದು ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗಿದೆ ಎಲ್ಲರೂ ಉತ್ತಮವಾದ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ರೈತರು ಬೆಳೆದಾಗ ಮಾತ್ರ ಸಂಘವೂ ಅಭಿವೃದ್ಧಿ ಹೊಂದಲಿದೆ ಸದಾ ನಿಮ್ಮೆಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಉಪ ವ್ಯವಸ್ಥಾಪಕ ಡಾ.ಮಾಧವ ಐತಾಳ್ ,ಕಿ.ಹಾ.ಉ.ಸ.ಸಂಘ ಕಿರಿಮಂಜೇಶ್ವರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗುಣವಂತ ನಾಯರಿ ಮತ್ತು ಉಪಾಧ್ಯಕ್ಷ ಪದ್ಮನಾಭ ಹೆಬ್ಬಾರ್,ಬೈಂದೂರು ವಲಯ ವ್ಯವಸ್ಥಾಪಕ ರಾಜಾರಾಂ, ಆಡಳಿತ ಮಂಡಳಿ ಸದಸ್ಯರಾದ ವಿಶ್ವನಾಥ್ ಹವಾಲ್ದಾರ್, ಗೋಪಾಲ ನುಕ್ಕಿತ್ತಾರು, ರಮೇಶ್ ನುಕ್ಕಿತ್ತಾರು, ರಾಮಚಂದ್ರ ನಾವಡ, ಗೋವಿಂದ ಪೂಜಾರಿ, ರೇಣುಕಾ ನಾಯರಿ,ನೀಲು, ಲಕ್ಷ್ಮೀ,ಸರೋಜಾ ಹಾಗೂ ರೈತ ಮುಖಂಡರ ಈಶ್ವರ ದೇವಾಡಿಗ, ಹಿರಿಯರಾದ ಆನಂದ ಪೂಜಾರಿ, ಹಾಲು ಉತ್ಪಾದಕ ಸದಸ್ಯರು ಉಪಸ್ಥಿತರಿದ್ದರು.ಸಂಘದ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಸುಮಂಗಲ ಕಾರಂತ ಪ್ರಾರ್ಥಿಸಿದರು .ಗೋವಿಂದ ನಾಯ್ಕ್ ನಿರೂಪಿಸಿದರು.ರತನ್ ಬಿಜೂರು ಸಹಕರಿಸಿದರು.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗುಣವಂತ ನಾಯರಿ ವಂದಿಸಿದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago